ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ಕೃತ್ಯ

ನೋಯ್ಡಾ, ನ.16: ಬಿಜೆಪಿ ನಾಯಕ ಹಾಗು ಗ್ರಾಮವೊಂದರ ಮುಖ್ಯಸ್ಥರಾಗಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ನೋಯ್ಡಾದಲ್ಲಿ ನಡೆದಿದೆ.
ಹೈಬತ್ ಪುರ್ ಎಂಬಲ್ಲಿ ಶಾಲೆಯೊಂದನ್ನು ನಡೆಸುತ್ತಿರುವ ಬಿಜೆಪಿ ನಾಯಕ ಶಿವ ಕುಮಾರ್ ಅವರು ಚಾಲಕ ಹಾಗು ಅಂಗರಕ್ಷಕರೊಡನೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದರು.
ಈ ಸಂದರ್ಭ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಕಾರನ್ನು ಓವರ್ ಟೇಕ್ ಮಾಡಿ ಗುಂಡಿನ ಮಳೆಗರೆದಿದ್ದಾರೆ. ದಾಳಿಯಲ್ಲಿ ಶಿವಕುಮಾರ್ ಹಾಗು ಓರ್ವ ಅಂಗರಕ್ಷಕ ಮೃತಪಟ್ಟಿದ್ದಾರೆ.
ಇವರ ಜೊತೆಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story





