Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾನು ಸಮಾಜ ಮುಖಿಯಾಗಿ ಚಿಂತಿಸಲು ರಂಗಭೂಮಿ...

ನಾನು ಸಮಾಜ ಮುಖಿಯಾಗಿ ಚಿಂತಿಸಲು ರಂಗಭೂಮಿ ಚಳವಳಿ ಕಾರಣ: ನಟ ಪ್ರಕಾಶ್‍ ರೈ

ವಾರ್ತಾಭಾರತಿವಾರ್ತಾಭಾರತಿ18 Nov 2017 11:04 PM IST
share
ನಾನು ಸಮಾಜ ಮುಖಿಯಾಗಿ ಚಿಂತಿಸಲು ರಂಗಭೂಮಿ ಚಳವಳಿ ಕಾರಣ: ನಟ ಪ್ರಕಾಶ್‍ ರೈ

ಕೋಲಾರ, ನ.18: ನಾನು ಸಮಾಜ ಮುಖಿಯಾಗಿ ಚಿಂತಿಸಲು ಮತ್ತು ಸಮಾಜದ ದನಿಯಾಗಿ ನಿಲ್ಲಲು ರಂಗಭೂಮಿ ಚಳವಳಿ ಕಾರಣವಾಗಿದೆ. ಹುಟ್ಟಿದಾಗ ಕಲೆ ಇರಲಿಲ್ಲ. ಹುಟ್ಟಿಸಿದವರಲ್ಲೂ ಕಲೆ ಇರಲಿಲ್ಲ. ಆದರೆ ಬೆಳೆಯುತ್ತಾ ಭೂಮಿಯಲ್ಲಿ ನಾನೊಬ್ಬ ಕಲಾವಿದನಾಗಿ ರೂಪುಗೊಂಡೆ ಎಂದು ಬಹುಭಾಷಾ ನಟ ಪ್ರಕಾಶ್‍ರೈ ತಿಳಿಸಿದ್ದಾರೆ.

ಮಾಲೂರು ತಾಲೂಕಿನ ಆಲಂಬಾಡಿ ಬಳಿ ಸಾರಂಗರಂಗ ಆಶ್ರಯದಲ್ಲಿ ಶ್ರೀ ಗೋಪಾಲಪ್ಪ ಮನೆಯಂಗಳ ರಂಗಭೂಮಿ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಿಂತಕರು ಮತ್ತು ರಂಗಭೂಮಿಯ ಕಲಾವಿದರ ಉಳಿಪೆಟ್ಟು ಮತ್ತು ಅವರ ಮಾತುಗಳ ಪ್ರಭಾವದಿಂದ ನಾನೊಬ್ಬ ಕಲಾವಿದನಾಗಿ ರೂಪುಗೊಂಡೆ. ನಮ್ಮನ್ನು ನಾವು ಗೌರವಿಸಿದಂತೆ ಇನ್ನೊಬ್ಬರನ್ನೂ ಗೌರವಿಸಬೇಕು ಎಂದರು.

ರಂಗಕರ್ಮಿ ಹಾಗೂ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ಈಗಿನ ಪಿಚ್ಚಳ್ಳಿ ಶ್ರೀನಿವಾಸ್ 30 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದು, ಸಮುದಾಯದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಶ್ರೀನಿವಾಸ್ ಹೋರಾಟಗಳಿಗೆ ಕೊರಳುಕೊಟ್ಟಿದ್ದರು. ಆ ಕಾಲಕ್ಕೆ ಜನಮುಖಿಯಾದ ದನಿ ನೀಡಿದ ಯುವಕ ಆಗಿದ್ದರು. ಆ ಹೊತ್ತಿನ ಕೊಡುಗೆ ಇಂದಿನ ಸಮಾರಂಭಕ್ಕೆ ಕಾರಣವಾಗಿದೆ. ಮೂರು ದಶಕಗಳ ಕಾಲ ಒಬ್ಬ ಕಲಾವಿದನಾಗಿ ಪಿಚ್ಚಹಳ್ಳಿ ಶ್ರೀನಿವಾಸ್ ಸಮುದಾಯಕ್ಕೆ ಕೊಡುಗೆ ನೀಡಿದ್ದಾರೆ. ಆ ಕೊಡುಗೆ ನೀಡಲು ದಲಿತ ಚಳವಳಿ ಒಳ್ಳೆಯ ಅವಕಾಶ ನೀಡಿತ್ತು ಎಂದರು.

ನಟ ಪ್ರಕಾಶ್ ರೈ ಸಂಸ್ಕೃತಿ ಪರ ದನಿ ಬಿಚ್ಚಿ ಮಾತನಾಡುತ್ತಾರೆ. ವ್ಯವಸ್ಥೆಯ ವಿರುದ್ಧ ಮಾತನಾಡಲು ಹಿಂಜರಿಯುವುದಿಲ್ಲ. ಇಂದಿನ ಪರಿಸ್ಥಿತಿಯಲ್ಲಿ ಸಾರಂಗರಂಗದಂತಹ ಪ್ರಯೋಗಗಳು ಅಗತ್ಯವಿದೆ ಎಂದರು. 

ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ. ಗೀತಾ ಮಾತನಾಡಿ, ಆದಿಮ ಆರಂಭವಾಗದಿದ್ದಲ್ಲಿ ಕೋಲಾರದ ಅಂತರಗಂಗೆ ಬೆಟ್ಟ ಮತ್ತೊಂದು ಬಾಬಾ ಬುಡನ್‍ಗಿರಿಯಾಗುತ್ತಿತ್ತು. ಅಂತರಗಂಗೆ ಬೆಟ್ಟದ ಕಾಶಿ ವಿಶ್ವೇಶ್ವರ ದೇವಾಲಯವನ್ನು ಕೇಸರಿಕರಣಗೊಳಿಸಲಾಗಿದೆ. ಅದನ್ನು ಬಜರಂಗದಳ ಕಾರ್ಯಕ್ರಮದಂತೆ ಬಿಂಬಿಸಲಾಗುತ್ತಿದೆ. ಜಾತ್ಯಾತೀತವಾಗಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಒಂದು ಸಮುದಾಯದ ಕಾರ್ಯಕ್ರಮದಂತೆ ಬಿಂಬಿಸಲಾಗುತ್ತಿದೆ ಎಂದು ವಿಷಾದಿಸಿದರು.

ಸಾರಂಗರಂಗದ ರೂವಾರಿ ಪಿಚ್ಚಳ್ಳಿ ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಪರಂಪರೆ ಕಲೆ, ಸಂಸ್ಕೃತಿ ಚಟುವಟಿಕೆಗಳಲ್ಲಿ ಸಾರಂಗ ರಂಗ ತೊಡಗಿಸಿಕೊಳ್ಳಲಿದೆ. ಅದರ ಮುಖಾಂತರ ತಾನೇ ತಾನಾಗಿ ಸಾರಂಗರಂಗ ಬೆಳೆಯಲಿದೆ. ರಂಗ ಚಟುವಟಿಕೆಗಳಿಗಾಗಿ ಬಯಲು ರಂಗಮಂದಿರ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿ.ಎಂ.ಮುನಿಯಪ್ಪ, ಸಿ.ಕೆ. ಗುಂಡಣ್ಣ, ಶಶಿಧರ್ ಅಡಪ, ಸಾರಂಗ ಸಂಸ್ಥೆಯ ಅಧ್ಯಕ್ಷ ಸಿ. ಲಕ್ಷ್ಮೀನಾರಾಯಣ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X