Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಂಗಾ ಏತ ನೀರಾವರಿ ಯೋಜನೆ ವಿಸ್ತರಣೆಗೆ...

ತುಂಗಾ ಏತ ನೀರಾವರಿ ಯೋಜನೆ ವಿಸ್ತರಣೆಗೆ ಆಗ್ರಹಿಸಿ ಕುಂಸಿ ಗ್ರಾಮಸ್ಥರಿಂದ ನೀರಾವರಿ ಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ19 Nov 2017 11:08 PM IST
share
ತುಂಗಾ ಏತ ನೀರಾವರಿ ಯೋಜನೆ ವಿಸ್ತರಣೆಗೆ ಆಗ್ರಹಿಸಿ ಕುಂಸಿ ಗ್ರಾಮಸ್ಥರಿಂದ ನೀರಾವರಿ ಸಚಿವರಿಗೆ ಮನವಿ

ಶಿವಮೊಗ್ಗ, ನ. 19: ತುಂಗಾ ಏತ ನೀರಾವರಿ ಯೋಜನೆಯನ್ನು ಶಿವಮೊಗ್ಗ ತಾಲೂಕಿನ ಕುಂಸಿ ಹಾಗೂ ಹಾರ್ನಳ್ಳಿ ಹೋಬಳಿ ಭಾಗಕ್ಕೂ ವಿಸ್ತರಣೆ ಮಾಡಬೇಕು. ಈ ಭಾಗದ ಕೆರೆಗಳಿಗೆ ತುಂಗಾ ನದಿ ನೀರು ಹರಿಸಬೇಕು ಎಂದು ಆಗ್ರಹಿಸಿ ಕೆರೆ ನೀರು ತುಂಬಿಸುವ ಹೋರಾಟ ಸಮಿತಿಯು, ನೀರಾವರಿ ಸಚಿವ ಎಂ.ಬಿ.ಪಾಟೀಲ್‍ರವರಿಗೆ ಮನವಿ ಪತ್ರ ಅರ್ಪಿಸಿದೆ. 

ಶನಿವಾರ ದಾವಣಗೆರೆ ಜಿಲ್ಲೆ ಚೆನ್ನಗೆರೆಗೆ ಆಗಮಿಸಿದ್ದ ಸಚಿವರನ್ನು ಸಮಿತಿಯ ಮುಖಂಡರು ಭೇಟಿಯಾಗಿ ಈ ಮನವಿ ಪತ್ರ ಅರ್ಪಿಸಿದರು. ಈ ವೇಳೆ ಸಚಿವರು ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಜೊತೆಗೆ ಯೋಜನೆಯ ಬಗ್ಗೆ ಸಮಗ್ರ ಯೋಜನಾ ವರದಿ ಸಿದ್ದಪಡಿಸಿ ಸಲ್ಲಿಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈ ಸಂದರ್ಭದಲ್ಲಿ ವಿಧಾನಪರಿಷತ್ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ರವಿಕುಮಾರ್, ಸಮಿತಿಯ ಮುಖಂಡರಾದ ಕೆ.ಜೆ.ಸುರೇಶ್‍ಗೌಡ, ಪ್ರಭಾಕರ್ ಭಾರಂಗಿ, ಮಥುರಾ ಸೆಂಟ್ರಲ್ ಹೋಟೆಲ್ ರಾಜೇಂದ್ರ, ಗುಡದಯ್ಯ, ಮಲ್ಲೇಶಪ್ಪ, ಕುಮಾರ್, ವಿಜಯೇಂದ್ರಪ್ಪ ಸೇರಿದಂತೆ ಮೊದಲಾದವರಿದ್ದರು. 

ಬೇಡಿಕೆಯೇನು?: ಪ್ರಸ್ತುತ ತುಂಗಾ ಏತ ನೀರಾವರಿ ಯೋಜನೆಯಡಿ ಶಿವಮೊಗ್ಗ ನಗರದ ತುಂಗಾ ನದಿಯಿಂದ ಆಯನೂರಿನ ಗೌಡನ ಕೆರೆ ಸೇರಿದಂತೆ ಹಲವು ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಈ ಯೋಜನೆ ಪೂರ್ಣಗೊಂಡಿದ್ದು, ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ. 

