Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕವಿತೆಗೆಳು ಧ್ವನಿಸುರಳಿಗೆ ಬರುವಾಗ...

ಕವಿತೆಗೆಳು ಧ್ವನಿಸುರಳಿಗೆ ಬರುವಾಗ ಎಚ್ಚರಿಕೆ ಅಗತ್ಯ: ಸಿದ್ಧಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ19 Nov 2017 11:23 PM IST
share

ಬೆಂಗಳೂರು, ನ.29: ಕವಿತೆಯಲ್ಲಿರುವ ಆಶಯಗಳನ್ನು ಗಾಯಕ ಅರ್ಥ ಮಾಡಿಕೊಳ್ಳದೆ ಹಾಡಿದರೆ ಕವಿ ಹಾಗೂ ಕವಿತೆಯನ್ನು ವಂಚಿಸಿದಂತಾಗುತ್ತದೆ. ಹೀಗಾಗಿ ಕವಿತೆಗಳು ಧ್ವನಿಸುರಳಿಗೆ ಬರುವ ಮುನ್ನ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಿದೆ ಎಂದು ಹಿರಿಯ ಕವಿ ಡಾ.ಸಿದ್ಧಲಿಂಗಯ್ಯ ತಿಳಿಸಿದ್ದಾರೆ.
 ರವಿವಾರ ಸಂಗೀತ ಧಾಮ ನಗರದ ಮಲ್ಲೇಶ್ವರಂನಲ್ಲಿರುವ ಸುಕ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ರವರ ‘ಕರೆ ಬಳಗ’ ಧ್ವನಿಸುರಳಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕನ್ನಡ ಕವಿತೆಗಳ ಧ್ವನಿ ಸುರಳಿ ಪದ್ಧತಿಯನ್ನು ಹಿರಿಯ ಕವಿ ರಾಮಚಂದ್ರ ಶರ್ಮ ವಿರೋಧ ವ್ಯಕ್ತಪಡಿಸುತ್ತಿದ್ದರು. ಧ್ವನಿಸುರಳಿಯಲ್ಲಿ ಉತ್ತಮ ಕವಿತೆಯನ್ನು ಕೆಟ್ಟ ಗಾಯಕ ಹಾಡಿದರೆ ಅದರ ನಿಜಸ್ವರೂಪ ಹಾಳಾಗುವ ಸಾಧ್ಯತೆ ಇದೆ. ಸಾಧಾರಣ ಕವಿತೆಯನ್ನು ಉತ್ತಮ ಗಾಯಕ ಧ್ವನಿಸುರಳಿಯಲ್ಲಿ ಉತ್ತಮವಾಗಿಸಿ ಬಿಡುವ ಅಪಾಯವಿದೆ. ಆ ಬಗ್ಗೆ ಕವಿಗಳು ಎಚ್ಚರಿಕೆ ವಹಿಸಿಕೊಂಡೇ ಧ್ವನಿಸುರಳಿಗೆ ಅನುಮತಿ ನೀಡಬೇಕು ಎಂದು ಅವರು ತಿಳಿಸಿದರು.
ನಾಡಿನ ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯರವರ ಕವಿತೆಗಳು ಸಾಮಾಜಿಕ ಕಳಕಳಿಯ ಸಂವೇದನೆಯನ್ನು ಒಳಗೊಂಡಿವೆ. ಸಮಾಜದಲ್ಲಿನ ಏರುಪೇರುಗಳನ್ನು ತಿದ್ದುವಲ್ಲಿ, ಸಮಾನತೆಯನ್ನು ಸೃಷ್ಟಿಸುವಲ್ಲಿ ಮತ್ತು ಬಂಡಾಯ ಮನೋಭಾವನೆಯನ್ನು ವ್ಯಕ್ತಪಡಿಸುವ ಅವರ ಕವಿತೆಗಳ ಆಶಯವು ಯುವ ತಲೆಮಾರಿಗೆ ಮಾದರಿಯಾದುದ್ದಾಗಿದೆ ಎಂದು ಅವರು ಹೇಳಿದರು.

 ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್ ಮಾತನಾಡಿ, ಕನ್ನಡ ಭಾಷೆ ಮತ್ತು ಕನ್ನಡದ ಅಭಿವೃದ್ಧಿ ಹಾಗೂ ಆರೋಗ್ಯಕರ ಸಮಾಜಕ್ಕೆ ಪ್ರೊ.ಸಿದ್ಧರಾಮಯ್ಯ ಅಪರಿಮಿತ ಕೊಡುಗೆ ನೀಡಿದ್ದಾರೆ. ಅವರ ಕವಿತೆಗಳಲ್ಲಿ ವೈಚಾರಿಕತೆ, ವ್ಯಕ್ತಿತ್ವದ ಪಾವಿತ್ರತೆ ಕಾಯ್ದುಕೊಂಡಿದ್ದಾರೆ. ಮಹತ್ವದ ವಚನಕಾರರ ಅಂತರಂಗಗಳನ್ನು ಜನತೆಗಾಗಿ ತೆರೆದಿಟ್ಟಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಸಿದ್ಧರಾಮಯ್ಯರವರ ಭಾವಗೀತೆಗಳನ್ನು ಗಾಯಕಿ ಅರ್ಚನಾ ಉಡುಪ ಹಾಡಿದರು. ವೇದಿಕೆಯಲ್ಲಿ ಕುವೆಂಪು ಭಾಷಾ ಪ್ರಾಧಿಕಾರದ ಅಧ್ಯಕ್ಷ ಡಾ.ಮರುಳಸಿದ್ದಪ್ಪ, ಗಾಯಕ ಮುದ್ದುಕೃಷ್ಣ, ನಿರ್ದೇಶಕ ನಂಜುಂಡೇಗೌಡ, ಕವಿತೆಗಳ ಸಂಗೀತ ಸಂಯೋಜಕ ಮೃತ್ಯುಂಜಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X