Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ಯಾರಡೈಸ್ ಪೇಪರ್ಸ್ ಸೋರಿಕೆ: ಇನ್ನಷ್ಟು...

ಪ್ಯಾರಡೈಸ್ ಪೇಪರ್ಸ್ ಸೋರಿಕೆ: ಇನ್ನಷ್ಟು ಭಾರತೀಯರ ಹೆಸರು ಬಯಲು

ವಾರ್ತಾಭಾರತಿವಾರ್ತಾಭಾರತಿ8 Nov 2017 9:35 PM IST
share
ಪ್ಯಾರಡೈಸ್ ಪೇಪರ್ಸ್ ಸೋರಿಕೆ: ಇನ್ನಷ್ಟು ಭಾರತೀಯರ ಹೆಸರು ಬಯಲು

ಹೊಸದಿಲ್ಲಿ, ನ.8: ಪ್ಯಾರಡೈಸ್ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಬಗೆದಷ್ಟೂ ಭಾರತೀಯರ ಹೆಸರುಗಳು ಹೊರಬರುತ್ತಲೇ ಇದೆ. ಬುಧವಾರದಂದು ತನಿಖಾ ವರದಿಗಾರರ ಅಂತಾರಾಷ್ಟ್ರೀಯ ಮಂಡಳಿಯ ಭಾರತೀಯ ಪಾಲುದಾರರಾದ ಇಂಡಿಯನ್ ಎಕ್ಸ್‌ಪ್ರೆಸ್ ಹಲವು ಭಾರತೀಯ ಮೂಲದ ಕಾರ್ಪೊರೇಟ್ ವ್ಯಕ್ತಿಗಳ ಹೆಸರುಗಳನ್ನು ಬಯಲು ಮಾಡಿತು.

13.4 ಕಾರ್ಪೊರೇಟ್ ದಾಖಲೆಗಳನ್ನು ಹೊಂದಿರುವ ಪ್ಯಾರಡೈಸ್ ಪೇಪರ್ಸ್ ಬರ್ಮುಡಾ ಮೂಲದ ಆ್ಯಪಲ್‌ಬೈ ಮತ್ತು ಸಿಂಗಾಪುರ್‌ನ ಏಷ್ಯಾಟಿಸಿ ಟ್ರಸ್ಟ್ ಸಂಸ್ಥೆಗಳ ಆರ್ಥಿಕ ಅಂಕಿಅಂಶಗಳನ್ನು ಹೊಂದಿದೆ. ಈ ಪಟ್ಟಿಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರು ಕೂಡಾ ಇದೆ ಆದರೆ ಎಲ್ಲಾ ಖಾತೆಗಳು ಮತ್ತು ಸಂಸ್ಥೆಗಳು ಅಕ್ರಮವಾಗಿರಲು ಸಾಧ್ಯವಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಬಿಡುಗಡೆ ಮಾಡಲಾದ ದಾಖಲೆಗಳಲ್ಲಿ ಲೂಪ್ ಟೆಲಿಕಾಂನ ಪ್ರೋತ್ಸಾಹಕ ಐಪಿ ಖೈತಾನ್, ಕೈಗಾರಿಕೋದ್ಯಮಿ ನಿಮ್ಮಗಡ ಪ್ರಸಾದ್ ಮುಂತಾದವರ ಹೆಸರುಗಳಿವೆ. ಖೈತಾನ್, ತನ್ನ ಭಾವಂದಿರಾದ ಎಸ್ಸಾರ್ ಗ್ರೂಪ್‌ನ ಶಶಿ ರೂಯಿ ಮತ್ತು ರವಿ ರೂಯಿಯ ಎರಡು ಸಾಗರೋತ್ತರ ಸಂಸ್ಥೆಗಳನ್ನು ನೋಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಆದರೆ ಈ ಆರೋಪವನ್ನು ಎಸ್ಸಾರ್ ಗ್ರೂಪ್ ತಳ್ಳಿಹಾಕಿದೆ.

ನಿಮ್ಮಡಗ ಪ್ರಸಾದ್ ಮತ್ತು ಅವರ ಸಹೋದರ ಬಹಮಾಸ್‌ನಲ್ಲಿ 28 ಸಾಗರೋತ್ತರ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಪ್ರಸಾದ್‌ರನ್ನು ಈ ಮೊದಲು ವೈಎಸ್‌ಆರ್ ಕಾಂಗ್ರೇಸ್ ಮುಖ್ಯಸ್ಥ ವೈಎಸ್ ಜಗನ್ಮೋಹನ್ ರೆಡ್ಡಿ ಪ್ರಕರಣದಲ್ಲಿ ಸಿಬಿಐ ವಿಚಾರಣೆ ನಡೆಸಿತ್ತು.

ಡಿಎಸ್ ಕನ್ಸ್ಟ್ರಕ್ಷನ್ ಸಂಸ್ಥೆ 135 ಮಿಲಿಯನ್ ಡಾಲರ್‌ಗಳ ಸಾಲವನ್ನು ಬಾಕಿಯುಳಿಸಿದ್ದ ಸಂದರ್ಭದಲ್ಲಿ ಐಸಿಐಸಿಐ ಬ್ಯಾಂಕ್ ಕೂಡಾ ಆ್ಯಪಲ್‌ಬೈಯ ಸಲಹೆಯನ್ನು ಕೋರಿತ್ತು. ಈ ಪ್ರಕರಣ ಕಳೆದ ವರ್ಷ ಕೊನೆಯಾಗಿತ್ತು.

ಕೆಲವು ಮಾಧ್ಯಮಗಳ ಹೆಸರುಗಳು ಕೂಡಾ ಪ್ಯಾರಡೈಸ್ ಪೇಪರ್ಸ್‌ನಲ್ಲಿ ಕಂಡುಬಂದಿದ್ದು ಎಲ್ಲಾ ಸಂಸ್ಥೆಗಳು ತಾವು ದೇಶದ ಕಾನೂನಿನಡಿಯಲ್ಲೇ ಕಾರ್ಯನಿರ್ವಹಿಸಿರುವುದಾಗಿ ತಿಳಿಸಿವೆ.

ಪ್ಯಾರಡೈಸ್ ಪೇಪರ್ಸ್‌ನಲ್ಲಿ ತನ್ನ ಹೆಸರು ಕಾಣಿಸಿಕೊಂಡಿರುವ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಆರ್‌ಕೆ ಸಿನ್ಹಾ, ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಆರೋಪಿಸಿ ಅದರ ವಿರುದ್ಧ ಮಾನಹಾನಿ ಪ್ರಕ್ರಿಯೆನ್ನು ಆರಂಭಿಸುವಂತೆ ರಾಜ್ಯಸಭಾ ಮುಖ್ಯಸ್ಥ ವೆಂಕಯ್ಯ ನಾಯ್ಡು ಅವರಲ್ಲಿ ಆಗ್ರಹಿಸಿದ್ದಾರೆ.

ತಾನು ನಾಯ್ಡುಗೆ ಬರೆದಿರುವ ಪತ್ರದ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ಸಿನ್ಹಾ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕಾಂಗ್ರೇಸ್ ನಾಯಕರಾದ ಪಿ ಚಿದಂಬರಂ ಮತ್ತು ಸಚಿನ್ ಪೈಲಟ್ ಅವರ ಹೆಸರುಗಳೂ ಸೋರಿಕೆಯಲ್ಲಿ ಬಯಲಾಗಿದ್ದರೂ ಅವರ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ಯಾವುದೇ ವರದಿಯನ್ನು ಪ್ರಕಟಿಸುತ್ತಿ ಲ್ಲ ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X