Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಜಯನಗರ ಹೆಬ್ಬಾಗಿಲು ನಿರ್ಮಾಣಕ್ಕೆ ಸ್ಥಳ...

ವಿಜಯನಗರ ಹೆಬ್ಬಾಗಿಲು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ14 Nov 2017 10:05 PM IST
share

ಬೆಂಗಳೂರು, ನ.14: ಮೈಸೂರು ಬ್ಯಾಂಕ್ ವೃತ್ತದ ಸಮೀಪ ವಿಜಯನಗರ ಹೆಬ್ಬಾಗಿಲು ನಿರ್ಮಿಸಲು ಮೇಯರ್ ಆರ್.ಸಂಪತ್‌ರಾಜ್ ಅವರು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರೊಂದಿಗೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.

ಈ ವೃತ್ತ ಅನೇಕ ಕನ್ನಡಪರ ಚಳವಳಿಗಳಿಗೆ ಹೆಸರಾಗಿದೆ. ಅತಿಶೀಘ್ರದಲ್ಲಿ ದ್ವಾರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುತ್ತೇವೆ. ಮುಂದಿನ ಅಕ್ಟೋಬರ್ ಒಳಗೆ ಹೆಬ್ಬಾಗಿಲು ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುತ್ತೇವೆ. ನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆ ಬಿಂಬಿಸುವ ರಚನೆಗಳು ಈ ದ್ವಾರದಲ್ಲಿ ಇರಲಿವೆ ಎಂದು ಮೇಯರ್ ಮಾಹಿತಿ ನೀಡಿದರು.

ವಾಟಾಳ್ ನಾಗರಾಜ್ ಮಾತನಾಡಿ, 1963ರಿಂದ ಪ್ರತಿವರ್ಷ ರಾಜ್ಯೋತ್ಸವ ಆಚರಿಸಲು ಇಲ್ಲಿ ವಿವಿಧ ಪರಿಕರಗಳಿಂದ ವಿಜಯನಗರ ಹೆಬ್ಬಾಗಿಲನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗುತ್ತದೆ. ಕನ್ನಡ ನುಡಿ, ನೆಲ, ಜಲದ ಹೋರಾಟಗಳ ನೆನಪುಗಳನ್ನು ಶಾಶ್ವತಗೊಳಿಸಲು ಹೆಬ್ಬಾಗಿಲು ನಿರ್ಮಿಸುವಂತೆ ಪಾಲಕೆಗೆ ಮನವಿ ಸಲ್ಲಿಸಿದ್ದೆವು. ಅದಕ್ಕೆ ಸ್ಪಂದಿಸಿರುವುದು ಸಂತಸದ ಸಂಗತಿ ಎಂದರು.

ಕಾಮಗಾರಿಗಳ ಪರಿಶೀಲನೆ: ನಾಗವಾರ ಮತ್ತು ಥಣಿಸಂದ್ರ ವಾರ್ಡ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ, ಜಲಮಂಡಳಿಯ ಕೊಳವೆ ಜೋಡಣೆ ಕಾಮಗಾರಿಗಳನ್ನು ಪರಿಶೀಲಿಸಿದ ಮೇಯರ್, ಒಳಚರಂಡಿ ಮಾರ್ಗಗಳ ಕೊಳವೆಗಳು ಒಡೆದು ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ಕುರಿತು ದೂರುಗಳು ಬರುತ್ತಿವೆ. ಹಾನಿಗೊಂಡಿರುವ 200 ಎಂ.ಎಂ. ಕೊಳವೆಗಳನ್ನು ಬದಲಿಸಿ 300 ಎಂ.ಎಂ. ಗಾತ್ರದ ಕೊಳವೆ ಜೋಡಿಸಿ, ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಅಲ್ಲದೆ ವಾರ್ಡ್‌ಗಳ ರಸ್ತೆಗಳು ಗುಂಡಿಮುಕ್ತವಾಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಲೈಂಗಿಕ ಅಲ್ಪಸಂಖ್ಯಾತರೊಂದಿಗೆ ಸಭೆ: ಬಳಿಕ ಮೇಯರ್ ಅವರು ಲೈಂಗಿಕ ಅಲ್ಪಸಂಖ್ಯಾತರೊಂದಿಗೆ ಸಭೆ ನಡೆಸಿ, ಅವರ ಅಹವಾಲುಗಳನ್ನು ಸ್ವೀಕರಿಸಿದರು. ಪಾಲಿಕೆ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 2 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಅದರಿಂದ ಕಂಪ್ಯೂಟರ್ ತರಬೇತಿ, ಬ್ಯೂಟಿಷಿಯನ್, ಆಟೊರಿಕ್ಷಾ ಚಾಲನಾ ತರಬೇತಿ ನೀಡುತ್ತೇವೆ. ಸಮುದಾಯದವರಿಗೆ ಉಚಿತ ಬಸ್‌ಪಾಸ್ ವಿತರಣೆ ಮಾಡಲು ಬಿಎಂಟಿಸಿ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X