Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳದ...

ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಾ. ಕಾರಂತ ಪೆರಾಜೆ

ವಾರ್ತಾಭಾರತಿವಾರ್ತಾಭಾರತಿ15 Nov 2017 6:51 PM IST
share
ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಾ. ಕಾರಂತ ಪೆರಾಜೆ

 ಪುತ್ತೂರು, ನ. 15: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ವತಿಯಿಂದ ಕಡಬದ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16 ರಂದು ನಡೆಯಲಿರುವ 17 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂಕಣಕಾರ, ಯಕ್ಷಗಾನ ಕಲಾವಿದ, ಪತ್ರಕರ್ತ ನಾ. ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ.

ಯಕ್ಷಗಾನ ಕಲಾವಿದರಾಗಿ, ಪತ್ರಕರ್ತರಾಗಿ ಪರಿಚಿತವಾಗಿರುವ ನಾ.ಕಾರಂತ ಪೆರಾಜೆ ಅವರು ಕೃಷಿ ಪತ್ರಕರ್ತರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಪ್ರಶಸ್ತಿಯೂ ಲಭಿಸಿದೆ. ಇದೀಗ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

 ಕನ್ನಡ ಸಾಹಿತ್ಯ ಪರಿಷತ್‌ನ ವತಿಯಿಂದ ಕಡಬದ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16ರಂದು  ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನಾ. ಕಾರಂತ ಪೆರಾಜೆ ಅವರು ಸುಬ್ರಹ್ಮಣ್ಯ ಕಾರಂತ ಮತ್ತು ಲಕ್ಷ್ಮೀ ಕಾರಂತ್ ಅವರ ಪುತ್ರರಾಗಿ ಸುಳ್ಯ ತಾಲೂಕು ಪೆರಾಜೆಯಲ್ಲಿ 1963 ರಲ್ಲಿ ಜನಿಸಿದರು. 1991ರ ಬಳಿಕ ಪುತ್ತೂರಿನಲ್ಲಿ ವಾಸ ಮಾಡುವುದರೊಂದಿಗೆ, ಕೃಷಿ ಮಾಸಿಕ ಅಡಿಕೆ ಪತ್ರಿಕೆಯಲ್ಲಿ ಕಚೇರಿ ವ್ಯವಸ್ಥಾಪಕರಾಗಿ ಸೇವೆಗೆ ಸೇರ್ಪಡೆಗೊಂಡು ಈಗ ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಜ್ಯದ ನಾನಾ ಪತ್ರಿಕೆಗಳಲ್ಲಿ ವ್ಯಕ್ತಿ ಚಿತ್ರ, ವಿಮರ್ಶೆ, ಅವಲೋಕನ, ಸಾಮಾಜಿಕ ನುಡಿಚಿತ್ರ, ಸಮಸಾಮಯಿಕ ಬರಹಗಳ ಮೂಲಕ ಹವ್ಯಾಸಿ ಪತ್ರಕರ್ತರಾಗಿ ದುಡಿಯುತ್ತಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 26 ವರ್ಷಗಳಿಂದ ವೇಷಧಾರಿ, ತಾಳಮದ್ದಳೆ ಅರ್ಥಧಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಎಡನೀರು, ಮಲ್ಲ, ಕೂಡ್ಲು ಮೇಳಗಳಲ್ಲಿ ಹವ್ಯಾಸಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿವಿಧ ಪತ್ರಿಕೆಗಳಲ್ಲಿ ಕೃಷಿ-ಗ್ರಾಮೀಣ ವಿಚಾರದ ನೆಲದ ನಾಡಿ ಎನ್ನುವ ಪಾಕ್ಷಿಕ ಅಂಕಣ, ಕೃಷಿ ಕುರಿತ ಮಾಂಬಳ ಎನ್ನುವ ಪಾಕ್ಷಿಕ ಅಂಕಣ, ಯಕ್ಷಗಾನ ಕುರಿತಾದ ದಧಿ ಗಿಣತೋ.. ಎನ್ನುವ ಸಾಪ್ತಾಹಿಕ ಅಂಕಣಗಳ ಮೂಲಕ ನಾಡಿಗೆ ಪರಿಚಿತರಾಗಿದ್ದಾರೆ.

