Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಕರ್ನಾಟಕ 649 ರನ್

ರಣಜಿ ಟ್ರೋಫಿ: ಕರ್ನಾಟಕ 649 ರನ್

ಸ್ಟುವರ್ಟ್ ಬಿನ್ನಿ ಶತಕ, ಶ್ರೇಯಸ್ ಗೋಪಾಲ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ10 Nov 2017 11:27 PM IST
share
ರಣಜಿ ಟ್ರೋಫಿ: ಕರ್ನಾಟಕ 649 ರನ್

ಆಲೂರು(ಕರ್ನಾಟಕ), ನ.10: ಮಾಯಾಂಕ್ ಅಗರವಾಲ್(176), ಸ್ಟುವರ್ಟ್ ಬಿನ್ನಿ(118) ಶತಕ, ಶ್ರೇಯಸ್ ಗೋಪಾಲ್(92) ಅರ್ಧಶತಕದ ಕೊಡುಗೆಯ ಸಹಾಯದಿಂದ ಕರ್ನಾಟಕ ತಂಡ ದಿಲ್ಲಿ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ 649 ರನ್ ಕಲೆ ಹಾಕಿದೆ.

ಇಲ್ಲಿನ ಕೆಎಸ್‌ಸಿಎ ಕ್ರಿಕೆಟ್ ಗ್ರೌಂಡ್‌ನಲ್ಲಿ ಎರಡನೆ ದಿನವಾದ ಶುಕ್ರವಾರ 4 ವಿಕೆಟ್‌ಗಳ ನಷ್ಟಕ್ಕೆ 348 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಕರ್ನಾಟಕ ತಂಡ ದಿಲ್ಲಿ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿತು.

ಅಜೇಯ 169 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಮಾಯಾಂಕ್ ಅಗರವಾಲ್ ನಿನ್ನೆಯ ಮೊತ್ತಕ್ಕೆ ಕೇವಲ 7 ರನ್ ಸೇರಿಸುವಷ್ಟರಲ್ಲಿ ರನೌಟಾದರು. ನಿತಿಶ್ ರಾಣಾ ಅವರ ನೇರ ಎಸೆತಕ್ಕೆ ರನೌಟಾದ ಅಗರವಾಲ್ 250 ಎಸೆತಗಳಲ್ಲಿ 24 ಬೌಂಡರಿ, 3 ಸಿಕ್ಸರ್‌ಗಳ ಸಹಿತ 176 ರನ್ ಗಳಿಸಿದರು.

ಶತಕವೀರ ಮಾಯಾಂಕ್ ಔಟಾದ ಬಳಿಕ ಜೊತೆಗೂಡಿದ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ(118 ರನ್, 155 ಎಸೆತ, 18 ಬೌಂಡರಿ) ಹಾಗೂ ವಿಕೆಟ್‌ಕೀಪರ್ ಸಿಎಂ ಗೌತಮ್(46 ರನ್,81 ಎಸೆತ, 8 ಬೌಂಡರಿ)6ನೆ ವಿಕೆಟ್‌ಗೆ 111 ರನ್ ಜೊತೆಯಾಟ ನಡೆಸಿ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.

 121.3ನೆ ಓವರ್‌ನಲ್ಲಿ ಮನನ್ ಶರ್ಮ ಈ ಜೋಡಿಯನ್ನು ಬೇರ್ಪಡಿಸಿದರು. ಗೌತಮ್ ಔಟಾದ ಬಳಿಕ ಬಾಲಂಗೋಚಿ ಶ್ರೇಯಸ್ ಗೋಪಾಲ್‌ರೊಂದಿಗೆ ಕೈಜೋಡಿಸಿದ ಬಿನ್ನಿ 7ನೆ ವಿಕೆಟ್‌ಗೆ 55 ರನ್ ಸೇರಿಸಿದರು. ಆಕರ್ಷಕ ಶತಕ ಸಿಡಿಸಿದ ಬಿನ್ನಿಗೆ ವಿಕಾಸ್ ಟೊಕಾಸ್ ಪೆವಿಲಿಯನ್ ಹಾದಿ ತೋರಿಸಿದರು.

ಬಿನ್ನಿ ಔಟಾದಾಗ ದೃತಿಗೆಡದ ಸ್ಪಿನ್ನರ್ ಎಸ್.ಗೋಪಾಲ್ ಕೆಳ ಕ್ರಮಾಂಕದಲ್ಲಿ ಭರ್ಜರಿ ಅರ್ಧಶತಕ(92, 165 ಎಸೆತ, 11 ಬೌಂಡರಿ, 1 ಸಿಕ್ಸರ್)ಸಿಡಿಸಿದ್ದಲ್ಲದೆ ಅಭಿಮನ್ಯು ಮಿಥುನ್(ಅಜೇಯ 35, 70 ಎಸೆತ, 4 ಬೌಂಡರಿ, 1 ಸಿಕ್ಸರ್) ಅವರೊಂದಿಗೆ ಕೊನೆಯ ವಿಕೆಟ್‌ನಲ್ಲಿ 101 ರನ್ ಜೊತೆಯಾಟ ನಡೆಸಿ ತಂಡ 172.2 ಓವರ್‌ಗಳಲ್ಲಿ 649 ರನ್ ಗಳಿಸಲು ನೆರವಾದರು.

ದಿಲ್ಲಿಯ ಪರ ಮನನ್ ಶರ್ಮ(3-151) ಹಾಗೂ ವಿಕಾಸ್ ಮಿಶ್ರಾ(3-152) ತಲಾ 3 ವಿಕೆಟ್‌ಗಳನ್ನು ಕಬಳಿಸಿದರು.

ಕರ್ನಾಟಕದ ಬೃಹತ್ ಮೊತ್ತಕ್ಕೆ ಉತ್ತರಿಸಹೊರಟಿರುವ ದಿಲ್ಲಿ ಎರಡನೆ ದಿನದಾಟದಂತ್ಯಕ್ಕೆ 5 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 20 ರನ್ ಗಳಿಸಿದೆ. ಉನ್ಮುಕ್ತ್ ಚಂದ್(ಅಜೇಯ 8) ಹಾಗೂ ಗೌತಮ್ ಗಂಭೀರ್(ಅಜೇಯ 12) ಕ್ರೀಸ್ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್

ಕರ್ನಾಟಕ: 172.2 ಓವರ್‌ಗಳಲ್ಲಿ 649/10

(ಮಾಯಾಂಕ್ ಅಗರವಾಲ್ 176, ಸ್ಟುವರ್ಟ್ ಬಿನ್ನಿ 118, ಶ್ರೇಯಸ್ ಗೋಪಾಲ್ 92, ಮನೀಷ್ ಪಾಂಡೆ 74, ಸಮರ್ಥ್ 58,ವಿಕಾಸ್ 3-152, ಮನನ್ ಶರ್ಮ 3-151)

ದಿಲ್ಲಿ: 5 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 20/0

(ಉನ್ಮುಕ್ತ್ ಚಂದ್ ಅಜೇಯ 8, ಗೌತಮ್ ಗಂಭೀರ್ ಅಜೇಯ 12)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X