Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಲರಪಟ್ನ ನದಿಯಲ್ಲಿ ವಿದ್ಯಾರ್ಥಿಗಳ...

ಮೂಲರಪಟ್ನ ನದಿಯಲ್ಲಿ ವಿದ್ಯಾರ್ಥಿಗಳ ಸಾವಿಗೆ ಮರಳು ಮಾಫಿಯಾ ಕಾರಣ: ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ7 Nov 2017 10:49 PM IST
share

ಮಂಗಳೂರು, ನ. 7: ಮೂಲರಪಟ್ನ ಪಲ್ಗುಣಿ ನದಿಯಲ್ಲಿ ಈಜಾಡಲು ಹೋದ ಹದಿಹರೆಯದ ಐವರು ವಿದ್ಯಾರ್ಥಿಗಳ ಸಾವಿಗೆ ಅಕ್ರಮ ಮರಳುಗಾರಿಕೆಯೇ ಕಾರಣ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಸರಕಾರದ ವಿವಿಧ ಇಲಾಖೆ, ರಾಜಕೀಯ ನಾಯಕರ ಬೆಂಬಲದಿಂದ ಮರಳು ಮಾಫಿಯಾ ಜೆಸಿಬಿ, ಹಿಟಾಚಿ, ಡ್ರೆಜ್ಜಿಂಗ್ ಬಳಸಿ ಅಕ್ರಮವಾಗಿ ಮರಳುಗಾರಿಕೆ ನಡೆಸಿದ್ದು, ಅದರಿಂದ ಉಂಟಾದ ಆಳವಾದ ಗುಂಡಿಗಳಿಗೆ ಸಿಲುಕಿ ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಮೂಲರಪಟ್ನ, ಕುಪ್ಪೆಪದವು, ಮಳಲಿ ಸಹಿತ ಫಲ್ಗುಣಿ ನದಿಯ ಉದ್ದಕ್ಕೂ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ರಾಜಕಾರಣಿಗಳು, ಪೊಲೀಸರು, ಗಣಿ ಇಲಾಖೆ ಸಹಿತ ಸಂಬಂಧಪಟ್ಟ ವಿವಿಧ ಇಲಾಖೆಗಳ ಶಾಮೀಲಾತಿಯಿಂದ ನಡೆಯುವ ಅಕ್ರಮ ಮರಳುಗಾರಿಕೆ, ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಮರಳು ಸಾಗಾಟದಿಂದ ಮಾಫಿಯಾ ರೀತಿ ಬೆಳೆದಿದೆ . ಹಗಲು ರಾತ್ರಿ ನಡೆಸುವ ಮರಳುಗಾರಿಕೆಯಿಂದ ಫಲ್ಗುಣಿ ನದಿ ಅಪಾಯಕ್ಕೆ ಗುರಿಯಾಗಿದೆ. ಈ ಕುರಿತು ಧ್ವನಿ ಎತ್ತುವ ಸ್ಥಳೀಯರನ್ನು ಮರಳು ಮಾಫಿಯಾ ತೋಳ್ಬಲ ಬಳಸಿ ಬಾಯಿ ಮುಚ್ಚಿಸುತ್ತದೆ ಎಂದವರು ಆರೋಪಿಸಿದ್ದಾರೆ.

ಈ ಅಕ್ರಮಗಳ ವಿರುದ್ದ ಡಿವೈಎಫ್‌ಐ ಕಳೆದ ಮೇ ತಿಂಗಳಲ್ಲಿ ಸತತವಾಗಿ ಧ್ವನಿ ಎತ್ತಿ ಜೀವನದಿ ಫಲ್ಗುಣಿ ಉಳಿಸಿ ಅಭಿಯಾನವನ್ನೇ ನಡೆಸಿತ್ತು. ಆ ಸಂದರ್ಭ ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಅಕ್ರಮ ಮರಳುಗಾರಿಕೆ, ಮರಳು ಸಂಗ್ರಹಗಳ ಮೇಲೆ ದಾಳಿ ನಡೆದಿದ್ದವು, ನಂತರ ವಶಪಡಿಸಿಕೊಂಡ ಮರಳನ್ನು ಟೆಂಡರ್ ನಾಟಕದ ಮೂಲಕ ಅದೇ ಮರಳು ಮಾಫಿಯಾಕ್ಕೆ ಬಿಟ್ಟುಕೊಡಲಾಗಿತ್ತು. ಆ ನಂತರವೂ ಯಂತ್ರಗಳನ್ನು ಬಳಸಿ ಮರಳುಗಾರಿಕೆ ಅವ್ಯಾಹತವಾಗಿ ಮುಂದುವರಿದ್ದು, ಜನ ಅಸಹಾಯಕತೆಯಿಂದ ಮೌನವಹಿಸಿದ್ದರು. ಈಗ ಐವರು ವಿದ್ಯಾರ್ಥಿಗಳು ಅದೇ ಅಕ್ರಮ ಮರಳುಗಾರಿಕೆಯಿಂದ ನಿರ್ಮಾಣವಾದ ಕೃತಕ ಗುಂಡಿಗಳಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿಂದೆಯೂ ಬಂಟ್ವಾಳ, ಫರಂಗಿಪೇಟೆ ಭಾಗದಲ್ಲಿ ಇದೇ ರೀತಿ ಅಕ್ರಮ ಮರಳುಗಾರಿಕೆಯಿಂದ ನಿರ್ಮಾಣವಾದ ಗುಂಡಿಗೆ ಬಿದ್ದು ಹಲವು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದ್ದರಿಂದ ದುರಂತ ಸಾವುಗಳ ಸರಣಿ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.

ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಆರ್ಥಿಕ ಪರಿಹಾರ ಒದಗಿಸಬೇಕು, ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಅಕ್ರಮ ಮರಳು ದಂಧೆಕೋರರ ಮೇಲೆ ಸಾವಿನ ಹೊಣೆ ಹೊರಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಅಕ್ರಮ ಮರಳುಗಾರಿಕೆಯೊಂದಿಗೆ ಶಾಮೀಲಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಕಟ್ಟುನಿಟ್ಟಿನ ನಿಷೇಧ ಹೇರಬೇಕು ಎಂದು ಮುನೀರ್ ಕಾಟಿಪಳ್ಳ ಪ್ರಕರಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X