Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಫ್‌ಎಫ್‌ಐ ಮುಖ್ಯಸ್ಥ ಸುಜೋಯ್ ಘೋಷ್...

ಐಎಫ್‌ಎಫ್‌ಐ ಮುಖ್ಯಸ್ಥ ಸುಜೋಯ್ ಘೋಷ್ ರಾಜಿನಾಮೆ

ಚಿತ್ರೋತ್ಸವದಿಂದ ಎಸ್ ದುರ್ಗಾ, ನೂಡ್ ಚಿತ್ರಗಳನ್ನು ಕೈಬಿಟ್ಟಿದ್ದಕ್ಕೆ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ14 Nov 2017 7:46 PM IST
share
ಐಎಫ್‌ಎಫ್‌ಐ ಮುಖ್ಯಸ್ಥ ಸುಜೋಯ್ ಘೋಷ್ ರಾಜಿನಾಮೆ

ಮುಂಬೈ, ನ.14: ಸನಲ್ ಕುಮಾರ್ ಸಸಿಧರನ್ ನಿರ್ದೇಶನದ ಎಸ್ ದುರ್ಗಾ ಮತ್ತು ರವಿ ಜಾಧವ್ ಅವರ ನೂಡ್ ಸಿನಿಮಾಗಳನ್ನು 48ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಿಂದ ಕೈಬಿಟ್ಟಿರುರುವುದರಿಂದ ಅಸಮಾಧಾನಗೊಂಡಿರುವ ಚಿತ್ರೋತ್ಸವದ ಮುಖ್ಯ ತೀರ್ಪುಗಾರ ಸುಜೋಯ್ ಘೋಷ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ತನ್ನ ರಾಜಿನಾಮೆಯ ಬಗ್ಗೆ ನ್ಯೂಸ್ 18 ಸುದ್ದಿ ಮಾಧ್ಯಕ್ಕೆ ಮಾಹಿತಿ ನೀಡಿರುವ ಘೋಷ್ ಈ ಬಗ್ಗೆ ಹೆಚ್ಚಿನ ವಿವರಣೆ ನೀಡಲು ನಿರಾಕರಿಸಿದ್ದಾರೆ. ಘೋಷ್, ಕಹಾನಿ, ಅಹಲ್ಯ, ಕಹಾನಿ 2: ದುರ್ಗಾ ರಾಣಿ ಸಿಂಗ್ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ನವೆಂಬರ್ 9ರಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಬಿಡುಗಡೆ ಮಾಡಿದ ಅಂತಿಮ ಪಟ್ಟಿಯಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗದಲ್ಲಿ 26 ಚಲನಚಿತ್ರಗಳು ಮತ್ತು 16 ಇತರ ಸಿನಿಮಾಗಳನ್ನು ಹೆಸರಿಸಲಾಗಿತ್ತು. ಈ ಚಿತ್ರೋತ್ಸವವು ನವೆಂಬರ್ 20ರಿಂದ 28ರ ವರೆಗೆ ಗೋವಾದಲ್ಲಿ ನಡೆಯಲಿದೆ.

ಚಿತ್ರಗಳ ಪಟ್ಟಿಯು ಹೊರಬೀಳುತ್ತಿದ್ದಂತೆ ತೀರ್ಪುಗಾರ ಮಂಡಳಿಯ ಸದಸ್ಯರಾಗಿರುವ ಅಪೂರ್ವ ಅಸ್ರಾನಿ, ಸೆಕ್ಸಿ ದುರ್ಗಾ ಮತ್ತು ನೂಡ್ ಆಧುನಿಕ ಸಿನಿಮಾಗಳ ಪೈಕಿ ಅತ್ಯುತ್ತಮ ಸಿನಿಮಾಗಳಾಗಿದ್ದವು. ಅವೆರಡೂ ಕೂಡಾ ಇಂದಿನ ಭಾರತದ ಅತ್ಯಂತ ಶಕ್ತಿಶಾಲಿ ಮತ್ತು ಸಮರ್ಥ ಮಹಿಳೆಯ ರೂಪವನ್ನು ನಮ್ಮ ಮುಂದಿಡುತ್ತದೆ ಎಂದು ಟ್ವೀಟ್ ಮಾಡಿದ್ದರು.

