Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂದೇ ಮಾತರಂ ಕಡ್ಡಾಯ ಕುರಿತ ಆದೇಶ...

ವಂದೇ ಮಾತರಂ ಕಡ್ಡಾಯ ಕುರಿತ ಆದೇಶ ಮಾರ್ಪಾಡು ಮಾಡಿದ ಮದ್ರಾಸ್ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 Nov 2017 10:16 PM IST
share
ವಂದೇ ಮಾತರಂ ಕಡ್ಡಾಯ ಕುರಿತ ಆದೇಶ ಮಾರ್ಪಾಡು ಮಾಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ, ನ.9: ರಾಜ್ಯದ ಶಿಕ್ಷಣ ಸಂಸ್ಥೆ, ಸರಕಾರಿ ಕಚೇರಿ, ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಕೈಗಾರಿಕೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿ ಮದ್ರಾಸ್ ಹೈಕೋರ್ಟ್‌ನ ನ್ಯಾಯಾಧೀಶರು ಆದೇಶ ಜಾರಿಗೊಳಿಸಿದ ಮೂರು ತಿಂಗಳ ಬಳಿಕ ನ್ಯಾಯಾಲಯದ ವಿಭಾಗೀಯ ಪೀಠವೊಂದು ಆದೇಶವನ್ನು ಮಾರ್ಪಡಿಸಿದ್ದು , ಈ ವಿಷಯದಲ್ಲಿ ರಾಜ್ಯ ಸರಕಾರ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದೆ.

 ರಾಜ್ಯಸರಕಾರ ಕೈಗೊಳ್ಳಬೇಕಾದ ಕಾರ್ಯನೀತಿ ನಿರ್ಣಯ ಇದಾಗಿರುವ ಕಾರಣ ನಾವು ಆದೇಶವನ್ನು ಮಾರ್ಪಡಿಸುತ್ತಿದ್ದೇವೆ. ಈ ವಿಷಯದ ಬಗ್ಗೆ ನಿರ್ಧಾರ ಕೈಗೊಳ್ಳುವುದನ್ನು ರಾಜ್ಯಸರಕಾರದ ವಿವೇಚನೆಗೆ ಬಿಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಜಿ.ರಮೇಶ್ ಮತ್ತು ಆರ್‌ಎಂಟಿ ಟೀಕಾ ರಾಮನ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ವೀರಮಣಿ ಎಂಬವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆ ಸಂದರ್ಭ ಅಭ್ಯರ್ಥಿ ಕೆ.ವೀರಮಣಿ , ವಂದೇಮಾತರಂ ಗೀತೆಯನ್ನು ಬಂಗಾಳಿ ಭಾಷೆಯಲ್ಲಿ ಬರೆಯಲಾಗಿದೆ ಎಂದು ಬರೆದಿದ್ದರು. ಈ ಉತ್ತರ ತಪ್ಪೆಂದು ತಿಳಿಸಿದ್ದ ಶಿಕ್ಷಕರ ನೇಮಕಾತಿ ಮಂಡಳಿ ಅವರಿಗೆ ಒಂದು ಅಂಕ ಕಡಿತಗೊಳಿಸಿದ ಕಾರಣ ಅವರು ಪರೀಕ್ಷೆಯಲ್ಲಿ ಫೇಲಾಗಿದ್ದರು.

ಇದನ್ನು ಪ್ರಶ್ನಿಸಿ ವೀರಮಣಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸಂದರ್ಭ , ವಂದೇಮಾತರಂ ಗೀತೆಯ ಮೂಲ ಬಂಗಾಳಿ ಭಾಷೆ. ಬಳಿಕ ಇದನ್ನು ಸಂಸ್ಕೃತಕ್ಕೆ ಅನುವಾದ ಮಾಡಲಾಗಿದೆ ಎಂದು ತಿಳಿಸಿದ್ದ ನ್ಯಾಯಾಧೀಶರು, ವೀರಮಣಿಗೆ ಒಂದು ಅಂಕ ನೀಡಬೇಕು ಹಾಗೂ ಅವರನ್ನು ತೇರ್ಗಡೆಗೊಳಿಸಿ ಸೂಕ್ತ ಉದ್ಯೋಗ ನೀಡಬೇಕೆಂದು ಸೂಚಿಸಿದ್ದರು.

 ಈ ಆದೇಶದ ಬಗ್ಗೆ ನೇಮಕಾತಿ ಮಂಡಳಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಅಭ್ಯರ್ಥಿಗಳಿಗೆ ಅಂಕ ನೀಡುವುದು, ಅವರನ್ನು ಉದ್ಯೋಗಕ್ಕೆ ನೇಮಕಾತಿ ನಡೆಸುವುದು ಇವೆಲ್ಲಾ ಸರಕಾರದ ಆಡಳಿತ ಕಾರ್ಯನೀತಿಗೆ ಹೊಂದಿಕೊಂಡಿರುತ್ತದೆ. ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗದ ಹೊರತು, ಸಾಮಾನ್ಯವಾಗಿ ಸರಕಾರದ ಕಾರ್ಯನೀತಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ನಡೆಸುವುದಿಲ್ಲ. ಈ ಪ್ರಕರಣದಲ್ಲಿ ಸಂವಿಧಾನದ ಆಶಯದ ಉಲ್ಲಂಘನೆಯಾಗಿರುವುದು ಕಂಡುಬರುವುದಿಲ್ಲ. ಆದ್ದರಿಂದ ಅಭ್ಯರ್ಥಿಗೆ ಒಂದು ಅಂಕ ನೀಡಿದ ಬಳಿಕ ಅವರನ್ನು ಸೂಕ್ತ ಉದ್ಯೋಗಕ್ಕೆ ನೇಮಿಸುವುದು ಸರಕಾರದ ಕಾರ್ಯನೀತಿಗೆ ಬಿಟ್ಟಿರುವ ವಿಚಾರವಾಗಿದೆ. ಈ ಬಗ್ಗೆ ಸರಕಾರವೇ ನಿರ್ಧಾರ ಕೈಗೊಳ್ಳಬೇಕು ಎಂದು ನ್ಯಾಯಪೀಠ ಅಭಿಪ್ರಾಯ ಸೂಚಿಸಿತು.

 ಅಲ್ಲದೆ ವಂದೇಮಾತರಂ ಗಾಯನ ಕಡ್ಡಾಯಕ್ಕೆ ಸಂಬಂಧಿಸಿಯೂ ರಾಜ್ಯ ಸರಕಾರವೇ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಇದು ಸರಕಾರದ ಕಾರ್ಯನೀತಿಗೆ ಸಂಬಂಧಿಸಿದ ವಿಷಯ. ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದು ಸರಕಾರದ ವಿವೇಚನೆಗೆ ಬಿಟ್ಟಿರುವ ವಿಷಯವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X