Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಯಕ ಸಂಜು ಶತಕ; ಲಂಕಾ ವಿರುದ್ಧದ ಅಭ್ಯಾಸ...

ನಾಯಕ ಸಂಜು ಶತಕ; ಲಂಕಾ ವಿರುದ್ಧದ ಅಭ್ಯಾಸ ಪಂದ್ಯ ಡ್ರಾ

ವಾರ್ತಾಭಾರತಿವಾರ್ತಾಭಾರತಿ12 Nov 2017 10:42 PM IST
share
ನಾಯಕ ಸಂಜು ಶತಕ; ಲಂಕಾ ವಿರುದ್ಧದ ಅಭ್ಯಾಸ ಪಂದ್ಯ ಡ್ರಾ

ಕೋಲ್ಕತಾ, ನ.12: ಮಂಡಳಿ ಅಧ್ಯಕ್ಷರ ಇಲೆವೆನ್ ತಂಡದ ನಾಯಕ ಸಂಜು ಸ್ಯಾಮ್ಸನ್ ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಸೊಗಸಾದ ಶತಕ ದಾಖಲಿಸಿದ್ದಾರೆ. ಇದರೊಂದಿಗೆ ಎರಡು ದಿನಗಳ ಅಭ್ಯಾಸ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಇಲ್ಲಿನ ಜೋಧಪುರ ವಿವಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡ ಶನಿವಾರ ದಿನದಾಟದಂತ್ಯಕ್ಕೆ ಮೊದಲ ಇನಿಂಗ್ಸ್‌ನಲ್ಲಿ 88 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 411 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಪಂದ್ಯದ ಎರಡನೆ ದಿನವಾಗಿರುವ ರವಿವಾರ ಭಾರತದ ಮಂಡಳಿ ಅಧ್ಯಕ್ಷರ ಇಲೆವೆನ್ ತಂಡ 75 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 287 ರನ್ ಗಳಿಸಿತು.

 ಲಂಕಾದ ಬೃಹತ್ ಸವಾಲಿಗೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಮಂಡಳಿ ಅಧ್ಯಕ್ಷರ ತಂಡ ಊಟದ ವಿರಾಮದ ಹೊತ್ತಿಗೆ 31ಕ್ಕೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಲಹಿರು ತಿರಿಮನ್ನೆ ದಾಳಿಗೆ ಸಿಲುಕಿ ಆರಂಭಿಕ ದಾಂಡಿಗರಾದ ತನ್ಮಯ್ ಅಗರ್‌ವಾಲ್ (16) ಮತ್ತು ಆಕಾಶ್ ಭಂಡಾರಿ(3) ಔಟಾಗಿ ಪೆವಿಲಿಯನ್ ಸೇರಿದ್ದರು. ಮೂರನೇ ವಿಕೆಟ್‌ಗೆ ಜೀವನ್‌ಜ್ಯೋತ್ ಸಿಂಗ್‌ಗೆ ನಾಯಕ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಜೊತೆಯಾದರು. ಇವರು ಮೂರನೇ ವಿಕೆಟ್‌ಗೆ 68 ರನ್‌ಗಳ ಜೊತೆಯಾಟ ನೀಡಿದರು.

ಜೀವನ್‌ಜ್ಯೋತ್ ಸಿಂಗ್(35) ಔಟಾದ ಬಳಿಕ ನಾಲ್ಕನೇ ವಿಕೆಟ್‌ಗೆ ರೋಹನ್‌ಪ್ರೇಮ್ ಅವರು ಸಂಜುಗೆ ಸಾಥ್ ನೀಡಿದರು. ಇವರ ಮೂಲಕ ನಾಲ್ಕನೆ ವಿಕೆಟ್‌ಗೆ 71 ರನ್ ತಂಡದ ಖಾತೆಗೆ ಸೇರ್ಪಡೆಗೊಂಡಿತು.ರೋಹನ್ ಪ್ರೇಮ್ 39 ರನ್ ಗಳಿಸಿ ಔಟಾದರು.

  ಐದನೇ ವಿಕೆಟ್‌ಗೆ ಸಂಜು ಮತ್ತು ಭಾವನಕಾ ಸಂದೀಪ್ ಅವರು 85 ರನ್ ಜಮೆ ಮಾಡಿದರು.

ನಮನ್ ಓಜಾ ಗಾಯಗೊಂಡು ಹೊರಗುಳಿದ ಹಿನ್ನೆಲೆಯಲ್ಲಿ ತಂಡದ ನಾಯಕತ್ವ ವಹಿಸಿದ್ದ ಸಂಜು ಸ್ಯಾಮ್ಸನ್ ತನ್ನ ಮೇಲೆ ಆಯ್ಕೆ ಸಮಿತಿ ಇಟ್ಟುಕೊಂಡ ವಿಶ್ವಾಸವನ್ನು ಉಳಿಸಿಕೊಂಡರು. ಅವರು 143 ಎಸೆತಗಳನ್ನು ಎದುರಿಸಿದರು. 19 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ 128 ರನ್ ಗಳಿಸಿ ಸಮರವಿಕ್ರಮ ಎಸೆತದಲ್ಲಿ ದಿಕ್ವೆಲಾಗೆ ಕ್ಯಾಚ್ ನೀಡಿದರು.

ಸಂದೀಪ್ ಔಟಾಗದೆ 33 ರನ್ ಮತ್ತು ಜಲಜ್ ಸಕ್ಸೇನಾ ಔಟಾಗದೆ 20 ರನ್ ಗಳಿಸಿದರು.

 ಶ್ರೀಲಂಕಾದ 10 ಬೌಲರ್‌ಗಳು ದಾಳಿ ನಡೆಸಿದ್ದರು. ಲಕ್ಷನ್ ಸಂಡಕನ್ 12 ಓವರ್‌ಗಳ ಬೌಲಿಂಗ್ ನಡೆಸಿದರು. 54 ರನ್ ನೀಡಿದರೂ ಅವರಿಗೆ ವಿಕೆಟ್ ದಕ್ಕಲಿಲ್ಲ. ಲಹಿರು ತಿರಿಮನ್ನೆ 6 ಓವರ್‌ಗಳಲ್ಲಿ 22ಕ್ಕೆ 2 ವಿಕೆಟ್, ದಿಲ್ರುವಾನ್ ಪೆರೆರಾ, ಧನಂಜಯ್ ಡಿ ಸಿಲ್ವ ಮತ್ತು ಸದೀರಾ ಸಮರವಿಕ್ರಮ ತಲಾ 1 ವಿಕೆಟ್ ಪಡೆದರು. ಬದಲಿ ವಿಕೆಟ್ ಕೀಪರ್ ಆಗಿರುವ ಸಮರವಿಕ್ರಮ ಕೂಡಾ ಬೌಲಿಂಗ್ ನಡೆಸಿ 4 ಓವರ್‌ಗಳಲ್ಲಿ 13 ರನ್ ನೀಡಿ 1 ವಿಕೆಟ್ ಪಡೆದಿರುವುದು ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X