Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೇತನ ಆಯೋಗದ ವರದಿ ಬಳಿಕ ಸರಕಾರಿ ನೌಕರರ...

ವೇತನ ಆಯೋಗದ ವರದಿ ಬಳಿಕ ಸರಕಾರಿ ನೌಕರರ ವೇತನ ಪರಿಷ್ಕರಣೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2017 10:21 PM IST
share
ವೇತನ ಆಯೋಗದ ವರದಿ ಬಳಿಕ ಸರಕಾರಿ ನೌಕರರ ವೇತನ ಪರಿಷ್ಕರಣೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ನ.14: ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಆರನೆ ವೇತನ ಆಯೋಗದ ವರದಿ 2018ರ ಜನವರಿ ತಿಂಗಳ ಒಳಗಾಗಿ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಆ ಬಳಿಕ ಕೂಡಲೇ ನೌಕರರ ವೇತನ ಪರಿಷ್ಕರಣೆಗೆ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸದಸ್ಯ ಐಹೊಳೆ ಮಹಲಿಂಗಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಕೇಂದ್ರ ಮತ್ತು ರಾಜ್ಯ ಸರಕಾರಿ ನೌಕರರ ವೇತನದ ನಡುವೆ ತಾರತಮ್ಯ ಇರುವುದು ಸತ್ಯ. ಅದನ್ನು ಸರಿಪಡಿಸಲು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದ್ದು, ಆರು ತಿಂಗಳೊಳಗಾಗಿ ಆಯೋಗ ವರದಿ ನೀಡಬೇಕಿತ್ತು. ಆದರೆ ಕಾಲಾವಕಾಶ ಕೇಳಿದ್ದರಿಂದ 2018ರ ಜನವರಿ 31ರವರೆಗೆ  ಕಾಲಾವಧಿ ವಿಸ್ತರಿಸಲಾಗಿದೆ ಎಂದು ವಿವರಿಸಿದರು.

ಆರನೆ ವೇತನ ಆಯೋಗ ವರದಿ ಸಲ್ಲಿಕೆಯಾದ ತಕ್ಷಣ ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ನಡುವೆ ಸರಕಾರಿ ನೌಕರರಿಗೆ ಮಧ್ಯಂತರ ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಣೆ ನೀಡಿದರು.

ಅದೇ ರೀತಿ ಪೊಲೀಸರಿಗೆ ಒಂದೇ ವರ್ಷದಲ್ಲಿ 2ಸಾವಿರ ರೂ.ವೇತನ ಹೆಚ್ಚಳ ಮಾಡಿದ್ದು, ಇಪ್ಪತ್ತು ವರ್ಷಗಳಿಂದ ಭಡ್ತಿ ಇಲ್ಲದೆ ಪೊಲೀಸ್ ಸಿಬ್ಬಂದಿಗೆ ಭಡ್ತಿ ನೀಡಲಾಗಿದೆ. ಇನ್ನು ಮುಂದೆ 12 ವರ್ಷಕ್ಕೊಮ್ಮೆ  ಭಡ್ತಿ ನೀಡುವ ನಿಯಮ ರೂಪಿಸಲಾಗಿದೆ. ಇದರಿಂದ ಕಾನ್‍ ಸ್ಟೇಬಲ್‍ನಿಂದ ಎಎಸ್ಪಿ, ಪಿಎಸ್ಸೈ ವರೆಗೂ ಮೇಲ್ದರ್ಜೆಗೇರುವ ಅವಕಾಶವಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿದ್ದ ಅಡ್ರರ್ಲಿ ಪದ್ಧತಿಯನ್ನು ರದ್ದುಗೊಳಿಸಿ ಆದೇಶ ನೀಡಲಾಗಿದೆ. ಆದರೆ ಇನ್ನೂ ಜಾರಿಯಾಗಿಲ್ಲ ಎಂದು ಒಪ್ಪಿಕೊಂಡರು.

