Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹಾರ್ದಿಕ್‌ರಲ್ಲಿ ಸರ್ದಾರ್ ಪಟೇಲರ...

‘ಹಾರ್ದಿಕ್‌ರಲ್ಲಿ ಸರ್ದಾರ್ ಪಟೇಲರ ಡಿಎನ್‌ಎ ಇದೆ’ ಎಂಬ ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ14 Nov 2017 6:25 PM IST
share
‘ಹಾರ್ದಿಕ್‌ರಲ್ಲಿ ಸರ್ದಾರ್ ಪಟೇಲರ ಡಿಎನ್‌ಎ ಇದೆ’ ಎಂಬ ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ಟೀಕೆ

ಅಹ್ಮದಾಬಾದ್,ನ.14: ಪಾಟಿದಾರ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಡಿಎನ್‌ಎ ಹೊಂದಿದ್ದಾರೆ ಎಂಬ ಹೇಳಿಕೆಯನ್ನು ನೀಡುವ ಮೂಲಕ ಗುಜರಾತ್‌ನ ಹಿರಿಯ ಕಾಂಗ್ರೆಸ್ ನಾಯಕ ಶಕ್ತಿಸಿನ್ಹ ಗೋಹಿಲ್ ಅವರು ವಿವಾದವೊಂದನ್ನು ಹುಟ್ಟುಹಾಕಿದ್ದು, ಇದನ್ನು ಟೀಕಿಸಿರುವ ಬಿಜೆಪಿಯು ಇಂತಹ ಹೋಲಿಕೆಯು ಸರ್ದಾರ್‌ಗೆ ಮಾಡಿರುವ ಅವಮಾನವಾಗಿದೆ ಎಂದು ಹೇಳಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೋಹಿಲ್ ಅವರು, ರಾಜ್ಯದಲ್ಲಿ ಆಡಳಿತ ಬಿಜೆಪಿಯನ್ನು ಎದುರು ಹಾಕಿಕೊಳ್ಳುವ ಹಾರ್ದಿಕ್ ಅವರ ದೃಢವಾದ ಮತ್ತು ಪ್ರಾಮಾಣಿಕವಾದ ನಿಲುವು ಅವರು ಬ್ರಿಟಿಷ್‌ರಿಂದ ದಮನಿಸಲು ಸಾಧ್ಯವಾಗದಿದ್ದ ಸರ್ದಾರ್ ಪಟೇಲ್ ಅವರ ಡಿಎನ್‌ಎ ಹೊಂದಿದ್ದಾರೆ ಎನ್ನುವುದನ್ನು ತೋರಿಸುತ್ತಿದೆ ಎಂದು ಹೇಳಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಹಾರ್ದಿಕ್ ಅವರದ್ದೆನ್ನಲಾದ ಲೈಂಗಿಕ ದೃಶ್ಯದ ತುಣುಕಿನ ಕುರಿತು ಪ್ರತಿಕ್ರಿಯಿಸುತ್ತಿದ್ದ ಗೋಹಿಲ್, ಹಾರ್ದಿಕ್ ತನ್ನ ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ದೃಢವಾಗಿ ಮತ್ತು ಪ್ರಾಮಾಣಿಕತೆಯಿಂದ ಹೋರಾಡುತ್ತಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕೋಟ್ಯಂತರ ರೂಪಾಯಿಗಳೂ ಅವರನ್ನು ಖರೀದಿಸಲು ಸಾಧ್ಯವಾಗಿಲ್ಲ, ಅವರನ್ನು ತಿಂಗಳುಗಟ್ಟಲೆ ಜೈಲಿಗೆ ಹಾಕಿದರೂ ದಮನಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದರು.

ಗೋಹಿಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಮನ್ಸುಖ್ ಮಾಂಡವೀಯ ಅವರು, ನಾಚಿಕೆಗೇಡಿನ ಕೃತ್ಯದಲ್ಲಿ ಸಿಕ್ಕಿಹಾಕಿಕೊಂಡಿರುವ ಹಾರ್ದಿಕರನ್ನು ಪಟೇಲ್‌ಗೆ ಹೋಲಿಸಿರುವುದು ಅವರಿಗೆ, ಗುಜರಾತ್‌ಗೆ ಮತ್ತು ದೇಶಕ್ಕೆ ಮಾಡಿರುವ ಅವಮಾನ ವಾಗಿದೆ ಎಂದು ಹೇಳಿದರು.

ಗೋಹಿಲ್ ಹೇಳಿಕೆಯನ್ನು ತಿರಸ್ಕರಿಸಿರುವ ಸರ್ದಾರ್ ಪಟೇಲ್ ಅವರ ಮರಿಮೊಮ್ಮಗ ಸಮೀರ ಪಟೇಲ್ ಅವರು, ಹಾರ್ದಿಕ್ ಪಟೇಲರ ಡಿಎನ್‌ಎ ಹೊಂದಿದ್ದಾರೆ ಎಂದು ಹೇಳುವುದು ಮೂರ್ಖತನವಾಗುತ್ತದೆ. ಸರ್ದಾರ್ ಅವರು ದೇಶದ ಏಕತೆಗಾಗಿ ಶ್ರಮಿಸಿದ್ದರೆ ಹಾರ್ದಿಕ್ ದೇಶವನ್ನು ಒಡೆಯುತ್ತಿದ್ದಾರೆ ಎಂದಿದ್ದಾರೆ.

ಗುಜರಾತ್‌ನ ಬಿಜೆಪಿ ಸರಕಾರದ ವಿರುದ್ಧ ತೊಡೆ ತಟ್ಟಿರುವ ಹಾರ್ದಿಕ್ ಅವರ ಹೋಲಿಕೆಯುಳ್ಳ ವ್ಯಕ್ತಿಯೋರ್ವ ಮಹಿಳೆಯೊಂದಿಗಿದ್ದ ಸೆಕ್ಸ್ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಅವರು ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗುಜರಾತ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಅದು ಪಟೇಲ ಸಮುದಾಯಕ್ಕೆ ಮೀಸಲಾತಿಯನ್ನು ಕಲ್ಪಿಸಲು ಮೂರು ಪರ್ಯಾಯಗಳನ್ನು ಮುಂದಿಟ್ಟಿದ್ದು, ಇದು ತನಗೆ ತೃಪ್ತಿಯನ್ನುಂಟು ಮಾಡಿದೆ ಮತ್ತು ಈ ಬಗ್ಗೆ ಸಮುದಾಯವು ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಹಾರ್ದಿಕ್ ಸೋಮವಾರ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X