Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಮುದ್ರದಲ್ಲಿ ಪತ್ತೆಯಾಯ್ತು 26 ಬಾಲಕಿಯರ...

ಸಮುದ್ರದಲ್ಲಿ ಪತ್ತೆಯಾಯ್ತು 26 ಬಾಲಕಿಯರ ಶವ!

ವಾರ್ತಾಭಾರತಿವಾರ್ತಾಭಾರತಿ7 Nov 2017 9:19 PM IST
share
ಸಮುದ್ರದಲ್ಲಿ ಪತ್ತೆಯಾಯ್ತು 26 ಬಾಲಕಿಯರ ಶವ!

ರೋಮ್ (ಇಟಲಿ), ನ. 7: ಮೆಡಿಟರೇನಿಯನ್ ಸಮುದ್ರದಲ್ಲಿ 26 ಹದಿಹರಯದ ಬಾಲಕಿಯರ ಮೃತದೇಹಗಳು ಪತ್ತೆಯಾಗಿದ್ದು, ಅವರ ಸಾವಿನ ಕಾರಣದ ಬಗ್ಗೆ ಇಟಲಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

14ರಿಂದ 18 ವರ್ಷದ ನಡುವಿನ ಬಾಲಕಿಯರು ನೈಜರ್ ಮತ್ತು ನೈಜೀರಿಯದ ವಲಸಿಗರಾಗಿರಬೇಕೆಂದು ಭಾವಿಸಲಾಗಿದೆ. ಅವರು ಕಳೆದ ವಾರಾಂತ್ಯದಲ್ಲಿ ಲಿಬಿಯದಿಂದ ಯುರೋಪ್‌ಗೆ ಈ ಅಪಾಯಕಾರಿ ಸಮುದ್ರ ಮಾರ್ಗದಲ್ಲಿ ಪ್ರಯಾಣ ಕೈಗೊಂಡಿರಬೇಕೆಂದು ಹೇಳಲಾಗಿದೆ.

ಬಾಲಕಿಯರ ಶವಪರೀಕ್ಷೆಗಳನ್ನು ಮಂಗಳವಾರ ನಡೆಸಲಾಗುವುದು ಹಾಗೂ ಅವರಿಗೆ ಹಿಂಸೆ ನೀಡಲಾಗಿದೆಯೇ ಅಥವಾ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆಯೇ ಎಂಬ ಬಗ್ಗೆ ಕೋರೊನರ್‌ಗಳು ತನಿಖೆ ನಡೆಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ರಾತ್ರಿ ತಿಳಿಸಿದರು.

ಸಣ್ಣ ರಬ್ಬರ್ ದೋಣಿಯೊಂದರ ಸಮೀಪದಲ್ಲಿ ಈ ಬಾಲಕಿಯರ ಶವಗಳು ಪತ್ತೆಯಾಗಿವೆ. ರಕ್ಷಣಾ ತಂಡಗಳು ಬಂದಾಗ ದೋಣಿಯು ಹೆಚ್ಚು ಕಡಿಮೆ ಸಂಪೂರ್ಣವಾಗಿ ಮುಳುಗಿತ್ತು.

ಅದೇ ವೇಳೆ, ಕಳೆದ ವಾರಾಂತ್ಯದಲ್ಲಿ ಇತರ ಮೂರು ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಟ್ಟು 400 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ 90 ಮಂದಿ ಮಹಿಳೆಯರು ಮತ್ತು 52 ಅಪ್ರಾಪ್ತ ವಯಸ್ಕರು.

ಹೊಸ ಜೀವನ ಅರಸುತ್ತಾ 2,839 ಮಂದಿ ಸಮುದ್ರದಲ್ಲಿ ಮುಳುಗಿದರು

ಈ ವರ್ಷ ಮೆಡಿಟರೇನಿಯನ್ ಸಮುದ್ರವನ್ನು ದಾಟಿ ಯುರೋಪ್‌ಗೆ ಸೇರುವ ಹಾಗೂ ಆ ಮೂಲಕ ಹೊಸಜೀವನವನ್ನು ಆರಂಭಿಸುವ ತವಕದಲ್ಲಿ 2,839 ವಲಸಿಗರು ಸಮುದ್ರದಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ಒಟ್ಟು 1,50,982 ವಲಸಿಗರು ಸುರಕ್ಷಿತವಾಗಿ ಯುರೋಪ್ ತೀರಗಳನ್ನು ಸೇರಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ ತಿಳಿಸಿದೆ. ಈ ಪೈಕಿ 74 ಶೇಕಡ ಮಂದಿ ಇಟಲಿಯಲ್ಲಿ ತಳವೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X