Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷರ...

ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷರ ನಿವಾಸಗಳ ಮೇಲೆ ಐಟಿ ದಾಳಿ

ವಾರ್ತಾಭಾರತಿವಾರ್ತಾಭಾರತಿ8 Nov 2017 11:42 PM IST
share
ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷರ ನಿವಾಸಗಳ ಮೇಲೆ ಐಟಿ ದಾಳಿ

ಶಿವಮೊಗ್ಗ, ನ.8: ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ಡಿ.ಸಿ.ಸಿ. ಬ್ಯಾಂಕ್ ಪ್ರಧಾನ ಕಚೇರಿ, ಮುಖ್ಯ ಶಾಖೆ ಹಾಗೂ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥಗೌಡರ ನಿವಾಸಗಳ ಮೇಲೆ ಆದಾಯ ತೆರಿಗೆ (ಐ.ಟಿ.) ಇಲಾಖೆ ಅಧಿಕಾರಿಗಳ ತಂಡವು ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ.

ಆರ್.ಎಂ. ಮಂಜುನಾಥಗೌಡರಿಗೆ ಸೇರಿದ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ, ತೀರ್ಥಹಳ್ಳಿ ಹಾಗೂ ಸಿರಿಗೆರೆ ಗ್ರಾಮದ ಸಮೀಪದ ಕರಕುಚ್ಚಿಯಲ್ಲಿರುವ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಇನ್ನಷ್ಟೇ ಅಧಿಕೃತ ಮಾಹಿತಿಗಳು ಲಭ್ಯವಾಗಬೇಕಾಗಿದೆ.

ಡಿ.ಸಿ.ಸಿ. ಬ್ಯಾಂಕ್ ಪ್ರಧಾನ ಕಚೇರಿ ಹಾಗೂ ಮುಖ್ಯ ಶಾಖೆಗಳಲ್ಲಿ ಸುಮಾರು 20ಕ್ಕೂ ಅಧಿಕ ಐ.ಟಿ. ಅಧಿಕಾರಿಗಳ ತಂಡವು ಬೆಳಗ್ಗೆ 8 ಗಂಟೆಯಿಂದಲೇ ತಪಾಸಣೆ ನಡೆಸಲಾರಂಭಿಸಿದ್ದು, ಮಧ್ಯಾಹ್ನದವರೆಗೂ ಈ ತಪಾಸಣೆ ಮುಂದುವರಿಸಿದೆ.

ಐಟಿ ಅಧಿಕಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಲಾಗಿತ್ತು. ಗ್ರಾಹಕರ ಪ್ರವೇಶದ ಮೇಲೂ ನಿರ್ಬಂಧ ಹೇರಲಾಗಿತ್ತು. ಡಿ.ಸಿ.ಸಿ. ಬ್ಯಾಂಕ್‌ನ ಎಲ್ಲ ಶಾಖೆಗಳ ವ್ಯವಹಾರದ ನೆಟ್‌ವರ್ಕ್ ಸಂಪರ್ಕ ಕೂಡ ಐಟಿ ಅಧಿಕಾರಿಗಳು ಸ್ಥಗಿತಗೊಳಿಸಿದ್ದು, ಇದರಿಂದ ಜಿಲ್ಲೆಯಲ್ಲಿರುವ ಎಲ್ಲ ಡಿ.ಸಿ.ಸಿ. ಬ್ಯಾಂಕ್ ಶಾಖೆಗಳಲ್ಲಿ ಬುಧವಾರದ ದೈನಂದಿನ ವಹಿವಾಟು ಸ್ಥಗಿತಗೊಂಡಿತ್ತು. ಇದರಿಂದ ಗ್ರಾಹಕರು ಪರದಾಡುವಂತಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ಹಾಗೂ ಹೊರ ರಾಜ್ಯದ ಐಟಿ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗವಹಿಸಿದ್ದವು ಎಂದು ಹೇಳಲಾಗುತ್ತಿದೆ. ಯಾವ ಉದ್ದೇಶಕ್ಕಾಗಿ ಡಿ.ಸಿ.ಸಿ. ಬ್ಯಾಂಕ್ ಹಾಗೂ ಅಧ್ಯಕ್ಷರ ನಿವಾಸಗಳ ಮೇಲೆ ದಾಳಿ ನಡೆದಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗುತ್ತಿಲ್ಲ. ಜೊತೆಗೆ ಸ್ಥಳೀಯ ಐಟಿ ಇಲಾಖೆಯ ಮೂಲಗಳು ಕೂಡ ದಾಳಿಯ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಮಾಹಿತಿ ನೀಡಿದೆ.

ದಾಳಿಗೆ ಡಿಕೆಶಿ ಲಿಂಕ್?: ಡಿ.ಸಿ.ಸಿ. ಬ್ಯಾಂಕ್ ಪ್ರಧಾನ ಕಚೇರಿ ಹಾಗೂ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರ ನಿವಾಸಗಳ ಮೇಲೆ ನಡೆದಿರುವ ಐಟಿ ದಾಳಿಗೆ ಕಾರಣವೇನು ಎಂಬುದು ನಿಗೂಢವಾಗಿದೆ.

ಸದ್ಯ ಆರ್.ಎಂ. ಮಂಜುನಾಥಗೌಡರವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿ ಕೊಂಡವರು. ಅಲ್ಲದೆ, ಡಿ.ಸಿ.ಸಿ. ಬ್ಯಾಂಕ್ ಶಾಖೆಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ಒಡೆತನಕ್ಕೆ ಸಂಬಂಧಿಸಿದ ಖಾತೆಗಳಿಗೆ ಹಣ ಜಮೆಯಾಗಿರುವ ಮಾಹಿತಿ ಐ.ಟಿ.ಗೆ ಲಭ್ಯವಾಗಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಈ ದಾಳಿ ನಡೆದಿದೆ ಎಂಬ ಮಾತುಗಳು ಸ್ಥಳೀಯವಾಗಿ ಹರಿದಾಡುತ್ತಿದೆ. ಸದ್ಯ ದಾಳಿಯ ಕಾರಣಗಳು ತಿಳಿದು ಬಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X