ತಳಿ ತಪಸ್ವಿ (ಭತ್ತದ ತಳಿ ಸಂಗ್ರಾಹಕ ದೇವರಾವ್ ಕುರಿತು), ಮಾಂಬಳ (ಅಂಕಣ ಬರಹ), ಮನ ಮಿಣುಕು (ನಿತ್ಯ ಬದುಕಿನ ಕಣ್ಣೋಟದಲ್ಲಿ ದಾಖಲಾದ ವಿಚಾರಗಳು), ಮಣ್ಣ ಮಿಡಿತ (ಕೃಷಿ ಸಾಹಿತ್ಯ), ಮಣ್ಣ ಮಾಸು (ಕೃಷಿ ಸಾಹಿತ್ಯ), ಹಸಿರು ಮಾತು (ಕೃಷಿ ಬರಹಗಳ ಸಂಕಲನ), ಕಾಡುಮಾವು (ಕೃಷಿ ಬರಹಗಳ ಸಂಕಲನ), ಎಡ್ವರ್ಡ್ ರೆಬೆಲ್ಲೋ (ತಳಿ ಸಂಗ್ರಾಹಕ), ನೆಲದನಾಡಿ-ಭಾಗ 1, ನೆಲದ ನಾಡಿ-ಭಾಗ 2 (ಅಂಕಣ ಸಂಕಲನ), ಅವಿಲು (ಕಿರು ಬರಹಗಳ ಸಂಗ್ರಹ-ಸಾಧಕರ ಪರಿಚಯಗಳು), ಮೂಲಿಕಾ ತಜ್ಞ ವೆಂಕಟರಾಜ ದೈತೋಟ (ವ್ಯಕ್ತಿ ಪರಿಚಯ), ಜೀವಜಲ (ಅಚ್ಚಿನಲ್ಲಿದೆ) ಒಟ್ಟು 13 ಕೃತಿಗಳು ಇವರಿಂದ ಪ್ರಕಟಗೊಂಡಿವೆ.

ಶೇಣಿ ದರ್ಶನ, ಶೇಣಿ ಚಿಂತನ, ಹಾಸ್ಯಗಾರನ ಅಂತರಂಗ, ಯಕ್ಷ ಕೋಗಿಲೆ, ಅಂತಿಕ, ಸಾಮಗ ಪಡಿದನಿ, ದಗಲೆ, ಬಣ್ಣದ ಬದುಕಿನ ಸ್ವಗತ, ಅಡ್ಡಿಗೆ, ಸುಮನಸ ಮೊದಲಾದ 10 ಯಕ್ಷಗಾನಕ್ಕೆ ಸಂಬಂಧಿಸಿದ ಕೃತಿಗಳು ಬಿಡುಗಡೆಗೊಂಡಿವೆ. ಮಾತ್ರವಲ್ಲದೆ ಪದಯಾನ, ಅಡ್ಕ-ವಚೋಹಾಸ, ಸಾರ್ಥಕ, ಜಾಗರದ ಜೋಷಿ ಸಂಪಾದಿತ ಕೃತಿಗಳು.
ಪ್ರವಾಸ, ಬಾನುಲಿ ಕಾರ್ಯಕ್ರಮ. ಭಾಷಣ, ಉಪನ್ಯಾಸ. ಕೃಷಿಕರ ಸಂದರ್ಶನ ಇವು ಇತರ ಹವ್ಯಾಸಗಳು. ಅವರು ಬರೆದ ಅಕ್ಷರ ಯೋಗಿಯ ನೋಡಲ್ಲಿ (ಹರೇಕಳ ಹಾಜಬ್ಬರು ಶಾಲೆ ಕಟ್ಟಿದ ಸಾಹಸ ಗಾಥೆ) ಬರೆಹವು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯಗಳ ವಾಣಿಜ್ಯ ವಿಭಾಗದ 4ನೇ ಸೆಮಿಸ್ಟರ್‌ನ ಕನ್ನಡ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಊಟದ ಬಟ್ಟಲಿನಲ್ಲಿ ವಿಷ ಎನ್ನುವ ಶೀರ್ಷಿಕೆಯಲ್ಲಿ ರಾಸಾಯನಿಕಗಳ ಘೋರತೆ ಕುರಿತು ಅರಿವನ್ನು ಮೂಡಿಸಲು ಶಾಲೆ, ಕಾಲೇಜು, ಕೃಷಿ ಕಾರ್ಯಕ್ರಮಗಳಲ್ಲಿ ಪವರ್ ಪಾಯಿಂಟ್ ಮೂಲಕ ಉಪನ್ಯಾಸ. ಈಗಾಗಲೇ ಐವತ್ತಕ್ಕೂ ಶಾಲೆ-ಕಾಲೇಜುಗಳಲ್ಲಿ ಉಪನ್ಯಾಸ ನೀಡಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾಯೋಜಿತ ರೇಡಿಯೋ ಪಾಂಚಜನ್ಯದಲ್ಲಿ ಕೃಷಿ ಮತ್ತು ಯಕ್ಷಗಾನ ಕುರಿತು ಕಾರ್ಯಕ್ರಮ ನಿರೂಪಣೆಯೊಂದಿಗೆ ಕೃಷಿ, ಪತ್ರಿಕೋದ್ಯಮ, ಯಕ್ಷಗಾನ, ಸಾಹಿತ್ಯ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X