Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂದಿನ ವಿವಾದಗಳ ಪರಿಹಾರಕ್ಕೆ ‘ಗೌತಮ...

ಇಂದಿನ ವಿವಾದಗಳ ಪರಿಹಾರಕ್ಕೆ ‘ಗೌತಮ ಬುದ್ಧ’ ಕಾದಂಬರಿ ಮಾರ್ಗ: ಪ್ರೊ.ಮಲ್ಲೇಪುರಂ

ವಾರ್ತಾಭಾರತಿವಾರ್ತಾಭಾರತಿ19 Nov 2017 10:42 PM IST
share
ಇಂದಿನ ವಿವಾದಗಳ ಪರಿಹಾರಕ್ಕೆ ‘ಗೌತಮ ಬುದ್ಧ’ ಕಾದಂಬರಿ ಮಾರ್ಗ: ಪ್ರೊ.ಮಲ್ಲೇಪುರಂ

ಬೆಂಗಳೂರು, ನ.19: ಇಂದಿನ ನೀರು, ಭೂಮಿ ವಿವಾದಗಳನ್ನು ಪರಿಹರಿಸಿಕೊಳ್ಳಲು ರುದ್ರಮೂರ್ತಿ ಶಾಸ್ತ್ರಿ ರಚಿಸಿರುವ ಗೌತಮ ಬುದ್ಧ ಕಾದಂಬರಿ ಪರಿಹಾರ ಮಾರ್ಗಗಳನ್ನು ಮುಂದಿಡಲಿದೆ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಹೇಳಿದ್ದಾರೆ.

 ರವಿವಾರ ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ಅಂಕಿತ ಪುಸ್ತಕ ಪ್ರಕಾಶನದಿಂದ ಆಯೋಜಿಸಿದ್ದ ಸು.ರುದ್ರಮೂರ್ತಿ ಶಾಸಿಯ ಅವರ ಕಾದಂಬರಿ ‘ಗೌತಮ ಬುದ್ಧ’, ಕೆ.ಮುಕುಂದನ್ ಅವರ ಪ್ರವಾಸ ಕಥನ ‘ಯುರೋಪ್ ಪ್ರವಾಸ’ ಹಾಗೂ ಅನು ಬೆಳ್ಳೆ ಅವರ ಕಾದಂಬರಿ ‘ಕುಡ್ಪಲ್ ಭೂತ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿ.ಪಿ.ರಾಜರತ್ನಂ ಹಾಗೂ ಇನ್ನಿತರರು ಬರೆದ ಬೆರಳೆಣಿಕೆಯ ಜೀವನ ಚರಿತ್ರೆಗಳಿವೆ. ರವೀಂದ್ರನಾಥ್ ಠಾಗೋರ್ ಅವರು ಬರೆದಿದ್ದ ನಾಟಕವನ್ನು ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡಕ್ಕೆ ಅನುವಾದ ಮಾಡಿ ಯಶೋಧರ ಎಂಬ ನಾಟಕ ಮಾಡಿದ್ದರು. ಕನ್ನಡದಲ್ಲಿ ಬುದ್ಧನ ಕುರಿತು ಜೀವನ ಚರಿತ್ರೆಗಳಿವೆ. ಇವುಗಳನ್ನು ಹೊರತುಪಡಿಸಿ ಕಾದಂಬರಿ ರೂಪದಲ್ಲಿ ಯಾವುದೂ ಬಂದಿರಲಿಲ್ಲ ಎಂದರು.

