Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಜೇಟ್ಲಿಯವರನ್ನು ಕಿತ್ತೊಗೆಯಬೇಕು:...

ಮೋದಿ ಜೇಟ್ಲಿಯವರನ್ನು ಕಿತ್ತೊಗೆಯಬೇಕು: ಯಶವಂತ ಸಿನ್ಹಾ

ಜಿಎಸ್‌ಟಿ ಗೊಂದಲ

ವಾರ್ತಾಭಾರತಿವಾರ್ತಾಭಾರತಿ10 Nov 2017 8:00 PM IST
share
ಮೋದಿ ಜೇಟ್ಲಿಯವರನ್ನು ಕಿತ್ತೊಗೆಯಬೇಕು: ಯಶವಂತ ಸಿನ್ಹಾ

ಪಾಟ್ನಾ,ನ.10: ಜಿಎಸ್‌ಟಿ ಕುರಿತಂತೆ ದೇಶದಲ್ಲಿ ಗೊಂದಲವನ್ನು ಸೃಷ್ಟಿಸುತ್ತಿರುವುದಕ್ಕಾಗಿ ಮತ್ತು ತೆರಿಗೆ ದರಗಳನ್ನು ಪದೇಪದೇ ಬದಲಾಯಿಸುತ್ತಿರುವುದಕ್ಕಾಗಿ ವಿತ್ತಸಚಿವ ಅರುಣ್ ಜೇಟ್ಲಿಯವರನ್ನು ಮಾಜಿ ವಿತ್ತಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಯಶವಂತ ಸಿನ್ಹಾ ಅವರು ಶುಕ್ರವಾರ ತೀವ್ರ ತರಾಟೆಗೆತ್ತಿಕೊಂಡರು.

 ಜಿಎಸ್‌ಟಿ ಜಾರಿ ವಿಧಾನವನ್ನು ಟೀಕಿಸಿದ ಅವರು, ಜೇಟ್ಲಿಯವರು ವಿತ್ತಸಚಿವರಾಗಿ ತನ್ನ ಕಾರ್ಯ ನಿರ್ವಹಣೆ ವೇಳೆಗೆ ವಿವೇಚನೆಯನ್ನು ಬಳಸಿಲ್ಲ ಎಂಬಂತೆ ಕಂಡು ಬರುತ್ತಿದೆ ಮತ್ತು ಈ ತಪ್ಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸಚಿವರಾಗಿ ಜೇಟ್ಲಿಯವರು ಜಿಎಸ್‌ಟಿಯನ್ನು ರಾಷ್ಟ್ರಮಟ್ಟದಲ್ಲಿ ಅನುಷ್ಠಾನಿಸುವಲ್ಲಿ ಅಗ್ರ ಪಾತ್ರವನ್ನು ವಹಿಸಬೇಕಾಗಿತ್ತು. ಜಿಎಸಟಿ ವ್ಯವಸ್ಥೆಯು ತಪ್ಪುಗಳಿಂದ ಕೂಡಿದೆ ಮತ್ತು ಇದೇ ಕಾರಣಕ್ಕಾಗಿ ಜಿಎಸ್‌ಟಿ ಮಂಡಳಿಯು ಪ್ರತಿದಿನ ತಿದ್ದುಪಡಿಗಳನ್ನು ಮಾಡುತ್ತಿದೆ. ಜಿಎಸ್‌ಟಿಯನ್ನು ರೂಪಿಸುವಾಗ ಜೇಟ್ಲಿಯವರು ತನ್ನ ವಿವೇಚನೆಯನ್ನು ಬಳಸಲಿಲ್ಲ ಎಂದು ತಾನು ಭಾವಿಸಿದ್ದೇನೆ. ಪ್ರಧಾನಿಯವರು ಅವರ ಸ್ಥಾನದಲ್ಲಿ ಬೇರೊಬ್ಬ ದಕ್ಷ ವ್ಯಕ್ತಿಯನ್ನು ನೇಮಿಸಬೇಕು ಎದರು.

 ಜಿಎಸ್‌ಟಿಯಲ್ಲಿ ಆಗಿರುವ ಅಧ್ವಾನವನ್ನು ಸರಿಪಡಿಸಲು ಜಿಎಸ್‌ಟಿ ಕುರಿತು ಸುದೀರ್ಘ ಅಧ್ಯಯನ ನಡೆಸಿರುವ ಖ್ಯಾತ ಅರ್ಥಶಾಸ್ತ್ರಜ್ಞ ವಿಜಯ ಕೇಳಕರ್ ಅವರ ನೇತೃತ್ವದಲ್ಲಿ ನೂತನ ಸಮಿತಿಯೊಂದನ್ನು ಸರಕಾರವು ರೂಪಿಸಬೇಕು ಮತ್ತು ಭವಿಷ್ಯದಲ್ಲಿ ಅದನ್ನು ಸುಲಲಿತ ರೀತಿಯಲ್ಲಿ ಅನುಷ್ಠಾನಿಸಬೇಕು ಎಂದು ಸಿನ್ಹಾ ಹೇಳಿದರು.

ನೋಟು ಅಮಾನ್ಯ ಕ್ರಮ ವಿಫಲ

ನೋಟು ಅಮಾನ್ಯ ಕ್ರಮವು ಯಶಸ್ವಿಯಾಗಿದೆ ಎಂಬ ಮೋದಿಯವರ ಹೇಳಿಕೆಯನ್ನು ತಳ್ಳಿಹಾಕಿದ ಸಿನ್ಹಾ, ವಾಸ್ತವದಲ್ಲಿ ಈ ಕ್ರಮವು ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಹೇಳಿದರು.

ನೋಟು ಅಮಾನ್ಯದ ಉದ್ದೇಶ ಈಡೇರಿಲ್ಲ, ಹೀಗಾಗಿ ಅದು ವಿಫಲಗೊಂಡಿದೆ. ಶೇ.99ರಷ್ಟು ಹಳೆಯ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದ್ದು, ಯಾವುದೇ ಕಪ್ಪುಹಣ ವಾಪಸಾಗಿಲ್ಲ. ಆದರೆ ಸರಕಾರವು ಅದು ಯಶಸ್ವಿಯಾಗಿದೆ ಎಂದು ಬಿಂಬಿಸಲು ಎಂದಿನಂತೆ ಸುಳ್ಳುಗಳ ನೆರವು ಪಡೆದುಕೊಳ್ಳುತ್ತಿದೆ ಎಂದು ಬಂಡುಕೋರ ಜೆಡಿಯು ನಾಯಕ ಉದಯ ನಾರಾಯಣ ಚೌಧರಿ ಅವರು ಇಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಿನ್ಹಾ ಹೇಳಿದರು.

ಮೋದಿ ಸರಕಾರವು ಭ್ರಷ್ಟಾಚಾರದ ವಿರುದ್ಧ ಹೋರಾಟ ಕುರಿತು ಗಂಭೀರವಾಗಿಲ್ಲ ಎಂದು ಆರೋಪಿಸಿದ ಅವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ವ್ಯವಹಾರಗಳ ಬಗ್ಗೆ ತನಿಖೆಗೆ ಏಕೆ ಆದೇಶಿಸಿಲ್ಲ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X