Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ : ಕರ್ನಾಟಕ -ದಿಲ್ಲಿ ...

ರಣಜಿ ಟ್ರೋಫಿ : ಕರ್ನಾಟಕ -ದಿಲ್ಲಿ ಪಂದ್ಯ ಡ್ರಾ

► ಶತಕ ವಂಚಿತ ಲೋಕೇಶ್ ರಾಹುಲ್ ► ಅಗ್ರ ಸ್ಥಾನಕ್ಕೇರಿದ ವಿನಯ್ ಪಡೆ

ವಾರ್ತಾಭಾರತಿವಾರ್ತಾಭಾರತಿ12 Nov 2017 10:38 PM IST
share
ರಣಜಿ ಟ್ರೋಫಿ : ಕರ್ನಾಟಕ -ದಿಲ್ಲಿ  ಪಂದ್ಯ ಡ್ರಾ

 ಬೆಂಗಳೂರು, ನ.12: ಕರ್ನಾಟಕ ಮತ್ತು ದಿಲ್ಲಿ ತಂಡಗಳ ನಡುವಿನ ರಣಜಿ ಟ್ರೋಫಿ ‘ಎ’ ಗುಂಪಿನ ಪಂದ್ಯ ರವಿವಾರ ಡ್ರಾದಲ್ಲಿ ಕೊನೆಗೊಂಡಿದೆ.

 ಆಲೂರಿನ ಕೆಎಸ್‌ಸಿಎ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಪಂದ್ಯ ಡ್ರಾಗೊಂಡಿದ್ದರೂ, ಮೊದಲ ಇನಿಂಗ್ಸ್ ಮುನ್ನಡೆ ಆಧಾರದಲ್ಲಿ 3 ಅಂಕಗಳನ್ನು ಕರ್ನಾಟಕ ತನ್ನ ಖಾತೆಗೆ ಸೇರಿಸಿಕೊಂಡಿದೆ. ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 649 ರನ್ ಗಳಿಸಿತ್ತು. ಆದರೆ ದಿಲ್ಲಿ 301 ರನ್‌ಗಳಿಗೆ ಆಲೌಟಾಗಿತ್ತು. ಇದರೊಂದಿಗೆ ಕರ್ನಾಟಕ 348 ರನ್‌ಗಳ ಮುನ್ನಡೆ ಸಾಧಿಸಿತ್ತು. ಕರ್ನಾಟಕ ಒಟ್ಟು 23 ಅಂಕಗಳನ್ನು ಗಳಿಸಿ ’ಎ’ ಗುಂಪಿನಲ್ಲಿ ಅಗ್ರ ಸ್ಥಾನ ಗಿಟ್ಟಿಸಿಕೊಂಡಿದೆ. ದಿಲ್ಲಿ 17 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ.

ಪಂದ್ಯದ ನಾಲ್ಕನೇ ದಿನವಾಗಿರುವ ರವಿವಾರ ದಿನದಾಟದಂತ್ಯಕ್ಕೆ ಕರ್ನಾಟಕ ಎರಡನೇ ಇನಿಂಗ್ಸ್‌ನಲ್ಲಿ 63 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 235 ರನ್ ಗಳಿಸಿತು.

 ಮೂರನೇ ದಿನದಾಟದಂತ್ಯಕ್ಕೆ ದಿಲ್ಲಿ ತಂಡ 84 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 277 ರನ್ ಗಳಿಸಿತ್ತು. ನಾಯಕ ಗೌತಮ್ ಗಂಭೀರ್ 41ನೇ ಪ್ರಥಮ ದರ್ಜೆ ಶತಕ(135) ದಾಖಲಿಸಿ ಔಟಾಗದೆ ಉಳಿದಿದ್ದರು. ಇಂದು ಅವರು ಬ್ಯಾಟಿಂಗ್ ಮುಂದುವರಿಸಿ 144 ರನ್ ಗಳಿಸಿ ಅಭಿಮನ್ಯು ಮಿಥುನ್‌ಗೆ ವಿಕೆಟ್ ಒಪ್ಪಿಸಿದರು.