ಆದರೆ ಕುಂಸಿ ಹಾಗೂ ಹಾರ್ನಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿ ಸರಿಸುಮಾರು 50 ಕ್ಕೂ ಅಧಿಕ ಕೆರೆಗಳಿವೆ. ಆದರೆ ಸಮರ್ಪಕವಾಗಿ ಮಳೆಯಾಗದಿರುವುದರಿಂದ ನಾಲ್ಕೈದು ವರ್ಷಗಳಿಂದ ಕೆರೆಗಳು ಭರ್ತಿಯಾಗಿಲ್ಲ. ಇದರಿಂದ ಜನ-ಜಾನುವಾರುಗಳು ಸ್ಥಿತಿ ಹೇಳತೀರದಾಗಿದೆ. ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ಇದರಿಂದ ರೈತರ ಸ್ಥಿತಿ ಶೋಚನೀಯವಾಗಿದೆ ಎಂದು ಸಮಿತಿ ಸಚಿವರ ಗಮನಕ್ಕೆ ತಂದಿದೆ. 

ಈ ಹಿನ್ನೆಲೆಯಲ್ಲಿ ಆಯನೂರಿನಿಂದ ಕೇವಲ 4 ಕಿ.ಮೀ. ದೂರದಲ್ಲಿರುವ ಕುಂಸಿ ಗ್ರಾಮದ ಚಿಕ್ಕಮರಸ ಕೆರೆಗೆ ಆಯನೂರಿನ ಗೌಡನ ಕೆರೆಗೆ ಹರಿಯಲಿರುವ ತುಂಗಾ ನದಿ ನೀರನ್ನು ಹರಿಸಬೇಕು. ಈ ಕೆರೆಗೆ ನೀರು ಹರಿದರೆ ಸುತ್ತುಮುತ್ತಲಿನ 50 ಕೆರೆಗಳಿಗೆ ನೀರು ಸ್ವಾಭಾವಿಕವಾಗಿ ಹರಿಯಲಿದೆ. ಇದರಿಂದ ಈ ಭಾಗದ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರಕಲಿದೆ ಎಂದು ಸಮಿತಿಯು ಸಚಿವರಿಗೆ ಮಾಹಿತಿ ನೀಡಿದೆ. 

ಮುಖಂಡರ ಅಹವಾಲು ಆಲಿಸಿದ ನಂತರ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, 'ಈ ಯೋಜನೆಯ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೆನೆ. ಈ ಕುರಿತಂತೆ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೆನೆ. ಕಾಲಮಿತಿಯಲ್ಲಿ ಯೋಜನೆಯ ಸಮಗ್ರ ವರದಿ ಸಿದ್ದಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತಿದ್ದು, ಈ ವರದಿ ಕೈ ಸೇರಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ' ಭರವಸೆ ನೀಡಿದ್ದಾರೆ. 

'ಸಿಎಂಗೂ ಮನವಿ ಅರ್ಪಣೆ' : ಮುಖಂಡ ಕೆ.ಜೆ.ಸುರೇಶ್‍ಗೌಡ
 'ಚೆನ್ನಗೆರೆ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಮನವಿ ಪತ್ರ ಅರ್ಪಿಸಿದ್ದೆವೆ. ತುಂಗಾ ಏತ ನೀರಾವರಿ ಯೋಜನೆ ವಿಸ್ತರಣೆಯಿಂದ ಕುಂಸಿ ಹಾಗೂ ಹಾರ್ನಳ್ಳಿ ಭಾಗದ ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ಜನ-ಜಾನುವಾರು, ಕೃಷಿಗೆ ಸಹಕಾರಿಯಾಗಲಿದೆ ಎಂಬುವುದನ್ನು ಅವರ ಗಮನಕ್ಕೆ ತಂದಿದ್ದೆವೆ. ಈ ಬಗ್ಗೆ ಜಲ ಸಂಪನ್ಮೂಲ ಸಚಿವರ ಜೊತೆ ಚರ್ಚೆ ನಡೆಸಿ, ಯೋಜನೆಯ ಅನುಷ್ಠಾನದ ಬಗ್ಗೆ ಗಮನಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ' ಎಂದು ಕೆರೆ ನೀರು ತುಂಬಿಸುವ ಹೋರಾಟ ಸಮಿತಿಯ ಮುಖಂಡ ಕೆ.ಜೆ.ಸುರೇಶ್‍ಗೌಡರವರು ಮಾಹಿತಿ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X