ರುದ್ರಮೂರ್ತಿ ಶಾಸಿಗಳು ಮೊಟ್ಟ ಮೊದಲ ಬಾರಿಗೆ ಕಾದಂಬರಿ ರೂಪದಲ್ಲಿ ಬುದ್ಧನನ್ನು ನಮ್ಮ ಮುಂದಿಟ್ಟಿದ್ದಾರೆ. ಮಹಾಯಾನ, ವಜ್ರಯಾನ ಹಾಗೂ ಹೀನಯಾನ ಹೀಗೆ 3 ಪಂಥಗಳಲ್ಲಿ ಬಂದ ಬುದ್ಧನ ಬಗೆಗಿನ ವಿಚಾರ ಸಂಗ್ರಹಿಸಿ ಈ ಕಾಲಕ್ಕೆ ಪ್ರಸ್ತುತವಿರುವ ಹಾಗೆ ಬರೆದಿದ್ದಾರೆ ಎಂದು ಮಲ್ಲೇಪುರಂ ಜಿ.ವೆಂಕಟೇಶ್ ಶ್ಲಾಸಿದರು. ಸಾಮಾಜಿಕ ಮತ್ತು ಸಾಂಸ್ಕೃತಿಕ ವೈಚಾರಿಕ ಆಕೃತಿಗಳನ್ನು ಸಾಹಿತ್ಯಕ ಆಕೃತಿಗಳಲ್ಲಿ ನಿಹಿತಗೊಳಿಸುವುದು ಸುಲಭವಲ್ಲ. ಆದರೆ ರುದ್ರಮೂರ್ತಿ ಶಾಸಿಗಳು ಈ ರೂಪಾಂತರ ಗೊಳಿಸಿರುವುದು ಬಹುಮುಖ್ಯ ಎಂದರು.

ವಿಮರ್ಶಕ ಡಾ.ಬೈರಮಂಗಲ ರಾಮೇಗೌಡ ಮಾತನಾಡಿ, ಇತ್ತೀಚೆಗೆ ಸೆಲ್ಫಿ ಹುಚ್ಚು ಪ್ರಾರಂಭವಾದ ನಂತರ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಸೆಲ್ಫಿಯೊಳಗೆ ಜನ ಬಂಧಿತರಾಗಿರುತ್ತಾರೆ. ಆ ಪ್ರದೇಶದ ಪ್ರಾಮುಖ್ಯತೆಯ ಬಗ್ಗೆ ಆಲೋಚನೆ ಮಾಡುವುದಿಲ್ಲ. ಹೀಗಾಗಿ ಹೊಸ ಅನುಭವದಿಂದಲೇ ಅವರೆಲ್ಲರೂ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆ.ಮುಕುಂದನ್ ಅವರ ಯುರೋಪ್ ಪ್ರವಾಸ ಇತರೆ ಪ್ರವಾಸ ಕಥನಕ್ಕಿಂತ ಭಿನ್ನವಾಗಿದೆ ಎಂದು ಹೇಳಿದರು.

ಅನು ಬೆಳ್ಳೆಯವರು ತಮ್ಮ ಕುಡ್ಪಲ್ ಭೂತ ಕಾದಂಬರಿ ಮೂಲಕ ಸ್ವಾರಸ್ಯಕರ ಕಥೆ ಹೇಳುವುದರ ಜತೆಗೆ ಅದರೊಳಗೆ ಸಂಶೋಧನೆಯನ್ನೂ ಅಳವಡಿಸಿರುವುದು ಅಭಿನಂದನಾರ್ಹ. ಪತ್ತೇದಾರಿ ಕಾದಂಬರಿಯೂ ಪರಿವರ್ತಿತ ರೂಪ ಪಡೆಯಬಹುದು ಎಂದು ಕುಡ್ಪಲ್ ಭೂತ ತೋರಿಸಿಕೊಡುತ್ತದೆ ಎಂದು ತಿಳಿಸಿದರು.

ಕನ್ನಡ ಪ್ರಾಧ್ಯಾಪಕರಾಗಿದ್ದ ಕಾರಣ ಸಾಹಿತ್ಯ ಪಾಠ ಮಾಡಿದವರು ಹಾಗೂ ಸಾಹಿತಿಗಳ ಒಡನಾಟದಲ್ಲಿದ್ದವರು ಕೆ.ಮುಕುಂದನ್. ಹೀಗಾಗಿಯೇ ಎಲ್ಲ ಸೂಕ್ಷ್ಮ ವಿಚಾರಗಳನ್ನು ತಮ್ಮ ಪ್ರವಾಸ ಕಥನದಲ್ಲಿ ದಾಖಲಿಸಿದ್ದಾರೆ ಎಂದು ರಾಮೇಗೌಡ ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X