Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತ ಕೆ.ಬಿ. ಮಹಂತೇಶ್ ನಿಧನ:...

ಪತ್ರಕರ್ತ ಕೆ.ಬಿ. ಮಹಂತೇಶ್ ನಿಧನ: ಹಲವರಿಂದ ಸಂತಾಪ

ವಾರ್ತಾಭಾರತಿವಾರ್ತಾಭಾರತಿ13 Nov 2017 11:57 PM IST
share

ಮಡಿಕೇರಿ, ನ.13: ಕೊಡಗು ಜಿಲ್ಲೆಯ ಹಿರಿಯ ಪತ್ರಕರ್ತ, ಮೈಸೂರು ಮಿತ್ರ ದಿನ ಪತ್ರಿಕೆಯ ಜಿಲ್ಲಾ ವರದಿಗಾರ ಕೆ.ಬಿ. ಮಹಂತೇಶ್(49) ಅವರು ಸೋಮವಾರ ಬೆಳಗ್ಗೆ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದು, ಅಗಲಿದ ಚೇತನಕ್ಕೆ ಕೊಡಗು ಜಿಲ್ಲಾ ಪತ್ರಿಕಾ ಭವನ ಟ್ರಸ್ಟ್ ಟ್ರಸ್ಟಿಗಳು ಒಳಗೊಂಡಂತೆ ಪತ್ರಕರ್ತರು ಗೌರವ ಸಲ್ಲಿಸಿ ಕಂಬನಿ ಮಿಡಿದರು.

ಕಳೆದ ಕೆಲ ದಿನಗಳ ಅನಾರೋಗ್ಯದ ಬಳಿಕ ಸೋಮವಾರ ಬೆಳಗ್ಗೆ ಮಹಂತೇಶ್ ಅವರು ಸಾವನ್ನಪ್ಪಿದ್ದು, ತಾಯಿ, ಪತ್ನಿ , ಮೂವರು ಪುತ್ರಿಯರು, ಬಂಧುಬಳಗವನ್ನು ಅಗಲಿದ್ದು, ಅಂತ್ಯಸಂಸ್ಕಾರ ಅವರ ಹುಟೂರು ಬೆಳಗಾವಿಯ ಬೈಲಹೊಂಗಲದಲ್ಲಿ ನಡೆಯಲಿದೆ. ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಆಗಿದ್ದ ಕೆ.ಬಿ. ಮಹಂತೇಶ್ ನಿಧನಕ್ಕೆ ಸಂತಾಪ ಸೂಚಿಸಿ, ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಕಚೇರಿಯಲ್ಲಿ ಮಹಂತೇಶ್‌ರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು.

ಟ್ರಸ್ಟ್‌ನ ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಪತ್ರಿಕಾ ಭವನ ಟ್ರಸ್ಟ್‌ನ ಟ್ರಸ್ಟಿ ಜಿ. ಚಿದ್ವಿಲಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ಟ್ರಸ್ಟಿಗಳಾದ ವಿ.ಪಿ. ಸುರೇಶ್, ಕೆ.ತಿಮ್ಮಪ್ಪ, ಶ್ರೀಧರ ಹೂವಲ್ಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಿದ್ದಾಪುರ (ಕೊಡಗು): ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ, ಸಿದ್ದಾಪುರ ನಗರ ಪತ್ರಕರ್ತರ ಸಂಘ, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನಿರ್ವಾಣಪ್ಪ, ಯುವಕ ಸಂಘಗಳು, ದಸಂಸ, ಕಾರ್ಮಿಕ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಮಹಂತೇಶ್ ನೀಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಸಂಘ: ಕೆ.ಬಿ. ಮಹಂತೇಶ್ ನಿಧನಕ್ಕೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ಸಂತಾಪ ಸಭೆ ನಡೆಯಿತು. ಮೃತರ ಗೌರವಾರ್ಥ 2 ನಿಮಿಷ ಮೌನಾಚರಣೆ ಮಾಡಲಾಯಿತು.

ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಉಪಾಧ್ಯಕ್ಷ ಜಿ.ವಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕುಡೆಕಲ್ಲು ಸಂತೋಷ್, ಖಜಾಂಚಿ ಸವಿತಾ ರೈ, ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸಣ್ಣುವಂಡ ಎಂ. ಚಂಗಪ್ಪ, ಮತ್ತಿತರರು ಮಾತನಾಡಿದರು. ಮಹಂತೇಶ್ ಅವರ ನಿಧನಕ್ಕೆ ಎಸ್‌ಡಿಪಿಐ ಜಿಲ್ಲಾ ಸಮಿತಿ ಸಂತಾಪ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X