Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಇಂಟರ್ನೆಟ್ ಸಂಪರ್ಕವಿಲ್ಲದ ಮೊಬೈಲ್...

ಇಂಟರ್ನೆಟ್ ಸಂಪರ್ಕವಿಲ್ಲದ ಮೊಬೈಲ್ ಫೋನ್‌ಗಳಲ್ಲಿ ಬ್ಯಾಂಕ್ ಬ್ಯಾಲನ್ಸ್ ನೋಡುವುದು ಹೇಗೆ?

ವಾರ್ತಾಭಾರತಿವಾರ್ತಾಭಾರತಿ13 Nov 2017 1:49 PM IST
share
ಇಂಟರ್ನೆಟ್ ಸಂಪರ್ಕವಿಲ್ಲದ ಮೊಬೈಲ್ ಫೋನ್‌ಗಳಲ್ಲಿ ಬ್ಯಾಂಕ್ ಬ್ಯಾಲನ್ಸ್ ನೋಡುವುದು ಹೇಗೆ?

ಖಾತೆಯಲ್ಲಿನ ಶಿಲ್ಕು ತಿಳಿದುಕೊಳ್ಳುವುದು, ಮಿನಿ ಸ್ಟೇಟ್‌ಮೆಂಟ್‌ಗಳನ್ನು ಪಡೆದುಕೊಳ್ಳುವದು ಮತ್ತು ಹಣ ವರ್ಗಾವಣೆಯಂತಹ ಎಲ್ಲ ಬ್ಯಾಂಕಿಂಗ್ ಸೌಲಭ್ಯಗಳನ್ನು ಇಂಟರ್ನೆಟ್ ಸಂಪರ್ಕವಿಲ್ಲದ ಮೊಬೈಲ್ ಫೋನ್‌ಗಳಲ್ಲಿಯೂ ಪಡೆದುಕೊಳ್ಳಬಹು ದಾಗಿದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಭಾರತದಲ್ಲಿ ಮೊಬೈಲ್ ಮತ್ತು ಅಂತರ್ಜಾಲ ಕ್ರಾಂತಿಯೇ ನಡೆಯುತ್ತಿದ್ದರೂ ಪ್ರತಿಯೊಬ್ಬರ ಬಳಿಯೂ ಸ್ಮಾರ್ಟ್‌ಫೋನ್‌ಗಳಿಲ್ಲ ಮತ್ತು ಎಲ್ಲರೂ ಅಂತರ್ಜಾಲ ಸಂಪರ್ಕವನ್ನು ಹೊಂದಿಲ್ಲ. ಈ ಎರಡೂ ಸಂದರ್ಭಗಳಲ್ಲಿ ಮೊಬೈಲ್ ಫೋನ್ ಮೂಲಕ ಪ್ರಾಥಮಿಕ ಬ್ಯಾಂಕಿಂಗ್ ಚಟುವಟಿಕೆಗಳನ್ನು ನಡೆಸಬಹುದು.

ಅಂತರ್ಜಾಲ ಸಂಪರ್ಕವಿಲ್ಲದೆ ಮೊಬೈಲ್ ಫೋನ್ ಮೂಲಕ ಎರಡು ರೀತಿಗಳಲ್ಲಿ ಬ್ಯಾಂಕ್ ಖಾತೆಯಲ್ಲಿಯ ಶಿಲ್ಕನ್ನು ತಿಳಿದುಕೊಳ್ಳಬಹುದಾಗಿದೆ...ಒಂದು ಮಿಸ್ಡ್ ಕಾಲ್ ಸೌಲಭ್ಯದ ಮೂಲಕ ಮತ್ತು ಇನ್ನೊಂದು ಮೊಬೈಲ್‌ನಿಂದ *99# ಗೆ ಡಯಲ್ ಮಾಡುವ ಮೂಲಕ.

