Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನತೆಯ ವಿಶ್ವಾಸ ಕಳೆದುಕೊಂಡಿರುವ...

ಜನತೆಯ ವಿಶ್ವಾಸ ಕಳೆದುಕೊಂಡಿರುವ ರಾಷ್ಟ್ರೀಯ ಪಕ್ಷಗಳು: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Nov 2017 6:41 PM IST
share

ಬೆಂಗಳೂರು, ನ.10: ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಜನತೆ ರಾಷ್ಟ್ರೀಯ ಪಕ್ಷಗಳ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದ ಜೆಡಿಎಸ್ ಕಚೇರಿ(ಜೆಪಿ ಭವನ)ಯಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಜಿ.ಪಂ.ಸದಸ್ಯ ಎ.ಮಂಜುನಾಥ ಹಾಗೂ ಅವರ ಸಾವಿರಾರು ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾನತಾಡಿದರು.

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವ ವಿರೋಧ ಪಕ್ಷಗಳ ನಾಯಕರು, ಬಹಿರಂಗವಾಗಿ ಮಾತನಾಡುವುದು ಬೇರೆ. ಆದರೆ, ನಾಲ್ಕು ಗೋಡೆಗಳ ಮಧ್ಯೆ ಅವರು ಮಾತನಾಡುವಾಗ ಜೆಡಿಎಸ್‌ಗೆ ಸಿಗುತ್ತಿರುವ ಬೆಂಬಲದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಾರಿ ನಮ್ಮ ಪಕ್ಷದ ಗುರಿಯನ್ನು ಮುಟ್ಟುತ್ತೇವೆ. ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು.

ಸಾಂಕೇತಿಕವಾಗಿ ಮಂಜು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದೇನೆ. ಮುಂದಿನ ತಿಂಗಳು ಶ್ರೀರಂಗಪಟ್ಟಣದ ರವೀಂದ್ರ ಶ್ರೀಕಂಠಯ್ಯ ಪಕ್ಷ ಸೇರಲಿದ್ದಾರೆ. ಇವತ್ತಿನಿಂದ ಮಂಜು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುವ ಜವಾಬ್ದಾರಿಯನ್ನ ತೆಗೆದುಕೊಂಡಿದ್ದಾರೆ ಎಂದರು.

ಟಿಪ್ಪುಜಯಂತಿ ಆಚರಣೆ: ಟಿಪ್ಪುಜಯಂತಿ ಆಚರಣೆಯಲ್ಲಿ ಸರಕಾರದ ಮೇಲೆ ಅನುಮಾನ ಬಂದಿದೆ. ರಾಜ್ಯದಲ್ಲಿ 144 ಸೆಕ್ಷನ್ ಜಾರಿ ಮಾಡಿ ಟಿಪ್ಪುಗೆ ಅಗೌರವ ಸೂಚಿಸುವ ಅಗತ್ಯವಿತ್ತಾ? ಟಿಪ್ಪುಜಯಂತಿ ಉತ್ಸವವನ್ನು ರದ್ದು ಮಾಡುವ ಮೂಲಕ ಬಿಜೆಪಿ ಮಾತ್ರವಲ್ಲ, ಕಾಂಗ್ರೆಸ್ ಕೂಡ ಅಗೌರವವನ್ನುಂಟು ಮಾಡುತ್ತಿದೆ. ಟಿಪ್ಪು ಹೆಸರನ್ನು ಮುಂದಿಟ್ಟುಕೊಂಡು ಮತಬ್ಯಾಂಕ್ ರಾಜಕೀಯ ಮಾಡಲು ಸರಕಾರ ಮುಂದಾಗಿದೆ ಎಂದು ಟೀಕಿಸಿದರು.

ಕೆ.ಸಿ.ವೇಣುಗೋಪಾಲ್ ವಿಚಾರ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸರಕಾರದ ಅಧಿಕೃತ ಪ್ರತಿನಿಧಿ ಅಲ್ಲ. ಸೋಲಾರ್ ಹಗರಣದಲ್ಲಿ ಕಳಂಕವನ್ನ ಹೊತ್ತಿರುವ ವ್ಯಕ್ತಿಯನ್ನು ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಕಾಂಗ್ರೆಸ್ ದುರ್ಗತಿಯ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ವೇಣುಗೋಪಾಲ್ ಅವರನ್ನು ವಾಪಸ್ ಕಳುಹಿಸಿ ಅಂತಾ ನಾನು ಹೇಳುವುದಿಲ್ಲ. ಅದರ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡಲಿ. ನಾನು ಕಳುಹಿಸಿ ಅಂತಾ ಹೇಳಿದರೆ ಕುಮಾರಸ್ವಾಮಿ ಅವರ ಸಲಹೆ ಬೇಕಿಲ್ಲ ಅಂತಾ ಸಿದ್ದರಾಮಯ್ಯ ಮಾತನಾಡುವುದು ಬೇಡ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯದ ಬಗ್ಗೆ ಪ್ರಮಾಣಪತ್ರ ಬೇಡ: ಮೊನ್ನೆ ದಲಿತರ ಮನೆಯಲ್ಲಿ ಇದ್ದ ಹಾಸಿಗೆ, ದಿಂಬು ಉಪಯೋಗಿಸಿದ್ದೇನೆ. ಕಮೋಡ್ ನನ್ನ ವಾಹನದಲ್ಲಿದೆ. ನನ್ನ ಗ್ರಾಮವಾಸ್ತವ್ಯ ನಕಲು ಮಾಡಲು ಸಿದ್ದರಾಮಯ್ಯ ತಮ್ಮ ಪಕ್ಷದ ಮುಖಂಡರಿಗೆ ಕಲಿಸಲಿಲ್ಲ. ಸಿದ್ದರಾಮಯ್ಯ ಅವರನ್ನು ಮೆಚ್ಚಿಸಲು ನಾನು ಗ್ರಾಮವಾಸ್ತವ್ಯ ಮಾಡುತ್ತಿಲ್ಲ ಎಂದರು.

ಬಂಡಾಯ ಶಾಸಕರ ವಿರುದ್ಧ ನಾನು ಯಾವುದೆ ಕ್ರಮ ಕೈಗೊಳ್ಳಲ್ಲ, ಜನರೇ ಅವರ ಮೇಲೆ ಕ್ರಮಕೈಗೊಳ್ತಾರೆ. ಮಾಗಡಿಯಲ್ಲೂ ಯಾರೊಂದಿಗೂ ಹೊಂದಾಣಿಕೆ ಇಲ್ಲ, ಚನ್ನಪಟ್ಟಣದಲ್ಲೂ ಹೊಂದಾಣಿಕೆ ಇಲ್ಲ. ನಮ್ಮ ಪಕ್ಷ ಎಲ್ಲ ಕಡೆ ಬಲಿಷ್ಠವಾಗಿದೆ, ಬಲವನ್ನ ಹೊಂದಿದ್ದೇವೆ. ಬಿಜೆಪಿಗೆ ಸ್ವಂತ ಬಲದ ಮೇಲೆ ಗೆಲ್ಲುವ ವಿಶ್ವಾಸವಿಲ್ಲ, ಆದುದರಿಂದ, ಅವರಿವರನ್ನ ಪಕ್ಷಕ್ಕೆ ಕರೆದುಕೊಂಡು ಹೋಗ್ತಿದ್ದಾರೆ. ಬೇಕಾದವರನ್ನ ಕರೆದುಕೊಂಡು ಹೋಗಲಿ, ಆಪರೇಷನ್ ಕಮಲ ಮಾಡಿಕೊಳ್ಳಲಿ ಎಂದು ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X