Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತ್ರಸ್ತರಿಗೆ ಭೂ ದಾಖಲೆ ನೀಡಿ:...

ಸಂತ್ರಸ್ತರಿಗೆ ಭೂ ದಾಖಲೆ ನೀಡಿ: ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಮಂಜೂರಾತಿ ಕುರಿತ ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ15 Nov 2017 11:16 PM IST
share

ಶಿವಮೊಗ್ಗ, ನ.15: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಡಿನೋಟಿಫೈ ಆಗಿರುವ ಭೂಮಿಯನ್ನು ನಿಯಮಾನುಸಾರ ವಿಲೇ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಸೂಚಿಸಿದ್ದಾರೆ.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಮಂಜೂರಾತಿಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಈಗಾಗಲೇ ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಸರ್ವೇ ಇಲಾಖೆಗಳ ಅಧಿಕಾರಿಗಳು ಪ್ರತ್ಯೇಕವಾಗಿ ಸರ್ವೇ ಕಾರ್ಯ ಪೂರ್ಣಗೊಳಿಸಿದ್ದು, ಈ ಸರ್ವೇಯಲ್ಲಿ ವ್ಯತ್ಯಾಸವಿರುವ ಜಮೀನುಗಳನ್ನು ಸಂಬಂಧಿಸಿದ ಇಲಾಖೆಗಳು ಅಧಿಕಾರಿಗಳು ಜಂಟಿ ಸವೇರ್  ನಡೆಸಿ, ಆರ್‌ಟಿಸಿಯಲ್ಲಿ ವೈಯಕ್ತಿಕ ಮಾಲಕತ್ವ ನಮೂದಿಸಿ ಅರ್ಹರೆಂದು ಗುರುತಿಸಲಾದ ಫಲಾನುಭವಿಗಳಿಗೆ ಪಹಣಿ ವಿತರಿಸುವಂತೆ ಅವರು ಸೂಚಿಸಿದರು.

ಜಂಟಿ ಸರ್ವೇಯನ್ನು ನ.16ರಿಂದ 25ರೊಳಗಾಗಿ ಪೂರ್ಣಗೊಳಿಸಿ, ವರದಿ ನೀಡಿ, ಅರ್ಹರಿಗೆ ಭೂ ಮಂಜೂರಾತಿ ಪತ್ರ ನೀಡುವಂತೆ ಸೂಚಿಸಿದ ಅವರು, ಈಗಾಗಲೇ ನಡೆಸಿದ ಸರ್ವೇಯಲ್ಲಿ ಯಾವುದೇ ಆಕ್ಷೇಪಣೆಗಳಿಲ್ಲದಿದ್ದಲ್ಲಿ ಅಂತಹವರಿಗೆ ಪಹಣಿಯಲ್ಲಿ ವೈಯಕ್ತಿಕ ಮಾಲಕತ್ವ ನಮೂದಿಸಿ, ಪಹಣಿ ನೀಡಬೇಕು. ಇದಕ್ಕೆ ಯಾವುದೇ ಇಲಾಖೆಯ ಅಡ್ಡಿಯಿಲ್ಲ. ಇನ್ನೂ ಮಂಜೂರಾತಿಯಾಗಿರುವ ಜಮೀನಿನಲ್ಲಿ ಅಲ್ಪ-ಸ್ವಲ್ಪ ವ್ಯತ್ಯಾಸಗಳಿದ್ದರೆ ಅವುಗಳನ್ನು ಜಂಟಿ ಸರ್ವೇಯಲ್ಲಿ ಗುರುತಿಸಿ ಸಮಸ್ಯೆಯ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಾಧ್ಯವಾದಷ್ಟು ಅಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ಆದಾಗ್ಯೂ ಸಮಸ್ಯೆ ಬಗೆಹರಿಯಲಾರೆಂಬುದು ಖಚಿತವಾದಲ್ಲಿ, ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಟ್ಟಿದ್ದೆಂದು ಖಚಿತವಾದಲ್ಲಿ ಅವುಗಳನ್ನು ಹೊರತುಪಡಿಸಿ, ಉಳಿದ ಜಮೀನಿನ ಮಾಲಕರಿಗೆ ಪ್ರಮಾಣಪತ್ರ ನೀಡಬಹುದಾಗಿದೆ ಎಂದರು.

ಇದಲ್ಲದೇ ಸರ್ವೇಯಲ್ಲಿ ಗುರುತಿಸಿದಂತೆ ಸಮಪ್ರಮಾಣದಲ್ಲಿ ಭೂಮಿ ಇದ್ದು, ಸ್ಥಳ ವ್ಯತ್ಯಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ವಿಲೇವಾರಿಗೆ ಕ್ರಮ ಕೈಗೊಳ್ಳಬಹುದಾಗಿದೆ. ಸರ್ವೇ ಭೂಮಿಗೂ ಸಾಗುವಳಿ ಭೂಮಿಗೆ ತೀವ್ರಪ್ರಮಾಣದ ವ್ಯತ್ಯಾಸವಿದ್ದಲ್ಲಿ ಹಾಗೂ ಈ ಹಿಂದೆ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ವಾಸವಿದ್ದು, ಇದೀಗ ಭೂಸಂತ್ರಸ್ತರಾಗಿದ್ದು, ಅರಣ್ಯದಲ್ಲಿ ವಾಸವಿರುವವರ ಕುರಿತು ಕೈಗೊಳ್ಳಬಹುದಾದ ಪರ್ಯಾಯ ಕ್ರಮಗಳ ಬಗ್ಗೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿ, ಸರಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಎಚ್.ಟಿ. ಕೃಷ್ಣಮೂರ್ತಿ, ಸಾಗರ ಉಪವಿಭಾಗಾಧಿಕಾರಿ ನಾಗರಾಜ ಸಿಂಗ್ರೇರ್, ಜಿಲ್ಲಾ ಭೂಮಾಪನಾಧಿಕಾರಿ ನಾರಾಯಣ ಸ್ವಾಮಿ ಸೇರಿದಂತೆ ಶಿವಮೊಗ್ಗ, ಸಾಗರ ತಾಲೂಕುಗಳ ತಹಶೀಲ್ದಾರ್‌ರು, ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X