1)ಮಿಸ್ಡ್ ಕಾಲ್ ಸೌಲಭ್ಯ

ಸಂಪೂರ್ಣ ಉಚಿತವಾಗಿರುವ ಈ ಸೌಲಭ್ಯವನ್ನು ಪಡೆಯಲು ನಿಮ್ಮ ಮೊಬೈಲ್ ಸಂಖ್ಯೆಯು ನಿಮ್ಮ ಬ್ಯಾಂಕಿನಲ್ಲಿ ನೋಂದಣಿಯಾಗಿರಬೇಕು. ಈ ಸೇವೆಯ ಮೂಲಕ ನಿಮ್ಮ ಖಾತೆಯಲ್ಲಿನ ಶಿಲ್ಕು ಹಣ ಮತ್ತು ಹಿಂದಿನ ಐದು ವಹಿವಾಟುಗಳ ಬಗ್ಗೆ ತಿಳಿದುಕೊಳ್ಳಬಹುದು.

ಪ್ರತಿಯೊಂದು ಬ್ಯಾಂಕ್ ತನ್ನದೇ ಆದ ಮಿಸ್ಡ್ ಕಾಲ್ ಬ್ಯಾಂಕಿಂಗ್ ಸಂಖ್ಯೆಯನ್ನು ಹೊಂದಿದೆ. ಈ ಸಂಖ್ಯೆಗೆ ನಿಮ್ಮ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿದರೆ ಕೆಲವು ರಿಂಗ್‌ಗಳ ಬಳಿಕ ಸಂಪರ್ಕವು ತನ್ನಿಂದ ತಾನೇ ಕಡಿತಗೊಳ್ಳುತ್ತದೆ ಮತ್ತು ತಕ್ಷಣವೇ ನಿಮ್ಮ ಖಾತೆಯಲ್ಲಿನ ಶಿಲ್ಕು ಮತ್ತು ನಿಮ್ಮ ಹಿಂದಿನ ಐದು ವಹಿವಾಟುಗಳ ವಿವರಗಳಿರುವ ಎಸ್‌ಎಂಎಸ್‌ಗಳು ನಿಮ್ಮ ಫೋನ್‌ಗೆ ಬರುತ್ತವೆ.

2) *99#  ಸೌಲಭ್ಯ

ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ(ಎನ್‌ಪಿಸಿಐ) ದೇಶಾದ್ಯಂತದ ಜಿಎಸ್‌ಎಂ ಮೊಬೈಲ್ ಚಂದಾದಾರರಿಗಾಗಿ ಈ ವಿಶಿಷ್ಟ ಸೇವೆಯನ್ನು ಆರಂಭಿಸಿದೆ.*99# ಕೋಡ್ ಎಲ್ಲ ಮೊಬೈಲ್ ದೂರವಾಣಿ ಕಂಪನಿಗಳಿಗೆ ಸಾಮಾನ್ಯ ವಾಗಿದೆ. ಈ ಸೇವೆಗಾಗಿ ಯಾವುದೇ ಹೆಚ್ಚುವರಿ ರೋಮಿಂಗ್ ಶುಲ್ಕವನ್ನು ವಿಧಿಸಲಾ ಗುವುದಿಲ್ಲ. ಸೇವೆಯನ್ನು ರಜೆಗಳು ಸೇರಿದಂತೆ ವಾರದ ಎಲ್ಲ ದಿನಗಳಲ್ಲಿ 24 ಗಂಟೆಗಳ ಕಾಲ ಪಡೆಯಬಹುದಾಗಿದ್ದು, ಇದಕ್ಕಾಗಿ ಮೊಬೈಲ್‌ನಲ್ಲಿ ಯಾವುದೇ ಆ್ಯಪ್ ಇನ್‌ಸ್ಟಾಲ್ ಮಾಡಿಕೊಳ್ಳಬೇಕಾಗಿಲ್ಲ. ಈ ಸೌಲಭ್ಯವು 12 ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಹಣಕಾಸು ಮತ್ತು ಹಣಕಾಸೇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಶಿಲ್ಕು ವಿಚಾರಣೆ, ಮಿನಿ ಸ್ಟೇಟ್‌ಮೆಂಟ್,ವಿವಿಧ ವಹಿವಾಟುಗಳಿಗಾಗಿ ಒಂದು ಬಾರಿಯ ಪಾಸ್‌ವರ್ಡ್(ಒಟಿಪಿ) ಸೃಷ್ಟಿ, ಮೊಬೈಲ್ ಪಿನ್ ಮತ್ತು ಮೊಬೈಲ್ ಮನಿ ಐಡೆಂಟಿಫೈಯರ್(ಎಂಎಂಐಡಿ)ಗಳ ಸೃಷ್ಟಿಯಂತಹ ಸೌಲಭ್ಯಗಳು ಹಣಕಾಸೇತರ ಸೇವೆಗಳಲ್ಲಿ ಸೇರಿವೆ

