Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ...

ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಎಡಿಜಿಪಿ ಸೌಮೇಂದು ಮುಖರ್ಜಿ

ಗೃಹ ರಕ್ಷಕರಿಗೆ ಯುವ ಬ್ರಿಗೇಡ್ ಸಂಚಾಲಕನಿಂದ ಪಾಠ

ವಾರ್ತಾಭಾರತಿವಾರ್ತಾಭಾರತಿ13 Nov 2017 7:01 PM IST
share
ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಎಡಿಜಿಪಿ ಸೌಮೇಂದು ಮುಖರ್ಜಿ

ಬೆಂಗಳೂರು, ನ.13: ಹೊಸಪೇಟೆಯ ಗೃಹರಕ್ಷಕ ದಳದ ಕಚೇರಿಯಲ್ಲಿ ಯುವ ಬ್ರಿಗೇಡ್‌ನ ಸಂಚಾಲಕ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಉಪನ್ಯಾಸ ನೀಡಿದ್ದ ಸಂಬಂಧ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಎಡಿಜಿಪಿ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಹಿನ್ನೆಲೆಯುಳ್ಳ ಜನರಿಂದ ಉಪನ್ಯಾಸ ಕೊಡಿಸಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಉಪನ್ಯಾಸ ನೀಡುತ್ತಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬೆಳಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದೇವೆ. ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಶೀಘ್ರದಲ್ಲಿಯೇ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸಲಿದ್ದೇವೆ ಎಂದರು.

ಏನಿದು ಪಾಠ?: ಬಳ್ಳಾರಿಯ ಹೊಸಪೇಟೆಯ ಗಹರಕ್ಷಕ ದಳದ ಕಚೇರಿಯಲ್ಲಿ ರವಿವಾರ ನಡೆದ ಪರೇಡ್ ವೇಳೆ ಯುವ ಬ್ರಿಗೇಡ್‌ನ ತಾಲೂಕು ಸಂಚಾಲಕ ಚಂದ್ರಶೇಖರ್ ಉಪನ್ಯಾಸ ನೀಡಿದ್ದಾರೆ. ಗಹರಕ್ಷಕ ದಳದ ತಾಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ಅದರಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಚಂದ್ರಶೇಖರ್ ಸುಮಾರು ಒಂದು ಗಂಟೆ ಈ ಉಪನ್ಯಾಸ ನಡೆದಿದ್ದು, ನೀರಿನ ಬಳಕೆ ಮತ್ತು ರಾಷ್ಟ್ರೀಯತೆ ಕುರಿತು ಮಾತನಾಡಿದ್ದಾರೆ ಎಂದು ಗೃಹರಕ್ಷಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಯುವ ಬ್ರಿಗೇಡ್ ಸಂಚಾಲಕ ಚಂದ್ರಶೇಖರ್ ಉಪನ್ಯಾಸ ನೀಡಲು ಒಪ್ಪಿಗೆ ನೀಡಿದ್ದು ಎಷ್ಟು ಸರಿ?, ನಿರ್ದಿಷ್ಟ ವಿಚಾರಧಾರೆ ಹೊಂದಿರುವ ಸಂಘಟನೆಯ ಸಂಚಾಲಕರನ್ನು ಕರೆಸಿ ಗಹರಕ್ಷಕ ಸಿಬ್ಬಂದಿಗೆ ಉಪನ್ಯಾಸ ಕೊಡುವ ಜರೂರು ಏನಿತ್ತು? ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಏನಿದು ಯುವ ಬ್ರಿಗೇಡ್?: 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ, ನರೇಶ್ ಶೆಣೈ  ಮತ್ತಿತರರು ಸೇರಿ ಹುಟ್ಟು ಹಾಕಿದ ನಮೋ ಬ್ರಿಗೇಡ್ ಕೆಲ ದಿನಗಳ ನಂತರ ಯುವ ಬ್ರಿಗೇಡ್ ಎಂದು ಹೆಸರಾಯಿತು. ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನರೇಶ್ ಶೆಣೈ ಕೆಲ ದಿನಗಳ ಕಾಲ ತಲೆಮರೆಸಿಕೊಂಡಿದ್ದ. ಬಳಿಕ ಪೊಲೀಸರು ಅವನನ್ನು ಬಂಧಿಸಿದ್ದರು. ಸದ್ಯ ಆತ ಜಾಮೀನಿನಲ್ಲಿ ಹೊರಗಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X