Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನನ್ನು ಬಲಿಪಶು ಮಾಡಲಾಗಿದೆ, ಪೊಲೀಸರ...

ನನ್ನನ್ನು ಬಲಿಪಶು ಮಾಡಲಾಗಿದೆ, ಪೊಲೀಸರ ವಿರುದ್ಧ ದೂರು ದಾಖಲಿಸುವೆ: ರ್ಯಾನ್ ಶಾಲೆ ಬಸ್ ಕಂಡಕ್ಟರ್

ವಾರ್ತಾಭಾರತಿವಾರ್ತಾಭಾರತಿ10 Nov 2017 9:13 PM IST
share
ನನ್ನನ್ನು ಬಲಿಪಶು ಮಾಡಲಾಗಿದೆ, ಪೊಲೀಸರ ವಿರುದ್ಧ ದೂರು ದಾಖಲಿಸುವೆ: ರ್ಯಾನ್ ಶಾಲೆ ಬಸ್ ಕಂಡಕ್ಟರ್

ಗುಡ್ಗಾಂವ್, ನ.10: :ರ್ಯಾನ್ ಅಂತಾರಾಷ್ಟ್ರೀಯ ಶಾಲೆ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ. ಇದಕ್ಕಾಗಿ ಪೊಲೀಸರು ಮತ್ತು ಶಾಲಾ ವ್ಯವಸ್ಥಾಪನಾ ಮಂಡಳಿಯ ವಿರುದ್ಧ ದೂರು ದಾಖಲಿಸುವುದಾಗಿ: ಶಾಲೆಯ ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಹೇಳಿದ್ದಾರೆ. ರ್ಯಾನ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಯ ಹತ್ಯಾ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಶೋಕ್ ಕುಮಾರ್ ವಿರುದ್ಧ ಯಾವುದೇ ಸಾಕ್ಷಿ ಲಭಿಸಿಲ್ಲ ಎಂದು ತಿಳಿಸಿದೆ. ಜೊತೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹನ್ನೊಂದನೆ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 8ರಂದು ರ್ಯಾನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದ ಪ್ರದ್ಯುಮ್ನ ಠಾಕೂರ್‌ನನ್ನು ಶಾಲೆಯ ಶೌಚಾಲಯದಲ್ಲಿ ಕತ್ತುಸೀಳಿ ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ಶಾಲಾ ಬಸ್ ಕಂಡಕ್ಟರ್ ಅಶೋಕ್ ಕುಮಾರ್‌ನನ್ನು ಬಂಧಿಸಿದ್ದರು. ಆದರೆ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ ಅದೇ ಶಾಲೆಯಲ್ಲಿ ಹನ್ನೊಂದನೆ ತರಗತಿಯಲ್ಲಿ ಕಲಿಯುತ್ತಿದ್ದ 16ರ ಹರೆಯದ ವಿದ್ಯಾರ್ಥಿಯನ್ನು ಬಂಧಿಸುವ ಮೂಲಕ ಇಡೀ ಪ್ರಕರಣ ತಿರುವು ಪಡೆದುಕೊಂಡಿತು. ಪೊಲೀಸರು ಅಶೋಕ್ ಕುಮಾರ್‌ಗೆ ಮಾದಕ ದ್ರವ್ಯ ನೀಡಿ ಚಿತ್ರಹಿಂಸೆ ನೀಡುವ ಮೂಲಕ ತಪ್ಪೊಪ್ಪಿಕೊಳ್ಳುವಂತೆ ಮಾಡಿದ್ದಾರೆ. ನೈಜ ಆರೋಪಿಯನ್ನು ರಕ್ಷಿಸುವ ಸಲುವಾಗಿ ಅವರನ್ನು ಬಲಿಪಶು ಮಾಡಲಾಗಿದೆ ಎಂದು ಕುಮಾರ್ ಪರ ವಕೀಲಾದ ಮೋಹಿತ್ ವರ್ಮಾ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣವಾಗಿ ಎಡವಿದ್ದಾರೆ. ವಿದ್ಯಾರ್ಥಿಯನ್ನು ಹತ್ಯೆ ಮಾಡಲು ಅಶೋಕ್ ಕುಮಾರ್‌ಗೆ ಉದ್ದೇಶವಿರಲಿಲ್ಲ ಎಂದು ಹೇಳಿರುವ ಸಿಬಿಐ ಇದೇ ವೇಳೆ ಬಂಧಿತ 16ರ ಹರೆಯದ ವಿದ್ಯಾರ್ಥಿಗೆ ಉದ್ದೇಶವಿತ್ತು ಎಂಬುದನ್ನು ಸಾಬೀತುಪಡಿಸಿದ್ದೆ ಎಂದು ತಿಳಿಸಿರುವ ವಕೀಲರು ಕುಮಾರ್‌ಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ಹಾಗೂ ಅವಮಾನ ಮಾಡಿದ ಪೊಲೀಸರು ಮತ್ತು ಶಾಲಾ ಮಂಡಳಿಯ ವಿರುದ್ಧ ದೂರು ದಾಖಲಿಸುವುದಾಗಿ ತಿಳಿಸಿದರು.