*99# ಸೌಲಭ್ಯದ ಮೂಲಕ ಎಂಎಂಐಡಿ ಅಥವಾ ಐಎಸ್‌ಎಫ್‌ಸಿ ಅಥವಾ ಆಧಾರ್ ಬಳಸಿ ಫಲಾನುಭವಿಗಳಿಗೆ ಹಣ ರವಾನೆಯಂತಹ ಹಣಕಾಸು ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

*99#ಸೌಲಭ್ಯದ ಮೂಲಕ ಖಾತೆಯಲ್ಲಿನ ಶಿಲ್ಕು ತಿಳಿಯುವ ವಿಧಾನ

ನಿಮ್ಮ ಮೊಬೈಲ್ ಫೋನ್‌ನಿಂದ *99# ಗೆ ಡಯಲ್ ಮಾಡಿದರೆ ವೆಲ್‌ಕಮ್ ಸ್ಕ್ರೀನ್ ಕಾಣಿಸಿಕೊಂಡು ನಿಮ್ಮ ಬ್ಯಾಂಕಿನ ಮೂರು ಅಕ್ಷರಗಳ ಸಂಕ್ಷಿಪ್ತ ಹೆಸರು ಅಥವಾ ಐಎಫ್‌ಎಸ್‌ಸಿಯ ಮೊದಲ ನಾಲ್ಕು ಅಕ್ಷರಗಳನ್ನು ಕೇಳುತ್ತದೆ. ಈ ವಿವರಗಳನ್ನು ದಾಖಲಿಸಿದ ಬಳಿಕ ಲಭ್ಯ ಸೇವೆಗಳ ವಿವಿಧ ಆಯ್ಕೆಗಳು ಕಾಣಿಸಿಕೊಳ್ಳುತ್ತವೆ.

ಶಿಲ್ಕು ವಿಚಾರಣೆಗಾಗಿ ಆಯ್ಕೆ 1ನ್ನು ಒತ್ತಿದಾಗ ನಿಮ್ಮ ಖಾತೆಯಲ್ಲಿನ ಶಿಲ್ಕು ಹಣದ ಮೊತ್ತ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳುತ್ತದೆ. ವಿವಿಧ ಪ್ರಾದೇಶಿಕ ಭಾಷೆಗಳ ಆಯ್ಕೆಗಾಗಿ*99#22#(ಹಿಂದಿ),*99#23#(ತಮಿಳು),*99#24#(ತೆಲುಗು),*99#25#(ಮಲಯಾಳಂ) ಮತ್ತು *99#26#(ಕನ್ನಡ) ಹೀಗೆ ಅಗತ್ಯ ಕೋಡ್‌ಗಳನ್ನು ಡಯಲ್ ಮಾಡಬೇಕಾಗುತ್ತದೆ.

ಈ ಸೌಲಭ್ಯವನ್ನು ಪಡೆಯುವ ಮುನ್ನ ನಿಮ್ಮ ಮೊಬೈಲ್ ಸಂಖ್ಯೆ ನಿಮ್ಮ ಬ್ಯಾಂಕಿನಲ್ಲಿ ನೋಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳಿ. ಜೊತೆಗೆ ನಿಮ್ಮ ಮೊಬೈಲ್ ನೆಟ್‌ವರ್ಕ್ ಏರಿಯಾ ಅಥವಾ ರೇಂಜ್‌ನಲ್ಲಿರಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X