Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರಸಮಾಧಾನ ಯೋಜನೆಯ ಫಲಾನುಭವಿಗಳಿಗೆ...

ಕರಸಮಾಧಾನ ಯೋಜನೆಯ ಫಲಾನುಭವಿಗಳಿಗೆ ಬಡ್ಡಿ, ದಂಡದ ಮೊತ್ತದಲ್ಲಿ ಶೇ.90ರಷ್ಟು ವಿನಾಯಿತಿ ನೀಡಲು ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ16 Nov 2017 9:40 PM IST
share

ಬೆಂಗಳೂರು, ನ.16: ರಾಜ್ಯ ಸರಕಾರದ ಕರಸಮಾಧಾನ ಯೋಜನೆಯ ಅರ್ಹ ಫಲಾನುಭವಿಗಳಿಗೆ ಯೋಜನೆ ಜಾರಿಯಾಗುವ ಮೊದಲು ನೀಡಿದ್ದ ಭರವಸೆಯಂತೆ ಬಡ್ಡಿ ಹಾಗೂ ದಂಡದ ಮೊತ್ತದಲ್ಲಿ ಶೇ.90ರಷ್ಟು ವಿನಾಯಿತಿ ನೀಡಬೇಕು ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಇದರಿಂದ ಕರಸಮಾಧಾನ ಯೋಜನೆಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ತೆರಿಗೆಯ ಪೂರ್ಣ ಮೊತ್ತ ಸೇರಿ ಬಡ್ಡಿ ಹಾಗೂ ದಂಡದಲ್ಲಿ ಶೇ. 10ರಷ್ಟು ಹಣ ಪಾವತಿಸಿದ್ದರೂ, ವಾಣಿಜ್ಯ ತೆರಿಗೆ ಆಯುಕ್ತರ ಆದೇಶಗಳಿಂದ ಚಿಂತೆಗೀಡಾಗಿದ್ದವರಿಗೆ ರಿಲೀಫ್ ದೊರೆತಂತಾಗಿದೆ.

ಯೋಜನೆಯ ನಿಯಮಗಳಂತೆ ಪಾವತಿಸಿದ ತೆರಿಗೆಯ ಮೊತ್ತವನ್ನು ಬಡ್ಡಿಗೆ ಕಡಿತಗೊಳಿಸಿಕೊಂಡು, ಶೇ 90ರಷ್ಟು ವಿನಾಯಿತಿ ನೀಡಲು ನಿರಾಕರಿಸಿದ್ದ ವಾಣಿಜ್ಯ ತೆರಿಗೆ ಆಯುಕ್ತರುಗಳ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸುಮಾರು 20ಕ್ಕೂ ಹೆಚ್ಚು ರಿಟ್ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಸರಕಾರ ಜಾರಿಗೊಳಿಸಿರುವ ಈ ವಿಶೇಷ ಯೋಜನೆಗೆ ಕರ್ನಾಟಕ ಮೌಲ್ಯವರ್ಧಿತ ತೆರಿಗೆ ಕಾಯಿದೆಯ ಕಲಂ 42 (6) ಅನ್ವಯವಾಗುವುದಿಲ್ಲ. ಹೀಗಾಗಿ ಅರ್ಜಿದಾರರು ಪಾವತಿಸಿರುವ ತೆರಿಗೆ ಹಣವನ್ನು ಬಡ್ಡಿಗೆ ಕಡಿತಗೊಳಿಸಿರುವ ಆದೇಶಗಳನ್ನು ವಜಾಗೊಳಿಸಿ, ಮೂರು ತಿಂಗಳಲ್ಲಿ ಯೋಜನೆಯಲ್ಲಿ ನಿಗದಿಪಡಿಸಿದಂತೆ ಅರ್ಜಿದಾರರಿಗೆ ಶೇ 90ರಷ್ಟು ಮೊತ್ತ ಮನ್ನಾ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.