ಅಭಿಮನ್ಯು ಮಿಥುನ್(70ಕ್ಕೆ 5) ದಾಳಿಗೆ ಸಿಲುಕಿದ ದಿಲ್ಲಿ ತಂಡ 95 ಓವರ್‌ಗಳಲ್ಲಿ 301 ರನ್‌ಗಳಿಗೆ ಮೊದಲ ಇನಿಂಗ್ಸ್ ಮುಗಿಸಿತು. ಇಂದಿನ ಆಟದಲ್ಲಿ ದಿಲ್ಲಿ ಮೂರನೇ ದಿನದಾಟದಂತ್ಯಕ್ಕೆ ಗಳಿಸಿದ್ದ ಮೊತ್ತಕ್ಕೆ 24 ರನ್ ಗಳಿಸುವಷ್ಟರಲ್ಲಿ ಅಂತಿಮ 6 ವಿಕೆಟ್‌ಗಳನ್ನು ಕೈ ಚೆಲ್ಲಿತು.

 ರವಿಕುಮಾರ್ ಸಮರ್ಥ ಜೊತೆ ಎರಡನೆ ಇನಿಂಗ್ಸ್ ಆರಂಭಿಸಿದ ಆರಂಭಿಕ ದಾಂಡಿಗ ಲೋಕೇಶ್ ರಾಹುಲ್ ಶತಕ ವಂಚಿತಗೊಂಡರು. ರಾಹುಲ್ ಮತ್ತು ಸಮರ್ಥ್ ಮೊದಲ ವಿಕೆಟ್ ಜೊತೆಯಾಟದಲ್ಲಿ 30.1 ಓವರ್‌ಗಳಲ್ಲಿ 121 ರನ್ ಸೇರಿಸಿದರು.

31ನೆ ಓವರ್‌ನ ಮೊದಲ ಎಸೆತದಲ್ಲಿ ಮನನ್ ಶರ್ಮಾ ಅವರು ಕರ್ನಾಟಕದ ಸಮರ್ಥ್(47) ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಸಮರ್ಥ್ ಅವರು 3 ರನ್‌ನಿಂದ ಅರ್ಧಶತಕ ವಂಚಿತಗೊಂಡರು.

ಎರಡನೆ ವಿಕೆಟ್‌ಗೆ ಲೋಕೇಶ್ ರಾಹುಲ್ ಮತ್ತು ಮಾಯಾಂಕ್ ಅಗರವಾಲ್ 40 ರನ್ ಸೇರಿಸಿದರು. ಲೋಕೇಶ್ ರಾಹುಲ್ ಶತಕದ ನಿರೀಕ್ಷೆಯಲ್ಲಿದ್ದರು. ಆದರೆ 92 ರನ್(109ಎ,9ಬೌ,2ಸಿ) ಗಳಿಸಿದ್ದಾಗ ರನೌಟಾಗುವುದರೊಂದಿಗೆ ಪೆವಿಲಿಯನ್ ಸೇರಿದರು.

ಮೊದಲ ಇನಿಂಗ್ಸ್‌ನಲ್ಲಿ ಶತಕ ದಾಖಲಿಸಿದ್ದ ಮಾಯಾಂಕ್ ಅಗರವಾಲ್ 23 ರನ್ ಗಳಿಸಿ ನವದೀಪ್ ಸೈನಿಗೆ ವಿಕೆಟ್ ಒಪ್ಪಿಸಿದರು. ಕರುಣ್ ನಾಯರ್ ಔಟಾಗದೆ 33 ರನ್ ಮತ್ತು ಮನೀಷ್ ಪಾಂಡೆ ಔಟಾಗದೆ 34 ರನ್ ಗಳಿಸಿದರು. ದಿಲ್ಲಿ ತಂಡದ ನವ್‌ದೀಪ್ ಸೈನಿ ಮತ್ತು ಮನನ್ ಶರ್ಮಾ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X