Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದಲ್ಲಿ ಮೃತಪಟ್ಟ ಶೆರಿನ್...

ಅಮೆರಿಕದಲ್ಲಿ ಮೃತಪಟ್ಟ ಶೆರಿನ್ ಮ್ಯಾಥ್ಯೂಸ್ ಳ ದತ್ತು ತಾಯಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Nov 2017 11:26 PM IST
share
ಅಮೆರಿಕದಲ್ಲಿ ಮೃತಪಟ್ಟ ಶೆರಿನ್ ಮ್ಯಾಥ್ಯೂಸ್ ಳ  ದತ್ತು ತಾಯಿಯ ಬಂಧನ

ಹ್ಯೂಸ್ಟನ್ (ಅಮೆರಿಕ), ನ. 17: ಕಳೆದ ತಿಂಗಳು ಡಲ್ಲಾಸ್‌ನ ಚರಂಡಿಯೊಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಭಾರತೀಯ ಮಗು ಶೆರಿನ್ ಮ್ಯಾಥ್ಯೂಸ್‌ಳ ದತ್ತು ತಾಯಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

3 ವರ್ಷದ ಮಗು ನಾಪತ್ತೆಯಾಗಿದೆಯೆಂದು ಪೊಲೀಸರಿಗೆ ದೂರು ನೀಡಿದ ಮೊದಲಿನ ರಾತ್ರಿ ಭಾರತೀಯ-ಅಮೆರಿಕನ್ ದಂಪತಿಯು ಮಗುವನ್ನು ಒಂಟಿಯಾಗಿ ಮನೆಯ ಹೊರಗಡೆ ಬಿಟ್ಟಿದ್ದರು ಎಂಬುದಾಗಿ ಪೊಲೀಸರು ಆರೋಪಿಸಿದ್ದಾರೆ.

ಮಗುವಿನ ದತ್ತು ತಂದೆ ವೆಸ್ಲಿ ಮ್ಯಾಥ್ಯೂಸ್‌ನನ್ನು ಪೊಲೀಸರು ಕಳೆದ ತಿಂಗಳೇ ಬಂಧಿಸಿದ್ದಾರೆ.

ವೆಸ್ಲಿ ಮ್ಯಾಥ್ಯೂಸ್‌ ಮತ್ತು ಆತನ ಹೆಂಡತಿ ಸಿನಿ ಮ್ಯಾಥ್ಯೂಸ್‌ ಅಕ್ಟೋಬರ್ 6ರ ರಾತ್ರಿ ತಮ್ಮ ಪುತ್ರಿಯೊಂದಿಗೆ ಹೊರಗಡೆ ಊಟಕ್ಕೆ ಹೋಗಿದ್ದರು. ಶೆರಿನ್ ಹಾಲು ಕುಡಿಯಲಿಲ್ಲ ಎಂಬ ಕಾರಣಕ್ಕೆ ಅವರು ಮಗುವನ್ನು ಬಿಟ್ಟು ಹೋಗಿದ್ದರು.

ನೋಂದಾಯಿತ ಭಾರತೀಯ-ಅಮೆರಿಕನ್ ನರ್ಸ್ ಆಗಿರುವ 35 ವರ್ಷದ ಸಿನಿ ಮ್ಯಾಥ್ಯೂಸ್‌ರನ್ನು ರಿಚರ್ಡ್‌ಸನ್ ಪೊಲೀಸರು ಬಂಧಿಸಿದರು.

ಮಗುವನ್ನು ಹೊರಗೆ ಬಿಟ್ಟು ಅಪಾಯಕ್ಕೆ ಗುರಿಪಡಿಸಿದ ಆರೋಪವನ್ನು ಆಕೆಯ ಮೇಲೆ ಹೊರಿಸಲಾಗಿದೆ. ಇದಕ್ಕೆ 2.5 ಲಕ್ಷ ಡಾಲರ್ ಜಾಮೀನು ನಿಗದಿಪಡಿಸಲಾಗಿದೆ. ಈ ಅಪರಾಧಕ್ಕೆ ಆರು ತಿಂಗಳಿನಿಂದ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಬಾಲಕಿಯ ದತ್ತು ತಂದೆ 37 ವರ್ಷದ ವೆಸ್ಲಿಯ ವಿರುದ್ಧ ಮಗುವಿನ ಸಾವಿಗೆ ಕಾರಣವಾದ ಆರೋಪವನ್ನು ಹೊರಿಸಲಾಗಿದೆ. ಆತನಿಗೆ 10 ಲಕ್ಷ ಡಾಲರ್ ಜಾಮೀನು ನಿಗದಿಪಡಿಸಲಾಗಿದೆ. ಅಪರಾಧ ಸಾಬೀತಾದರೆ 99 ವರ್ಷಗಳ ಜೈಲು ಶಿಕ್ಷೆಗೆ ಅವಕಾಶವಿದೆ.

ವೆಸ್ಲಿ ಆರಂಭದಲ್ಲಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಹಾಲು ಕುಡಿಯದ ಹಿನ್ನೆಲೆಯಲ್ಲಿ ಶೆರಿನ್‌ಳನ್ನು ಮುಂಜಾನೆ 3 ಗಂಟೆಗೆ ಮನೆಯಿಂದ ಹೊರಗಿರುವ ಮರವೊಂದರ ಕೆಳಗೆ ನಿಲ್ಲುವಂತೆ ಹೇಳಿದ್ದೆ, 15 ನಿಮಿಷ ಬಳಿಕ ಹೊರಗೆ ಹೋಗಿ ನೋಡಿದಾಗ ಮಗು ಇರಲಿಲ್ಲ ಎಂದು ಹೇಳಿದ್ದನು.

ಹಲವು ದಿನಗಳ ಬಳಿಕ ಮಗು ಮನೆಯಿಂದ ಅರ್ಧ ಕಿ.ಮೀ. ದೂರದ ಚರಂಡಿಯಲ್ಲಿ ಪತ್ತೆಯಾದಾಗ, ತನ್ನ ಹೇಳಿಕೆಯನ್ನು ಆತ ಬದಲಾಯಿಸಿದನು. ಹಾಲು ಕುಡಿಯಲು ನಿರಾಕರಿಸಿದ ಮಗುವಿಗೆ ಹಾಲು ಕುಡಿಸಿದಾಗ ಅದು ಉಸಿರುಗಟ್ಟಿತು ಹಾಗೂ ಉಸಿರಾಡುವುದನ್ನು ನಿಲ್ಲಿಸಿತು ಎಂದು ತನ್ನ ಎರಡನೆ ಹೇಳಿಕೆಯಲ್ಲಿ ಆತ ಹೇಳಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X