Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ನಿರಾಳ’ ಎಂದು ಮಾಡಿರುವ ನೋಟು ರದ್ದತಿ...

‘ನಿರಾಳ’ ಎಂದು ಮಾಡಿರುವ ನೋಟು ರದ್ದತಿ ‘ಕರಾಳ’ವಾಗಿದೆ-ಶಕುಂತಳಾ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ8 Nov 2017 7:55 PM IST
share
‘ನಿರಾಳ’ ಎಂದು ಮಾಡಿರುವ ನೋಟು ರದ್ದತಿ ‘ಕರಾಳ’ವಾಗಿದೆ-ಶಕುಂತಳಾ ಶೆಟ್ಟಿ

ಪುತ್ತೂರು, ನ. 8: ನಿರಾಳ ಎಂದೆನ್ನಲಾಗಿದ್ದ ನೋಟು ರದ್ದತಿಯು ಜನತೆಗೆ ಕರಾಳವಾಗಿ ಪರಿಣಮಿಸಿದೆ. ನೋಟು ಅಮಾನ್ಯದಿಂದ ಜನತೆ ಅನುಭವಿಸಿದ ಕಷ್ಟ ನಷ್ಟಗಳು ಅಚ್ಚೇದಿನ್ ಎನ್ನುವ ಮಂದಿಗೆ ಇನ್ನೂ ಅರ್ಥವಾಗಿಲ್ಲ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಅವರು ಬುಧವಾರ ಇಲ್ಲಿನ ಬಸ್ಸು ನಿಲ್ದಾಣದ ಬಳಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ‘ಕರಾಳ ದಿನಾಚರಣೆ’ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಪ್ರದಾನಿ ಮೋದಿ ಒಳ್ಳೆಯವರು, ಅವರ ಬಗ್ಗೆ ತನಗೆ ತುಂಬಾ ಗೌರವವಿದೆ. ಆದರೆ ಅವರೊಂದಿಗೆ ಇರುವ ಬಿಜೆಪಿಗರು ಅವರನ್ನು ಸುಳ್ಳು ಹೇಳುತ್ತಾ ದಾರಿ ತಪ್ಪಿಸುತ್ತಿದ್ದಾರೆ. ಅದರ ಪರಿಣಾಮದಿಂದ ನೋಟು ರದ್ದತಿ ಮತ್ತು ಜಿಎಸ್‌ಟಿ ಜಾರಿಗೆ ತಂದಿದ್ದಾರೆ ಎಂದ ಅವರು ಇನ್ನಾದರೂ ಮೋದಿ ಅವರು ಇಂತಹ ಯೋಚನೆಯನ್ನು ಜಾರಿಗೆ ತರುವಾಗ ಆರ್ಥಿಕ ತಜ್ಞರ ಮಾಹಿತಿ ಪಡೆದುಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರದ ಅನ್ನಭಾಗ್ಯ, ಪಶುಭಾಗ್ಯ, ಅಡಿಕೆ ಬೆಂಬಲ ಬೆಲೆ ಎಲ್ಲವನ್ನೂ ಕದ್ದು ಮುಚ್ಚಿ ಪಡೆದುಕೊಂಡಿರುವ ಬಿಜೆಪಿಗರು ಇದೀಗ ಸಿದ್ದರಾಮಯ್ಯ ಅವರನ್ನು ದೂರುತ್ತಿದ್ದಾರೆ. ಅನ್ನ ಭಾಗ್ಯ ಕೇಂದ್ರ ಸರ್ಕಾರದ ಯೋಜನೆ ಎಂದು ಸುಳ್ಳು ಹೇಳಿ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಗೋಮಾರಾಟ ಮಾಡುವವರೇ ಗೋರಕ್ಷಕರೆಂದು ಹೇಳುತ್ತಿದ್ದಾರೆ. ಅವರಿಗೆ ಗೋವಿನ ಬಗ್ಗೆ ನೈಜ ಕಾಳಜಿಯಿದ್ದಲ್ಲಿ ಕರುಹಾಕದ ದನಗಳ ಹಾಗೂ ಹೋರಿ ಕರುಗಳ ರಕ್ಷಣೆಗಾಗಿ ಕ್ರಮ ಕೈಗೊಳ್ಳಲಿ ಎಂದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಬಸ್ಸು ನಿಲ್ದಾಣದ ತನಕ ಪ್ರತಿಭಟನಾಕಾರರು ಕಪ್ಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಿದರು. ನೋಟು ರದ್ದತಿ ಸಂದರ್ಭದಲ್ಲಿ ಮೃತಪಟ್ಟ ದೇಶದ 150 ಮಂದಿಗೆ ಶಾಸಕಿ ಅವರು ಮೋಂಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಿದರು. ಸಭೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಪಕ್ಷದ ಮುಖಂಡರಾದ ಮಹೇಶ್ ರೈ ಅಂಕೊತ್ತಿಮಾರು, ನೂರುದ್ದೀನ್ ಸಾಲ್ಮರ, ಶ್ರೀರಾಮ ಪಕ್ಕಳ, ಹರೀಣಾಕ್ಷಿ ಜೆ.ಶೆಟ್ಟಿ, ದುರ್ಗಾಪ್ರಸಾದ್ ರೈ ಕುಂಬ್ರ, ಯಾಕೂಬ್ ದರ್ಬೆ, ಮೊಯ್ದೀನ್ ಅರ್ಶದ್ ದರ್ಬೆ, ಅಬ್ದುಲ್ ರಹಿಮಾನ್ ಅಝಾದ್, ಯು.ಟಿ. ತೌಸೀಫ್, ವಿಕ್ರಂ ರೈ ಸಾಂತ್ಯ, ಕೃಷ್ಣಪ್ರಸಾದ್ ಆಳ್ವ, ರೋಶನ್ ರೈ, ಜೋಕಿಂ ಡಿ’ಸೋಜ, ವಿಶಾಲಾಕ್ಷಿ, ಇಸಾಕ್ ಸಾಲ್ಮರ, ನಿರಂಜನ ರೈ ಮಠಂತಬೆಟ್ಟು, ಅಮಳ ರಾಮಚಂದ್ರ, ಇಬ್ರಾಹಿಂ ಬಾತಿಷ್, ರೇಖಾ ಯಶೋಧರ್, ಮನಮೋಹನ್, ಸಾಹಿರ ಝುಬೈರ್, ಶಾರದಾ ಅರಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X