ಪೊಲೀಸರು ಅಸ್ಪಷ್ಟವಾಗಿದೆ ಎಂದು ತಳ್ಳಿಹಾಕಿದ್ದ ಸಿಸಿ ಟಿವಿ ಕ್ಯಾಮೆರಾದ ಮೂಲಕವೇ ಸಿಬಿಐ ಅಧಿಕಾರಿಗಳು ನೈಜ ಆರೋಪಿಯನ್ನು ಬಂಧಿಸಿದ್ದಾರೆ. ಹಾಗಾಗಿ ಪೊಲೀಸರು ಇಡೀ ಪ್ರಕರಣವನ್ನು ಮರುರೂಪಿಸಿದ್ದರು. ಅವರು ಒರ್ವ ಮುಗ್ಧ ವ್ಯಕ್ತಿಯನ್ನು ಆರೋಪಿಯನ್ನಾಗಿಸಿದರು. ಪೊಲೀಸರು ಯಾರ ಒತ್ತಡಕ್ಕೆ ಮಣಿದು ಹೀಗೆ ಮಾಡಿದರು ಎಂಬುದು ತನಿಖೆಯಿಂದ ತಿಳಿಯಬೇಕು. ಆದರೆ ಅಶೋಕ್ ಕುಮಾರ್ ಮೇಲೆ ನಡೆದಿರುವುದು ಚಿತ್ರಹಿಂಸೆ ಎಂದು ವರ್ಮಾ ತಿಳಿಸಿದರು.

ಪ್ರಕರಣದಲ್ಲಿ ಕುಮಾರ್ ವಿರುದ್ಧ ಸಿಬಿಐಗೆ ಯಾವುದೇ ಸಾಕ್ಷಿ ಸಿಕ್ಕಿಲ್ಲ ಆದರೂ ಅವರನ್ನು ಇನ್ನೂ ಪ್ರಕರಣದಿಂದ ಮುಕ್ತಗೊಳಿಸಿಲ್ಲ. ಸಿಬಿಐಗೆ ಮೃತ ವಿದ್ಯಾರ್ಥಿಯ ಮೇಲೆ ಲೈಂಗಿಕ ಶೋಷಣೆ ನಡೆದಿದೆ ಎಂಬುದಕ್ಕೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ವರ್ಮಾ ವಿವರಿಸಿದರು.

ವಿದ್ಯಾರ್ಥಿಯ ಹತ್ಯಾ ಪ್ರಕರಣದಲ್ಲಿ ಅಶೋಕ್ ಕುಮಾರ್ ಬಂಧನವಾದಾಗ ಆತನ ಪರ ನ್ಯಾಯಾಲಯದಲ್ಲಿ ವಾದಿಸಬಾರದು ಎಂದು ಗುಡ್ಗಾಂವ್‌ನ ಸೊಹ್ನಾದ ವಕೀಲರ ಮಂಡಳಿ ಜಂಟಿಯಾಗಿ ಆದೇಶ ಹೊರಡಿಸಿತ್ತು. ಹಾಗಾಗಿ ಕುಮಾರ್ ಕುಟುಂಬ ವರ್ಮಾರನ್ನು ವಾದಿಸುವಂತೆ ಮನವಿ ಮಾಡಿತ್ತು. ಸದ್ಯ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಯು ತನ್ನ ತಂದೆ ಹಾಗೂ ಒರ್ವ ಸ್ವತಂತ್ರ ಸಾಕ್ಷಿಯ ಮುಂದೆ ಕೊಲೆ ಆರೋಪವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿರುವ ಸಿಬಿಐ ಅಧಿಕಾರಿಗಳು ನ್ಯಾಯಾಲಯವು ಆತನನ್ನು ಮೂರು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X