Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ 73.2 ಕೋ.ಜನರು ಶೌಚಾಲಯ...

ಭಾರತದಲ್ಲಿ 73.2 ಕೋ.ಜನರು ಶೌಚಾಲಯ ಸೌಲಭ್ಯ ವಂಚಿತರು: ವರದಿ

ವಾರ್ತಾಭಾರತಿವಾರ್ತಾಭಾರತಿ19 Nov 2017 7:18 PM IST
share
ಭಾರತದಲ್ಲಿ 73.2 ಕೋ.ಜನರು ಶೌಚಾಲಯ ಸೌಲಭ್ಯ ವಂಚಿತರು: ವರದಿ

ಹೊಸದಿಲ್ಲಿ,ನ.19: ಶೌಚಾಲಯ ಸೌಲಭ್ಯವಿಲ್ಲದ ವಿಶ್ವದ ಅತ್ಯಂತ ಹೆಚ್ಚಿನ ಸಂಖ್ಯೆಯ, 73.2 ಕೋಟಿ ಜನರು ಭಾರತದಲ್ಲಿದ್ದಾರೆ ಎಂದು ಅಂತರರಾಷ್ಟ್ರೀಯ ದತ್ತಿಸಂಸ್ಥೆ ವಾಟರ್ ಏಡ್ ತನ್ನ ವರದಿಯಲ್ಲಿ ಹೇಳಿದೆ.

  ಈ ಎಲ್ಲ ಜನರು ಸರದಿಯಲ್ಲಿ ನಿಂತರೆ ಆ ಸಾಲು ನಾಲ್ಕು ಬಾರಿ ಪೃಥ್ವಿಯನ್ನು ಸುತ್ತು ಹಾಕುವಷ್ಟು ದೊಡ್ಡದಾಗಿರುತ್ತದೆ ಎಂದು ವಿಶ್ವ ಶೌಚಾಲಯ ದಿನ(ರವಿವಾರ)ದ ಮುನ್ನ ಬಿಡುಗಡೆಗೊಂಡಿರುವ ವರದಿಯು ಬೆಟ್ಟು ಮಾಡಿದೆ. ಮಹಿಳೆಯರು ಮತ್ತು ಬಾಲಕಿಯರು ಅತ್ಯಂತ ತೀವ್ರ ಬಾಧಿತರಾಗಿದ್ದು, ಇಂತಹ 35 ಕೋ.ಜನರು ಪ್ರಾಥಮಿಕ ನೈರ್ಮಲ್ಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಅದು ಹೇಳಿದೆ.

ತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು, ‘‘ವಿಶ್ವ ಶೌಚಾಲಯ ದಿನದಂದು ದೇಶಾದ್ಯಂತ ನೈರ್ಮಲ್ಯ ಸೌಲಭ್ಯಗಳನ್ನು ಉತ್ತಮಗೊಳಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ಭಾರತದ ವಿವಿಧ ಭಾಗಗಳಲ್ಲಿ ಹೆಚ್ಚೆಚ್ಚು ಶೌಚಾಲಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ನಾನು ಅಭಿನಂದಿಸುತ್ತೇನೆ. ಅವರ ಅಮೂಲ್ಯ ಕೊಡುಗೆಯು ಸ್ವಚ್ಛ ಭಾರತ ಅಭಿಯಾನಕ್ಕೆ ಇನ್ನಷ್ಟು ಬಲವನ್ನು ನೀಡುತ್ತದೆ’’ ಎಂದು ರವಿವಾರ ಟ್ವೀಟಿಸಿದ್ದಾರೆ.

ಸ್ವಚ್ಛ ಭಾರತ ಅಭಿಯಾನದಡಿ ಭಾರತವು ತ್ವರಿತ ಪ್ರಗತಿಯನ್ನು ಮಾಡುತ್ತಿದೆಯಾದರೂ ಭಿನ್ನ ಸಾಮರ್ಥ್ಯದವರು, ಹಿರಿಯ ವ್ಯಕ್ತಿಗಳು, ಕಡುಬಡವರು, ಮಹಿಳೆಯರು ಮತ್ತು ವಯಸ್ಕ ಬಾಲಕಿಯರಿಗೆ ನಿರ್ದಿಷ್ಟವಾದ ಸುರಕ್ಷಿತ ಶೌಚಾಲಯಗಳ ಲಭ್ಯತೆಯ ಮಹತ್ವವನ್ನು ನಾವು ಗುರುತಿಸುವ ಅಗತ್ಯವಿದೆ ಎಂದು ವಾಟರ್ ಏಡ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿ.ಕೆ.ಮಾಧವನ್ ಹೇಳಿದರು.

ಸ್ವಚ್ಛ ಭಾರತ ಅಭಿಯಾನದಡಿ 2019,ಅ.2ರ ವೇಳೆಗೆ ಭಾರತವನ್ನು ಶೇ.100 ರಷ್ಟು ಬಯಲು ಶೌಚ ಮುಕ್ತವಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದಕ್ಕಾಗಿ 2017, ಅಕ್ಟೋಬರ್-2019 ರ ನಡುವೆ 12 ಕೋಟಿ ನೂತನ ಶೌಚಾಲಯಗಳ ನಿರ್ಮಾಣ ಅಗತ್ಯವಿದೆ. 2017,ನವೆಂಬರ್‌ವರೆಗೆ ಈ ಕಾರ್ಯಕ್ರಮದಡಿ ಕೇವಲ 5.38 ಕೋಟಿ ನೂತನ ಶೌಚಾಲಯಗಳು ನಿರ್ಮಾಣಗೊಂಡಿವೆ.

ಗುಜರಾತ್ ತನ್ನ ಶೌಚಾಲಯ ನಿರ್ಮಾಣ ಗುರಿಯನ್ನು ಸಾಧಿಸಿರುವ ಏಕೈಕ ರಾಜ್ಯವಾಗಿದೆ ಎಂಂದು ಟಿಇಆರ್‌ಇ ವಿವಿಯು ಈ ಹಿಂದೆ ಬಿಡುಗಡೆಗೊಳಿಸಿರುವ ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X