Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದ್ಮಾವತಿಗೆ ದಾವೂದ್ ಬಂಡವಾಳ: ಕರ್ನಿ...

ಪದ್ಮಾವತಿಗೆ ದಾವೂದ್ ಬಂಡವಾಳ: ಕರ್ನಿ ಸೇನಾ ಆರೋಪ

ವಾರ್ತಾಭಾರತಿವಾರ್ತಾಭಾರತಿ19 Nov 2017 11:23 PM IST
share
ಪದ್ಮಾವತಿಗೆ ದಾವೂದ್ ಬಂಡವಾಳ: ಕರ್ನಿ ಸೇನಾ ಆರೋಪ

ಜೈಪುರ, ನ.19: ಚಿತ್ರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯನ್ನು ಒರ್ವ ಸಾಂಸ್ಕೃತಿಕ ಗೂಂಡಾ, ತಂತ್ರಗಾರ ಮತ್ತು ನಿಯತ ಅಪರಾಧಿ ಎಂದು ಕರೆದಿರುವ ಶ್ರೀ ರಜಪೂತ ಕರ್ನಿಸೇನಾ ಪದ್ಮಾವತಿ ಸಿನಿಮಾಕ್ಕೆ ನಿಷೇಧ ಹೇರುವಂತೆ ಆಗ್ರಹಿಸಿದ್ದು ಈ ಚಿತ್ರಕ್ಕೆ ಭೂಗತ ದೊರೆ ದಾವೂದ್ ಇಬ್ರಾಹಿಂ ಬಂಡವಾಳ ಹಾಕಿದ್ದಾನೆ ಎಂದು ರವಿವಾರ ಆರೋಪಿಸಿದೆ.

ಪದ್ಮಾವತಿ ಸಿನಿಮಾದ ಬಿಡುಗಡೆಯ ದಿನವನ್ನು ಮುಂದೂಡಿರುವುದು ಬನ್ಸಾಲಿಯ ನಾಟಕದ ಭಾಗವೇ ಆಗಿದೆ ಎಂದು ಕರ್ನಿ ಸೇನಾದ ಲೋಕೇಂದ್ರ ಸಿಂಗ್ ಕಲ್ವಿ ಆರೋಪಿಸಿದ್ದಾರೆ. ಚಿತ್ರದ ಬಡಿಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ನಮಗೆ ತಿಳಿಯಿತು. ಹೊಸ ದಿನಾಂಕ ಘೋಷಣೆಯಾದ ಕೂಡಲೇ ನಾವು ಬೀದಿಗಿಳಿಯುತ್ತೇವೆ. ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆಯಾಗಲು ಬಿಡುವುದಿಲ್ಲ. ಈ ಚಿತ್ರದ ಮೇಲೆ ಸಂಪೂರ್ಣ ನಿಷೇಧ ಹೇರಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದವರು ತಿಳಿಸಿದರು.

ಪದ್ಮಾವತಿ ಚಿತ್ರಕ್ಕೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಣ ಹೂಡಿದ್ದಾನೆ ಎಂದು ಆರೋಪಿಸಿದ ಕಲ್ವಿ, ನನಗೆ ಅಂತಾರಾಷ್ಟ್ರೀಯ ಸಂಖ್ಯೆಯಿಂದ ಮೂರು ಬೆದರಿಕೆ ಕರೆಗಳು ಬಂದಿವೆ. ಅದರಲ್ಲಿ ಒಂದು ಕರಾಚಿಯಿಂದ ಬಂದಿದ್ದು ದಾವೂದ್‌ನ ಹಣ ಈ ಚಿತ್ರಕ್ಕೆ ಬಿದ್ದಿರುವುದನ್ನು ಸೂಚಿಸುತ್ತದೆ. ಇಲ್ಲದಿದ್ದರೆ ಕರಾಚಿಯಲ್ಲಿ ಕುಳಿತಿರುವ ವ್ಯಕ್ತಿಗೆ ನನ್ನನ್ನು ಕೊಲ್ಲಬೇಕೆಂಬ ಅಗತ್ಯವಾದರೂ ಏನು? ಎಂದು ಕಲ್ವಿ ಪ್ರಶ್ನಿಸಿದ್ದಾರೆ.

 ಡಿಸೆಂಬರ್ ಒಂದರಂದು ಭಾರತ್ ಬಂದ್ ಮಾಡುವ ನಿರ್ಧಾರದ ಬಗ್ಗೆಯೂ ಕರ್ನಿ ಸೇನೆ ಸದ್ಯ ಆ ಯೋಚನೆ ಇಲ್ಲ ಎಂದಿದೆ.

ರವಿವಾರದಂದು ಚಿತ್ರದ ನಿರ್ಮಾಪಕರು ಮತ್ತು ಹಂಚಿಕೆದಾರರಾಗಿರುವ ವಯೋಕಾಂ18ನ ವಕ್ತಾರರು ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದುಡಲಾಗಿರುವುದಾಗಿ ತಿಳಿಸಿದ್ದರು.

ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ರಜಪೂತ ಸಮಾಜದ ಮಹಿಳೆಯರು ತಲೆಗೆ ಮುಂಡಾಸು ಬಿಗಿದು ಕೈಯಲ್ಲಿ ಖಡ್ಗವನ್ನು ಹಿಡಿದು ಪ್ರತಿಭಟನೆಗಳನ್ನು ನಡೆಸಿದರು. ಈ ವೇಳೆ ಮಾತನಾಡಿದ ರಾಷ್ಟ್ರೀಯ ರಜಪೂತ್ ಕರ್ನಿ ಸೇನಾದ ಮಹಿಳಾ ಘಟಕದ ಸದಸ್ಯರು ಸೋಮವಾರದಿಂದ ಸೇನೆಯು ಪದ್ಮಾವತಿ ಸಿನಿಮಾಕ್ಕೆ ನಿಷೇಧ ಹೇರುವ ಪರವಾಗಿ ಸಹಿ ಸಂಗ್ರಹ ಅಭಿಯಾನವನ್ನು ನಡೆಸುವುದಾಗಿ ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನೀನಾ ಚಪೋಲ್, ರಾಣಿ ಪದ್ಮಾವತಿ ಜೊಹರ್ ಮೂಲಕ ತನ್ನ ಪ್ರಾಣವನ್ನೇ ಅರ್ಪಿಸುವ ಮೂಲಕ ರಜಪೂತ ಮತ್ತು ಹಿಂದು ಮಹಿಳೆಯ ಆತ್ಮಸಮ್ಮಾನಕ್ಕೆ ಸಾಕ್ಷಿಯಾಗಿದ್ದಳು ಎಂದು ತಿಳಿಸಿದರು.

ರಜಪೂತ ಮಹಿಳೆಯರು ಪುರುಷರಷ್ಟೇ ಸಮರ್ಥರಾಗಿದ್ದು ಅಗತ್ಯಬಿದ್ದಲ್ಲಿ ಕತ್ತಿಯನ್ನೆತ್ತಲೂ ಹಿಂಜರಿಯುವುದಿಲ್ಲ ಎಂದು ಹೇಳಿದ ಕರ್ನಿ ಸೇನೆಯ ಜಿಲ್ಲಾಧ್ಯಕ್ಷ ತಪಸ್ಯ ನರುಕಾ, ನಾವು ಯಾವ ಮಾತುಕತೆಗೂ ಸಿದ್ಧವಿಲ್ಲ, ಚಿತ್ರಕ್ಕೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X