ತಿದ್ದುಪಡಿ ಇಲ್ಲ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನೇಮಕ ಸಂಬಂಧ ಅಂತಿಮ ಪಟ್ಟಿಯಲ್ಲಿ ಹೆಸರಿರುವವರು ಹಂಚಿಕೆಯಾದ ಇಲಾಖೆಯಲ್ಲಿ ವರದಿ ಮಾಡಿಕೊಳ್ಳದೆ, ಖಾಲಿ ಉಳಿಯುವ ಹುದ್ದೆಗಳನ್ನು ಮುಂದಿನ ವರ್ಷದ ರಿಕ್ತ ಸ್ಥಾನ (ಫ್ರೇಶ್ ವೇಕೆನ್ಸಿ) ಎಂದು ಪರಿಗಣಿಸಿ ಆ ಹುದ್ದೆಗೂ ಹೊಸದಾಗಿ ನೇಮಕಾತಿ ಮಾಡಿಕೊಳ್ಳುವುದು ಎಂದು ಮತ್ತೊಂದು ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಯಲ್ಲಿ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲು ಆಸ್ಪದ ಇಲ್ಲ. ಆದರೆ ಎ, ಬಿ, ಸಿ, ಡಿ ದರ್ಜೆ ಹುದ್ದೆಗಳ ನೇಮಕಾತಿಯಲ್ಲಿ  ಹೆಚ್ಚುವರಿ ಪಟ್ಟಿ ಪ್ರಕಟಿಸಲು ಅವಕಾಶ ನೀಡಲಾಗಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪರೀಕ್ಷೆ ನಡೆದಾಗ ಕೆಎಎಸ್, ಎಸಿ, ತಹಶೀಲ್ದಾರ್ ಹುದ್ದೆಗಳು ಸೇರಿ 14 ಇಲಾಖೆಗಳಿಗೆ ನೇಮಕಾತಿ ನಡೆಯುತ್ತದೆ. ಕೆಲವರು ಹಂಚಿಕೆಯಾದ ಇತರ ಇಲಾಖೆಗಳಿಗೆ ಸೇರುವುದಿಲ್ಲ. ಅಂತಹ ಹುದ್ದೆಗಳನ್ನು ಬಾಕಿ ಹುದ್ದೆಗಳೆಂದು ನೇಮಕಾತಿ ವೇಳೆ ಪರಿಗಣಿಸಲಾಗುವುದು ಎಂದು ಹೇಳಿದರು.

ಎಸಿಬಿಯಲ್ಲಿ 500 ಪ್ರಕರಣ ದಾಖಲು: ಸಿದ್ದರಾಮಯ್ಯ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸುಮಾರು 500 ಮಂದಿ ಸರಕಾರಿ ಅಧಿಕಾರಿ-ನೌಕರರುಗಳ ವಿರುದ್ಧ ಪ್ರಕರಣ ದಾಖಲಿಸಿದೆ ಎಂಬ ಅಂಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಎಸಿಬಿ ಎಷ್ಟು ಪ್ರಕರಣ ದಾಖಲಿಸಿದೆ, ಯಾವ-ಯಾವ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಈ ಹಂತದಲ್ಲಿ ಸ್ಪಷ್ಟಣೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸಿಬಿಯಲ್ಲಿ 500 ಪ್ರಕರಣಗಳಲ್ಲಿ ಕ್ರಮ ಕೈಗೊಂಡಿದೆ. ಅಷ್ಟು ಪ್ರಕರಣಗಳ ಮಾಹಿತಿಯನ್ನು ಪಡೆದು ಈ ಸದನದಲ್ಲೇ ಉತ್ತರ ನೀಡುತ್ತೇನೆ. ಅದಕ್ಕೆ ಕಾಲಾವಕಾಶ ಬೇಕು. ಯಾವ ಪ್ರಕರಣವನ್ನು ಮುಚ್ಚಿಡುವ ಉದ್ದೇಶ ಸರಕಾರಕ್ಕೆ ಇಲ್ಲ. ಮಾಹಿತಿ ಹಕ್ಕು ಕಾಯ್ದೆ (ಆರ್‍ಟಿಐ) ಇರುವುದರಿಂದ ಯಾವುದೇ ವಿಚಾರಗಳನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X