Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನುಷಿ ಮಿಸ್ ವರ್ಲ್ಡ್ ಆದದ್ದು 'ಬೇಟಿ...

ಮಾನುಷಿ ಮಿಸ್ ವರ್ಲ್ಡ್ ಆದದ್ದು 'ಬೇಟಿ ಬಚಾವೋ' ಆಂದೋಲನದ ಯಶಸ್ಸು ಎಂದ ಹರ್ಯಾಣ ಸಚಿವೆ!

ವಾರ್ತಾಭಾರತಿವಾರ್ತಾಭಾರತಿ19 Nov 2017 10:03 PM IST
share
ಮಾನುಷಿ ಮಿಸ್ ವರ್ಲ್ಡ್ ಆದದ್ದು ಬೇಟಿ ಬಚಾವೋ ಆಂದೋಲನದ ಯಶಸ್ಸು ಎಂದ ಹರ್ಯಾಣ ಸಚಿವೆ!

ಚಂಡಿಗಡ,ನ.19: ಹರ್ಯಾಣದ ಚೆಲುವೆ ಮಾನುಷಿ ಚಿಲ್ಲರ್(20) ಅವರು ವಿಶ್ವಸುಂದರಿ ಮುಕುಟವನ್ನು ತನ್ನ ಮುಡಿಗೇರಿಸಿಕೊಳ್ಳುವ ಮೂಲಕ ಇನ್ನೊಂದು ಪ್ರಶಸ್ತಿಗಾಗಿ ಭಾರತದ 17 ವರ್ಷಗಳ ಕಾಯುವಿಕೆಗೆ ಮಂಗಳ ಹಾಡಿರುವುದಕ್ಕೆ ಪ್ರಶಂಸಾ ಸಂದೇಶಗಳ ಮಹಾಪೂರವೇ ಹರಿದುಬರುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಹರ್ಯಾಣದ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರಿಂದ ಹಿಡಿದು ಮಾಜಿ ವಿಶ್ವಸುಂದರಿ ಪ್ರಿಯಾಂಕಾ ಚೋಪ್ರಾ ಮತ್ತು ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್‌ವರೆಗೆ ಗಣ್ಯರು ಮಾನುಷಿಯನ್ನು ಅಭಿನಂದಿಸಿದ್ದಾರೆ.

ಬಿಜೆಪಿ ನಾಯಕಿ ಹಾಗೂ ಹರ್ಯಾಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಕವಿತಾ ಜೈನ್ ಅವರು ಮಾನುಷಿಯನ್ನು ಅಭಿನಂದಿಸಿ ತನ್ನ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದು, ಮಾನುಷಿಯ ಗೆಲುವು ಹಲವಾರು ಯುವತಿಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದಿದ್ದಾರೆ. ಮಾನುಷಿಯನ್ನು ‘ಹರ್ಯಾಣದ ಪುತ್ರಿ’ ಎಂದು ಕರೆದಿರುವ ಅವರು, ಆಕೆ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೇ ಹೆಮ್ಮೆಯನ್ನುಂಟು ಮಾಡಿದ್ದಾರೆ ಎಂದು ಹೊಗಳಿದ್ದಾರೆ. ಕೇಂದ್ರದ ‘ಬೇಟಿ ಬಚಾವೋ,ಬೇಟಿ ಪಢಾವೋ’ ಆಂದೋಲನವನ್ನು ಪ್ರಸ್ತಾಪಿಸಿರುವ ಜೈನ್, ಈ ಅಭಿಯಾನವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ಮಾನುಷಿಯ ಗೆಲುವು ತೋರಿಸಿದೆ ಎಂದಿದ್ದಾರೆ.