 ನೂಡ್ ಮತ್ತು ಎಸ್ ದುರ್ಗಾ ಸಿನಿಮಾವನ್ನು ಘೋಷ್ ನೇತೃತ್ವದ 13 ಸದಸ್ಯರ ತೀರ್ಪುಗಾರರ ಮಂಡಳಿಯು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ ಮಾಡಿತ್ತು ಆದರೆ ಅದನ್ನು ನಂತರ ಸಚಿವಾಲಯವು ಕೈಬಿಟ್ಟಿತ್ತು ಎಂದು ಅಸ್ರಾನಿ ತಿಳಿಸಿದ್ದಾರೆ.

ರವಿ ನಿರ್ದೇಶನದ ನೂಡ್ ಸಿನಿಮಾ ಮುಂಬೈಯಂಥಾ ನಗರದಲ್ಲಿ ಮಹಿಳೆಯೊಬ್ಬಳು ನಗ್ನ ರೂಪದರ್ಶಿಯಾಗಿ ಹೇಗೆ ಸವಾಲುಗಳನ್ನು ಎದುರಿಸುತ್ತಾಳೆ ಎಂಬುದನ್ನು ತೋರಿಸಿದರೆ ಮಹಿಳೆಯೊಬ್ಬಳು ತನ್ನ ಮಿತಿಗಳಿಂದ ಆಚೆಗೆ ಬಂದಾಗ ಯಾವೆಲ್ಲಾ ಭಯಾನಕ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಸಸಿಧರನ್ ನಿರ್ದೇಶನದ ಎಸ್ ದುರ್ಗಾದಲ್ಲಿ ತೋರಿಸಲಾಗಿದೆ.

ಈ ಕುರಿತು ನ್ಯೂಸ್ 18 ಜೊತೆ ಮಾತನಾಡಿದ ರವಿ, ನಾನು ನನ್ನ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ ಎಂದು ಭಾವಿಸಿದ್ದೆ. ಆದರೆ ಬೆಳಿಗ್ಗೆ ಪತ್ರಿಕೆಯನ್ನು ಓದಿದಾಗ ನನಗೆ ಬಹಳ ಬೇಸರವಾಯಿತು. ಯಾಕೆಂದರೆ ಒಮ್ಮೆ ತೀರ್ಪುಗಾರರು ತೀರ್ಮಾನಿಸಿದರೆ ಅದೇ ಅಂತಿಮವೆಂದು ನಾನು ಭಾವಿಸುತ್ತೇನೆ. ಅದರ ನಂತರ ಸಚಿವಾಲಯವು ಅದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂದಾದರೆ ಸರಿ ಆದರೆ ಅದು ಕನಿಷ್ಟ ಆಯ್ಕೆ ಮಂಡಳಿಗಾದರೂ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಇನ್ನೊಂದೆಡೆ, ನಾನು ಇದನ್ನು ನಿರೀಕ್ಷಿಸಿದೆ. ಅವರಿಗೆ ನನ್ನ ಸಿನಿಮಾದ ಹೆಸರಿನ ಬಗ್ಗೆ ಆಕ್ಷೇಪವಿತ್ತು. ಅದನ್ನು ನಾನು ಎಸ್ ದುರ್ಗಾ ಎಂದು ಬದಲಾಯಿಸಿದೆ. ಅಲ್ಲಿಗೆ ಈ ವಿವಾದ ಕೊನೆಯಾಗಬೇಕಿತ್ತು. ಇನ್ಯಾಕೆ ಅವರು ಅದನ್ನು ಎಳೆಯುತ್ತಿದ್ದಾರೆ? ಮುಖ್ಯವಾಗಿ ಅವರಿಗೆ ನನ್ನ ಸಿನಿಮಾದ ಕತೆಯ ಬಗ್ಗೆ ಆಕ್ಷೇಪವಿದೆ ಎಂದು ಸಸಿಧರನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X