ಏನಿದು ವಿಚಾರ: ಜುಲೈ 1ರಿಂದ ದೇಶಾದ್ಯಂತ ಜಾರಿಯಾಗಲಿದ್ದ ಜಿಎಸ್‌ಟಿ ಹಿನ್ನೆಲೆ ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿದ್ದ ತೆರಿಗೆಯನ್ನು ವಸೂಲಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 2017-18ರ ಬಜೆಟ್‌ನಲ್ಲಿ ಕರಸಮಾಧಾನ ಯೋಜನೆ ಘೋಷಿಸಿದ್ದರು. ಈ ಯೋಜನೆ ಲಾಭ ಪಡೆಯಲು ಮೇ 31ಕ್ಕೆ ಅಂತಿಮ ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ತೆರಿಗೆದಾರರು ತಾವು ಉಳಿಸಿಕೊಂಡಿದ್ದ ಪೂರ್ಣ ಮೊತ್ತದ ಪ್ರಮಾಣದ ತೆರಿಗೆ ಹಾಗೂ ದಂಡ, ಬಡ್ಡಿಯ ಶೇ 10ರಷ್ಟು ಹಣವನ್ನು ಪಾವತಿಸಿದರೇ, ಉಳಿದ ದಂಡ ಹಾಗೂ ಬಡ್ಡಿಯ ಮೊತ್ತದಲ್ಲಿ ಶೇ 90ರಷ್ಟು ಮನ್ನಾ ಮಾಡಲಾಗುವುದು ಎಂದು ಹೇಳಲಾಗಿತ್ತು.

ಅದರಂತೆ ಕಂಪೆನಿಗಳು, ಉದ್ದಿಮೆದಾರರು, ವ್ಯಾಪಾರಿಗಳು ಈ ಯೋಜನೆ ಲಾಭ ಪಡೆದುಕೊಳ್ಳಲು ಬಾಕಿ ತೆರಿಗೆ, ಶೇ 10ರಷ್ಟು ಬಡ್ಡಿ, ದಂಡದ ಮೊತ್ತ ಪಾವತಿಸಿದರೂ, ವಾಣಿಜ್ಯ ಇಲಾಖೆ ಆಯುಕ್ತರುಗಳು, ತೆರಿಗೆದಾರರು ಪಾವತಿಸಿದ ಹಣವನ್ನು ಬಡ್ಡಿಗೆ ಜಮಾ ಮಾಡಿಕೊಂಡು ಯೋಜನೆ ಅನ್ವಯವಾಗುವುದಿಲ್ಲ ಎಂದು ನೋಟಿಸ್ ನೀಡಿದ್ದರು.

ಕರ್ನಾಟಕ ಮೌಲ್ಯವರ್ಧಿತ ತೆರಿಗೆ ಕಾಯಿದೆಯ ಕಲಂ 42 (6) ಕಲಂ ಅನ್ವಯ ಯಾವುದೇ ತೆರಿಗೆ ಪಾವತಿಸಿದರೂ ಮೊದಲು ಬಡ್ಡಿಗೆ ಜಮಾ ಆಗಲಿದೆ ಎಂಬುದು ಇಲಾಖೆಯ ಸ್ಪಷ್ಟೀಕರಣವಾಗಿತ್ತು.

ಅರ್ಜಿದಾರರ ವಾದವೇನು?: ವಾಣಿಜ್ಯ ಇಲಾಖೆಯ ಆದೇಶ ಪ್ರಶ್ನಿಸಿ ರೀಟೈಲ್ ಪ್ರೈವೈಟ್ ಸರ್ವೀಸ್ ಲಿಮಿಟೆಡ್, ಲಕ್ಷ್ಮೀ ಟೂಲ್ಸ್ ಅಂಡ್ ಕಾಂಪೋನೆಂಟ್ಸ್, ನೋಕಿಯಾ ಇಂಡಿಯಾ ಪ್ರೈವೈಟ್ ಲಿಮಿಟೆಡ್, ಸ್ಮೈಲ್ಸ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸೇರಿದಂತೆ 20ಕ್ಕೂ ಹೆಚ್ಚು ಕಂಪೆನಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು. ರಾಜ್ಯ ಸರಕಾರ ಜಾರಿಗೊಳಿಸಿರುವ ವಿಶೇಷ ಕರಸಮಾಧಾನ ಯೋಜನೆಗೆ ಕೆವಿಎಟ್ ಕಾಯಿದೆ ನಿಯಮಗಳು ಅನ್ವಯ ಆಗುವುದಿಲ್ಲ. ಹೀಗಾಗಿ ವಾಣಿಜ್ಯ ಇಲಾಖೆಯ ಆಯುಕ್ತರ ನೋಟಿಸ್ ರದ್ದುಗೊಳಿಸಿ, ನಿಗದಿಯಂತೆ ಶೇ 90 ರಷ್ಟು ವಿನಾಯಿತಿ ನೀಡಲು ಆದೇಶಿಸುವಂತೆ ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X