ಗ್ರಾ.ಪಂ. ನೌಕರರ ಜಿಲ್ಲಾ ಸಮ್ಮೇಳನ
ಮಂಗಳೂರು, ನ.9: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಜಿಲ್ಲಾ ಸಮ್ಮೇಳನವು ನ. 11ರಂದು ಬೆಳಗ್ಗೆ 10:30ಕ್ಕೆ ಬಿ.ಸಿ.ರೋಡ್ನಲ್ಲಿರುವ ರೋಟರಿ ಭವನದಲ್ಲಿ ನಡೆಯಲಿದೆ.
ಗ್ರಾ.ಪಂ. ನೌಕರರ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಕೆ.ಯಾದವ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು ಸುಬ್ರಹ್ಮಣ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





