Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಲ್ವಾರ್ ಹತ್ಯೆ: ಇಬ್ಬರ ಬಂಧನ,ಖಾನ್...

ಆಲ್ವಾರ್ ಹತ್ಯೆ: ಇಬ್ಬರ ಬಂಧನ,ಖಾನ್ ಮತ್ತು ಇತರ ಇಬ್ಬರ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ14 Nov 2017 7:38 PM IST
share
ಆಲ್ವಾರ್ ಹತ್ಯೆ: ಇಬ್ಬರ ಬಂಧನ,ಖಾನ್ ಮತ್ತು ಇತರ ಇಬ್ಬರ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ

ಜೈಪುರ,ನ,14:ಆಲ್ವಾರ್ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಣೆ ಆರೋಪದಲ್ಲಿ ಉಮರ್ ಖಾನ್(35) ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿರುವ ಪೊಲೀಸರು, ಖಾನ್ ಮತ್ತು ಆತನ ಸಹಚರರಾದ ತಾಹಿರ್ ಖಾನ್ ಮತ್ತು ಜಾವೇದ್ ವಿರುದ್ಧ ಗೋ ಕಳ್ಳಸಾಗಾಣಿಕೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮಾರ್ಕಾಪುರ ಪ್ರದೇಶದ ನಿವಾಸಿಗಳಾದ ಭಗವಾನ ಸಿಂಗ್ ಗುರ್ಜರ್ ಅಲಿಯಾಸ್ ಕಾಲಾ ಮತ್ತು ರಾಮವೀರ ಗುರ್ಜರ್ ಅವರನ್ನು ಸೋಮವಾರ ತಡಸಂಜೆ ಬಂಧಿಸಲಾಗಿದೆ ಎಂದು ಆಲ್ವಾರ್ ಜಿಲ್ಲಾ ಎಸ್‌ಪಿ ರಾಹುಲ್ ಪ್ರಕಾಶ ತಿಳಿಸಿದರು.

ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದೆ ಮತ್ತು ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದರು.

ಆರೋಪಿಗಳು ಲೂಟಿಕೋರರೇ ಅಥವಾ ಗೋರಕ್ಷಕರೇ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು, ಪೊಲೀಸ್ ಶಬ್ದಕೋಶದಲ್ಲಿ ಗೋರಕ್ಷಕರಂತಹ ಶಬ್ದವಿಲ್ಲ ಎಂದು ಉತ್ತರಿಸಿದರು. ಇದೊಂದು ಕೊಲೆ ಪ್ರಕರಣವಾಗಿದೆ ಮತ್ತು ಆ ನಿಟ್ಟಿನಲ್ಲಿ ನಾವು ತನಿಖೆ ನಡೆಸುತ್ತಿದ್ದೇವೆ ಎಂದರು.

ಉಮರ್ ಖಾನ್ ಮೃತದೇಹವು ನ.11ರಂದು ರಾಮಗಡದಲ್ಲಿ ರೈಲ್ವೆ ಹಳಿಗಳ ಬಳಿ ಪತ್ತೆಯಾಗಿತ್ತು. ಮುನ್ನಾ ದಿನ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಗೋರಕ್ಷರು ಗುಂಡಿಟ್ಟು ಹತ್ಯೆಗೈದಿದ್ದಾರೆ ಎಂದು ಖಾನ್ ಕುಟುಂಬದ ಸದಸ್ಯರು ಮತ್ತು ಮಾನವ ಹಕ್ಕು ಕಾರ್ಯಕರ್ತರು ಆರೋಪಿಸಿದ್ದಾರೆ.

ಆಲ್ವಾರ್‌ನಲ್ಲಿ ಗೋರಕ್ಷಕರ ಗುಂಪಿನಿಂದ ಹರ್ಯಾಣದ ಹೈನುಗಾರ ಪೆಹ್ಲು ಖಾನ್ ಹತ್ಯೆಯ ನೆನಪು ಇನ್ನೂ ಹಸಿರಾಗಿರುವಾಗಲೇ ನಡೆದಿರುವ ಈ ಘಟನೆ ಆಕ್ರೋಶವನ್ನು ಸೃಷ್ಟಿಸಿದೆ.

ಜಾನುವಾರುಗಳಿದ್ದ ಪಿಕ್-ಅಪ್ ವ್ಯಾನ್ ಗೋವಿಂದಗಡದಲ್ಲಿ ಪತ್ತೆಯಾಗಿದ್ದು, ಇದು ಗೋ ಕಳ್ಳಸಾಗಾಣಿಕೆಯ ಸ್ಪಷ್ಟ ಪ್ರಕರಣವಾಗಿದೆ. ಖಾನ್ ಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ಪ್ರಕಾಶ ತಿಳಿಸಿದರು.

ತನ್ಮಧ್ಯೆ ಖಾನ್ ಮೃತದೇಹದ ಪೋಸ್ಟ್ ಮಾರ್ಟಮ್ ಮಂಗಳವಾರವೂ ನಡೆಯಲಿಲ್ಲ. ಹಲವಾರು ಪ್ರಯತ್ನಗಳ ಬಳಿಕವೂ ಖಾನ್ ಕುಟುಂಬದ ಸದಸ್ಯರು ಹಾಜರಾಗದ ಕಾರಣ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿಲ್ಲ ಎಂದು ಜೈಪುರದ ಎಸ್‌ಎಂಎಸ್ ಆಸ್ಪತ್ರೆಯ ಅಧೀಕ್ಷಕ ಡಾ.ಡಿ.ಎಸ್.ಮೀನಾ ತಿಳಿಸಿದರು.

ಉಮರ್ ಸತ್ತ ರೀತಿಯಲ್ಲಿ ಯಾರೂ ಸಾಯಬಾರದು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳನ್ನು ಭೇಟಿಯಾಗಿ ಪ್ರಕರಣದಲ್ಲಿ ಸೂಕ್ತ ತನಿಖೆಗಾಗಿ ನಾವು ಆಗ್ರಹಿಸಿದ್ದೇವೆ ಎಂದು ಮೃತ ಖಾನ್ ಚಿಕ್ಕಪ್ಪ ರಝಾಕ್ ಖಾನ್ ಹೇಳಿದರು.

ಸರಕಾರವು ಖಾನ್ ಹೆತ್ತವರಿಗೆ 50 ಲ.ರೂ. ಮತ್ತು ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ತಾಹಿರ್ ಖಾನ್ ಕುಟುಂಬಕ್ಕೆ 25 ಲ.ರೂ.ಪರಿಹಾರ ನೀಡಬೇಕು ಎಂದು ಅವರು ಹೇಳಿದರು.

ತಾವು ಊರಿಗೆ ಮರಳುತ್ತಿರುವಾಗ 6-8 ಜನರ ಗುಂಪು ತಮ್ಮ ಮೇಲೆ ದಾಳಿ ನಡೆಸಿ ಗುಂಡುಗಳನ್ನು ಹಾರಿಸಿತ್ತು ಎಂದು ತಾಹಿರ್ ಖಾನ್ ಮಾಹಿತಿ ನೀಡಿರುವುದಾಗಿ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X