Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಬ್ಯಾನ್ ಹಿಂದಿನ ಉದ್ದೇಶ ತಿಳಿಯಲು...

ನೋಟು ಬ್ಯಾನ್ ಹಿಂದಿನ ಉದ್ದೇಶ ತಿಳಿಯಲು ಸಂಸದೀಯ ತನಿಖೆ ನಡೆಯಲಿ

ಪೃಥ್ವಿರಾಜ ಚೌಹಾಣ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Nov 2017 10:55 PM IST
share
ನೋಟು ಬ್ಯಾನ್ ಹಿಂದಿನ ಉದ್ದೇಶ ತಿಳಿಯಲು ಸಂಸದೀಯ ತನಿಖೆ ನಡೆಯಲಿ

ಮುಂಬೈ, ನ.8: ನೋಟು ಅಮಾನ್ಯೀಕರಣದ ಹಿಂದಿರುವ ಕೇಂದ್ರ ಸರಕಾರದ ನೈಜ ಉದ್ದೇಶವನ್ನು ತಿಳಿಯಲು ಸಂಸದೀಯ ಸಮಿತಿ ಮೂಲಕ ಜಂಟಿ ತನಿಖೆಯನ್ನು ನಡೆಸಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಆಗ್ರಹಿಸಿದ್ದಾರೆ. ಪ್ರಧಾನ ಮಂತ್ರಿಗಳ ನೋಟು ನಿಷಿದ್ಧದ ಹಿಂದಿನ ನೈಜ ಉದ್ದೇಶ ಡಿಜಿಟಲೀಕರಣವೇ ಆಗಿತ್ತೇ ಎಂಬುದು ಸ್ಪಷ್ಟವಾಗಬೇಕು ಎಂದು ಚೌಹಾಣ್ ತಿಳಿಸಿದರು.

ಇದೊಂದು ಭಾವಾತಿರೇಕದ ನಿರ್ಧಾರ ಎಂದು ಹೇಳಿರುವ ಚೌಹಾಣ್, ಸಮಯ ಕಳೆಯುತ್ತಿದ್ದಂತೆ ಕಪ್ಪುಹಣದ ನಿರ್ಮೂಲನೆಯ ಬದಲಾಗಿ ಬೇರೆಯದ್ದೇ ಚಿತ್ರಣಗಳು ಹೊರಬರಲು ಆರಂಭಿಸಿದವು ಎಂದು ವಿವರಿಸಿದರು.

ಎಲ್ಲಾ ನಿಷೇಧಿತ ಹಣವು ವ್ಯವಸ್ಥೆಗೆ ಮರಳಿದೆ ಎಂದು ಆರ್‌ಬಿಐ ತಿಳಿಸಿದ ನಂತರ ನೋಟು ಅಮಾನ್ಯದ ಹಿಂದಿದ್ದ ಉದ್ದೇಶ ಡಿಜಿಟಲೀಕರಣ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದರು. ಇಲ್ಲಿ ಏಳುವ ಪ್ರಶ್ನೆಯೆಂದರೆ ಪ್ರಧಾನಿಗೆ ಇದರ ಹಿಂದಿನ ನೈಜ ಉದ್ದೇಶ ಬಗ್ಗೆ ಅರಿವಿತ್ತೇ ಅಥವಾ ಅವರನ್ನು ಕತ್ತಲಲ್ಲಿಡಲಾಗಿತ್ತೇ ಎಂಬುದು ಎಂದವರು ನುಡಿದರು. ತಮ್ಮ ಬಜೆಟ್ ಭಾಷಣದಲ್ಲಿ ಈ ಬಗ್ಗೆ ಮಂಡಳಿಯನ್ನು ರಚಿಸುವುದಾಗಿ ಜೇಟ್ಲಿ ತಿಳಿಸಿದ್ದರು. ಆದರೆ ಇಲ್ಲಿಯವರೆಗೂ ಈ ಬಗ್ಗೆ ಏನನ್ನೂ ಮಾಡಲಾಗಿಲ್ಲ. ಸರಿಯಾದ ಸೌಲಭ್ಯಗಳ ಹೊರತಾಗಿ ಜನರನ್ನು ನಗದುರಹಿತ ವ್ಯವಹಾರ ನಡೆಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಚೌಹಾಣ್ ತಿಳಿಸಿದರು.

ನೋಟು ನಿಷೇಧಗೊಂಡು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪ್ರತಿಪಕ್ಷಗಳಿಂದ ತೀವ್ರ ಟೀಕೆಯನ್ನು ಎದುರಿಸುತ್ತಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೋಟು ರದ್ದತಿಯನ್ನು ಒಂದು ದುರಂತ ಎಂದು ಕರೆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅದೊಂದು ದೊಡ್ಡ ಹಗರಣ ಎಂದು ವ್ಯಾಖ್ಯಾನಿಸಿದ್ದಾರೆ. ನಿಷೇಧಿತ ಕಪ್ಪುಹಣವು ಗುಜರಾತ್ ಚುನಾವಣೆಯಲ್ಲಿ ಬಳಕೆಗೆ ಬರಲಿದೆ ಎಂದು ಪಿ ಚಿದಂಬರಂ ಆರೋಪ ಮಾಡಿದ್ದಾರೆ.

ಕೇಂದ್ರ ಸರಕಾರ ನವೆಂಬರ್ 8ನ್ನು ಕಪ್ಪುಹಣ ವಿರೋಧಿ ದಿನವೆಂದು ಆಚರಿಸುತ್ತಿದ್ದರೆ ವಿಪಕ್ಷಗಳು ಭಾರತೀಯ ಇತಿಹಾಸದಲ್ಲೇ ಅದೊಂದು ಕರಾಳದಿನವೆಂದು ಪ್ರತಿಭಟನೆ ನಡೆಸುತ್ತಿವೆ.

ಕಳೆದ ವರ್ಷ ನವೆಂಬರ್ 8ರಂದು ಪ್ರಧಾನಿ ಮೋದಿ ರೂ.500 ಮತ್ತು ರೂ.1000ದ ನೋಟುಗಳನ್ನು ನಿಷೇಧಿಸಿ ಅನಿರೀಕ್ಷಿತ ಆದೇಶವನ್ನು ಹೊರಡಿಸಿದರು. ಅವರ ಈ ನಡೆಯಿಂದ ಜನರು ತಮ್ಮದೇ ಹಣವನ್ನು ಪಡೆಯಲು ಬ್ಯಾಂಕ್‌ಗಳ ಮತ್ತು ಎಟಿಎಂಗಳ ಮುಂದೆ ಹಣ ಪಡೆಯಲು ಮತ್ತು ಪಾವತಿಸಲು ಪರದಾಡುವಂಥಾ ಪರಿಸ್ಥಿತಿ ಉದ್ಭವವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X