 ಸೋನಿಪತ್‌ನ ಭಗತ್ ಫೂಲ್ ಸಿಂಗ್ ಸರಕಾರಿ ಮಹಿಳಾ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಮಾನುಷಿ ಅವರಿಗೆ ಚೀನಾದ ಬೀಜಿಂಗ್‌ನ ಸಾನ್ಯಾ ಸಿಟಿ ಅರೆನಾದಲ್ಲಿ ಶನಿವಾರ ರಾತ್ರಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2016ನೇ ಸಾಲಿನ ವಿಶ್ವಸುಂದರಿ ಸ್ಟೆಫಾನಿ ಡೆಲ್ ವ್ಯಾಲೆ ಅವರು ಈ ಸಾಲಿನ ವಿಶ್ವಸುಂದರಿ ಕಿರೀಟವನ್ನು ತೊಡಿಸಿದ್ದರು.

ಪ್ರಶ್ನೆ ಸುತ್ತಿನ ಸ್ಪರ್ಧೆಯಲ್ಲಿ ಮಾನುಷಿ ನೀಡಿದ್ದ ಉತ್ತರ ಅವರನ್ನು ವಿಶ್ವಸುಂದರಿ ಪಟ್ಟಕ್ಕೇರಿಸಿತ್ತು. ನಿಮ್ಮ ಅಭಿಪ್ರಾಯದಲ್ಲಿ ಅತ್ಯಂತ ಹೆಚ್ಚಿನ ವೇತನಕ್ಕೆ ಅರ್ಹವಾದ ವೃತ್ತಿ ಯಾವುದೆಂದು ಅವರಿಗೆ ಪ್ರಶ್ನಿಸಲಾಗಿತ್ತು. ‘‘ತಾಯಿ ಅತ್ಯಂತ ಹೆಚ್ಚಿನ ಗೌರವಕ್ಕೆ ಅರ್ಹಳಾಗಿದ್ದಾಳೆ. ಹಣವೇ ಯಾವಾಗಲೂ ಮುಖ್ಯವಲ್ಲ, ನಾವು ಯಾರಿಗಾದರೂ ತೋರಿಸುವ ಪ್ರೀತಿ ಮತ್ತು ಗೌರವವೂ ಮುಖ್ಯವಾಗಿರುತ್ತದೆ. ನನ್ನ ತಾಯಿ ನನಗೆ ದೊಡ್ಡ ಸ್ಫೂರ್ತಿಯಾಗಿದ್ದಾರೆ. ಅತ್ಯಂತ ಹೆಚ್ಚಿನ ವೇತನಕ್ಕೆ ತಾಯಿ ಹುದ್ದೆಯು ಅರ್ಹವಾಗಿದೆ’’ ಎಂದು ಮಾನುಷಿ ಉತ್ತರಿಸಿದ್ದರು.

ಮಾನುಷಿ ವಿಶ್ವಸುಂದರಿ ಪಟ್ಟಕ್ಕೇರಿದ ಆರನೇ ಭಾರತೀಯ ಚೆಲುವೆಯಾಗಿದ್ದಾರೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ವಿಶ್ವಸುಂದರಿಯಾದ 17 ವರ್ಷಗಳ ಸುದೀರ್ಘ ವಿರಾಮದ ಬಳಿಕ ಭಾರತಕ್ಕೆ ಈ ಅದೃಷ್ಟ ಮತ್ತೆ ಖುಲಾಯಿಸಿದೆ. ಪ್ರಿಯಾಂಕಾಗಿಂತ ಮುನ್ನ ಯುಕ್ತಾಮುಖಿ ಅವರು ಭಾರತಕ್ಕೆ ಈ ಗೌರವವನ್ನು ತಂದಿದ್ದರು.

ಡಯಾನಾ ಹೇಡನ್(1997), ಐಶ್ವರ್ಯಾ ರೈ(1994) ಮತ್ತು ರೀಟಾ ಫಾರಿಯಾ(1996) ಅವರು ವಿಶ್ವಸುಂದರಿ ಪಟ್ಟಕ್ಕೇರಿದ್ದ ಇತರ ಭಾರತೀಯ ಮಹಿಳೆ ಯರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X