Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುರುತಿಸಿಕೊಳ್ಳಬೇಕೆಂಬ ತಹತಹವೇ ನನ್ನ...

ಗುರುತಿಸಿಕೊಳ್ಳಬೇಕೆಂಬ ತಹತಹವೇ ನನ್ನ ಬೆಳವಣಿಗೆಗೆ ಪ್ರೇರಣೆ: ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ9 Nov 2017 9:41 PM IST
share
ಗುರುತಿಸಿಕೊಳ್ಳಬೇಕೆಂಬ ತಹತಹವೇ ನನ್ನ ಬೆಳವಣಿಗೆಗೆ ಪ್ರೇರಣೆ: ಬರಗೂರು ರಾಮಚಂದ್ರಪ್ಪ

ಬೆಂಗಳೂರು, ನ.9: ಬಾಲ್ಯದಲ್ಲಿ ತನ್ನೂರು ಬರಗೂರಿನ ಜನತೆಯಲ್ಲಿ ನಾನೊಬ್ಬ ಒಳ್ಳೆಯ ಓದುಗನೆಂದು ಗುರುತಿಸಿಕೊಳ್ಳಬೇಕೆಂಬ ತಹತಹವೇ ನನ್ನ ಬೆಳವಣೆಗೆಗೆ ಮೂಲ ಪ್ರೇರಣೆಯಾಯಿತು ಎಂದು ಹಿರಿಯ ಸಿನಿಮಾ ನಿರ್ದೇಶಕ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ಗುರುವಾರ ವಾರ್ತಾ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡಮಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ನನ್ನೂರಿನ ಜನ ನನ್ನನ್ನು ಓದುವ ಹುಡುಗ ಎಂದುಕೊಳ್ಳಲಿ ಎಂದು ಪ್ರಾಥಮಿಕ ಶಾಲೆಯಲ್ಲಿ ಓದುವಾಗಲೇ ‘ಜೈಮಿನಿ ಭಾರತ’ ಗ್ರಂಥವನ್ನು ಕಂಕಳಿನಲ್ಲಿಡಿದು ಊರಿನ ಬೀದಿ, ಬೀದಿ ಓಡಾಡಿದ್ದೆ ಎಂದು ಸ್ಮರಿಸಿಕೊಂಡರು.

ಭಾರತದಂತಹ ಜಾತಿ ಮೂಲ ಸಮಾಜದಲ್ಲಿ ಯಾವುದೇ ವ್ಯಕ್ತಿ ಉನ್ನತ ಸ್ಥಾನಕ್ಕೆ ಏರಬೇಕಾದರೆ ಪ್ರತಿಭೆಗಿಂತ ಜಾತಿ ಮತ್ತು ಹಣವೇ ಮುಖ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ನನಗೆ ಜಾತಿ ಬಲವೂ ಇಲ್ಲ, ಹಣ ಬಲವೂ ಇಲ್ಲವಾಗಿದೆ. ಹೀಗಾಗಿ ಓದುವುದೊಂದೇ ನಾನು ಗುರುತಿಸಿಕೊಳ್ಳುವಿಕೆಗೆ ಇದ್ದ ಏಕೈಕ ಅಸ್ತ್ರವಾಗಿತ್ತು. ಹೀಗಾಗಿ ಓದುವುದು, ಬರೆಯುವುದು ಹಾಗೂ ಚಿಂತಿಸುವುದು ನನ್ನ ಬದುಕೇ ಆಗಿ ಹೋಗಿದೆ ಎಂದು ಅವರು ತಮ್ಮ ಬದುಕಿನ ಬಗೆಯನ್ನು ವಿವರಿಸಿದರು.

ಕಂಡಕ್ಟರ್ ಕನಸು ಕಂಡಿದ್ದೆ: ಮನೆಯಲ್ಲಿ ಆರ್ಥಿಕ ಸಂಕಷ್ಟ ಇದಿದ್ದರಿಂದ ನನ್ನ ತಂದೆ ನಮ್ಮನ್ನು ಪಿಯುಸಿ ನಂತರ ಯಾವುದಾದರು ಕೆಲಸಕ್ಕೆ ಸೇರಿಸಬೇಕೆಂದು ಯೋಚಿಸುತ್ತಿದ್ದರು. ಹೀಗಾಗಿ ನಾನು ಸರಕಾರಿ ಬಸ್ಸಿನ ಕಂಡಕ್ಟರ್ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಓದು ಮತ್ತು ಬರವಣಿಗೆಯ ಹವ್ಯಾಸವೇ ಬಿಎ, ಎಂಎವರೆಗೂ ತಲುಪವಂತೆ ಮಾಡಿತು ಎಂದು ಅವರು ಹೇಳಿದರು.

ನನಗೆ ಓದುವ ಜೊತೆ ಜತೆಗೆ ಸಿನೆಮಾ ಕ್ಷೇತ್ರದ ಕಡೆಗೂ ಹೆಚ್ಚಿನ ಆಸಕ್ತಿಯಿತ್ತು. ಹೀಗಾಗಿ ಅಧ್ಯಾಪನದ ಜೊತೆಗೆ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದೆ. ಆದರೆ, ಸಿನಿಮಾದ ನೆಪದಲ್ಲಿ ಒಂದು ದಿನವೂ ತರಗತಿಗೆ ಹೋಗದೆ ಇರುತ್ತಿರಲಿಲ್ಲ. ವಿದ್ಯಾರ್ಥಿಗಳಿಗೆ ಪಾಠ ಮಾಡಿದ ನಂತರವೇ ಸಿನೆಮಾ ಕಡೆಗೆ ಆಲೋಚಿಸುತ್ತಿದ್ದೆ ಎಂದರು.

ನನ್ನ ಬೆಳವಣಿಗೆಯಲ್ಲಿ ನನ್ನೂರಿನ ಜನತೆ, ನಾನು ಕಲಿಸಿದ ವಿದ್ಯಾರ್ಥಿಗಳು, ರಾಜ್ಯದ ಹಿರಿಯ ಬಂಡಾಯ ಸಾಹಿತಿಗಳು, ಸಿನೆಮಾ ನಟರು, ನಿರ್ದೇಶಕರು ಹಾಗೂ ಬಹುಮುಖ್ಯವಾಗಿ ಸಾಮಾನ್ಯ ಜನತೆಯ ಪಾತ್ರ ಬಹುಮುಖ್ಯವಾಗಿದೆ. ಜನತೆಯ ಜೊತೆ ಜೊತೆಗೆ ಬೆಳೆಯುತ್ತಿದ್ದೇನೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆಯ ನಿರ್ದೇಶಕ ಹರ್ಷ, ಚಲನಚಿತ್ರ ಅಕಾಡಮಿಯ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು, ಅಕಾಡೆಮಿಯ ರಿಜಿಸ್ಟ್ರಾರ್ ದಿನೇಶ್, ಹಿರಿಯ ಪತ್ರಕರ್ತರಾದ ಚ.ಹ.ರಘುನಾಥ್, ಗಂಗಾಧರ ಮೊದಲಿಯಾರ್, ಜೋಗಿ, ಹಿರಿಯ ಕವಯತ್ರಿ ಎಚ್.ಎಲ್.ಪುಷ್ಪಾ, ವಿಮರ್ಶಕ ಬೈರಮಂಗಲ ರಾಮೇಗೌಡ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X