Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌದಿಅರೇಬಿಯ: ಸಂಕಷ್ಟದಲ್ಲಿ ವಾಮಂಜೂರು...

ಸೌದಿಅರೇಬಿಯ: ಸಂಕಷ್ಟದಲ್ಲಿ ವಾಮಂಜೂರು ಮಹಿಳೆ, ನೆರವಿನ ನಿರೀಕ್ಷೆಯಲ್ಲಿ ಬಡಕುಟುಂಬ

ಸೌದಿಗೆ ತೆರಳಿ 2 ವರ್ಷ ಕಳೆದಿದೆ, ಸಂಪರ್ಕದಲ್ಲಿಲ್ಲ: ಬಾಲಪ್ಪ

ವಾರ್ತಾಭಾರತಿವಾರ್ತಾಭಾರತಿ20 Nov 2017 10:47 PM IST
share
ಸೌದಿಅರೇಬಿಯ: ಸಂಕಷ್ಟದಲ್ಲಿ ವಾಮಂಜೂರು ಮಹಿಳೆ, ನೆರವಿನ ನಿರೀಕ್ಷೆಯಲ್ಲಿ ಬಡಕುಟುಂಬ

ಮಂಗಳೂರು, ನ. 20: ಅನಾರೋಗ್ಯಪೀಡಿತ ಪತಿ ಮತ್ತು ಮಗನ ವಿದ್ಯಾಭ್ಯಾಸದ ಜವಾಬ್ಧಾರಿಯನ್ನು ಹೊರಲು ವಿದೇಶ ಉದ್ಯೋಗಕ್ಕೆ ತೆರಳಿದ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿರುವ ಘಟನೆಯೊಂದು ಮಂಗಳೂರು ಸಮೀಪದ ವಾಮಂಜೂರಿನಿಂದ ವರದಿಯಾಗಿದೆ.

ವಾಮಂಜೂರಿನ ಕೆಳರೈ ಕೋಡಿ ಎರಡನೇ ಬ್ಲಾಕಿನ ನಿವಾಸಿ ಬಾಲಪ್ಪ ಬಾಲಕೃಷ್ಣ (55) ಎಂಬವರ ಪತ್ನಿ ವಿಜಯಾ (43) ಎಂಬವರೇ ಸೌದಿ ಅರೇಬಿಯದಲ್ಲಿ ಸಂಕಷ್ಟಕ್ಕೀಡಾ ಗಿರುವ ಮಹಿಳೆ. ಹಲವು ತಿಂಗಳಿನಿಂದ ಸರಿಯಾಗಿ ಫೋನ್ ಸಂಪರ್ಕಕ್ಕೆ ಸಿಗದೆ, ಊರಿಗೆ ಮರಳಲು ಸಾಧ್ಯವಾಗದೆ ಸೌದಿ ಅರೇಬಿಯದ ದಮಾಮ್ ಎಂಬ ನಗರದಲ್ಲಿ ಗೃಹ ಬಂಧನದಲ್ಲಿರುವ ಬಗ್ಗೆ ವರದಿಯಾಗಿದೆ. ವಿಜಯಾ ಅವರ ಬಿಡುಗಡೆಯ ನಿರೀಕ್ಷೆಯಲ್ಲಿ ವೃದ್ಧ ಪತಿ ಮತ್ತು ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿರುವ ಮಗ ಜಗಜೀವನ್ ದಿನ ದೂಡುತ್ತಿದ್ದಾರೆ. ತೀರಾ ಬಡಕುಟುಂಬಕ್ಕೆ ವಿಜಯಾ ಅವರೇ ಆಧಾರಸ್ತಂಭವಾಗಿದ್ದರು.

2015ರ ಜುಲೈ 15ರಂದು ಬಜ್ಪೆಯ ಮಹಿಳೆಯೋರ್ವರ ಪರಿಚಯದ ಮೂಲಕ ಸೌದಿ ಅರೇಬಿಯಕ್ಕೆ ಮನೆಗೆಲಸದ ಉದ್ಯೋಗಕ್ಕೆಂದು  ವಿಜಯಾ ತೆರಳಿದ್ದರು. ಕೆಲವು ತಿಂಗಳು ಮಾತ್ರ ಫೋನ್ ಸಂಪರ್ಕದಲ್ಲಿದ್ದ ವಿಜಯಾ ಅನಂತರದ ದಿನಗಳಲ್ಲಿ ಅಪರೂಪಕ್ಕೊಮ್ಮೆ ಮಾತ್ರ ಸಂಪರ್ಕಕ್ಕೆ ಸಿಗುತ್ತಿದ್ದರು. ಯಾವಾಗಲಾದರೊಮ್ಮೆ ಹಣ ಕಳುಹಿಸಿಕೊಡುತ್ತಿದ್ದರು. ಆದರೆ ಎರಡು ವರ್ಷಗಳ ಬಳಿಕ ಪತಿಗೆ ವಿಪರೀತ ಅನಾರೋಗ್ಯದ ಕಾರಣ ಊರಿಗೆ ಮರಳಲು ಬಯಸಿದ ವಿಜಯಾರಿಗೆ ಸೌದಿ ಪ್ರಾಯೋಜಕನು ಸ್ಪಂದಿಸಲೇ ಇಲ್ಲ. ವಿಶೇಷವೆಂದರೆ ಇದುವರೆಗೆ ವಿಜಯಾ ಅವರಿಗೆ ಒಂದು ಮೊಬೈಲ್ ಸೌಲಭ್ಯವನ್ನೂ ಪ್ರಾಯೋಜಕನು ಒದಗಿಸಿಲ್ಲ. ಹೀಗಾಗಿ ವಿಜಯಾ ಅವರ ಪರಿಸ್ಥಿತಿ ತಿಳಿಯಲು ಅನಕ್ಷರಸ್ಥ ಬಾಲಕೃಷ್ಣ ಅವರಿಗೆ ಸಾಧ್ಯವಾಗುತ್ತಿರಲಿಲ್ಲ.

ಬಾಲಕೃಷ್ಣ ಅವರು ಊರಿನ ಪರಿಚಯದವರಿಗೆ ಈ ವಿಚಾರವನ್ನು ತಿಳಿಸಿದ್ದರು. ಮಾಹಿತಿ ಪಡೆದ ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಅವರು ಸೌದಿ ಅರೇಬಿಯ ದಲ್ಲಿರುವ ಕರಾವಳಿಯ ಯುವಕರಿಗೆ ಮಾಹಿತಿ ನೀಡಿದ್ದು, ಅನಿವಾಸಿ ಭಾರತೀಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಇಂಡಿಯನ್ ಸೋಶಿಯಲ್ ಫೋರಮ್ ವಿಜಯಾ ಪ್ರಕರಣವನ್ನು ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿರುವುದಾಗಿ ತಿಳಿದುಬಂದಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ರಿಯಾಝ್ ಅವರು ಇಂಡಿಯನ್ ಸೋಶಿಯಲ್ ಫೋರಮ್ ಗೆ ತಲುಪಿಸಿದ್ದು ಶೀಘ್ರದಲ್ಲೇ ವಿಜಯಾ ಅವರು ತವರಿಗೆ ಮರಳುವಂತಾಗಬಹುದು ಎಂಬ ವಿಶ್ವಾಸವನ್ನು ಇಂಡಿಯನ್ ಸೋಶಿಯಲ್ ಫೋರಮ್ ವ್ಯಕ್ತಪಡಿಸಿದೆ.

ಸೌದಿಗೆ ತೆರಳಿ 2 ವರ್ಷ ಕಳೆದಿದೆ; ಸಂಪರ್ಕದಲ್ಲಿಲ್ಲ: ಬಾಲಪ್ಪ

 ನನ್ನ ಪತ್ನಿ ವಿಜಯಾ ಅವರು ಮನೆಕೆಲಸಕ್ಕೆಂದು ಸೌದಿಗೆ ತೆರಳಿ 2 ವರ್ಷ 4 ತಿಂಗಳು ಕಳೆದಿವೆ. ಸೌದಿಗೆ ಹೋದಂದಿನಿಂದ ಕೇವಲ ನಾಲ್ಕು ಬಾರಿ ಮಾತ್ರ ಕರೆ ಮಾಡಿ ವಿಚಾರಿಸಿದ್ದಾರೆ. ಇದೀಗ ಅವರು ಮನೆಯವರ ಸಂಪರ್ಕದಲ್ಲಿಲ್ಲ ಎಂದು ಸೌದಿಯಲ್ಲಿ ಸಂಕಷ್ಟದಲ್ಲಿರುವ ವಿಜಯಾ ಅವರ ಪತಿ ಬಾಲಪ್ಪ ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ.

ತೀರಾ ಬಡತನ ಹಾಗೂ ನನ್ನ ಆರೋಗ್ಯ ಸ್ಥಿತಿ ಸರಿ ಇಲ್ಲದಿರುವುದನ್ನು ಮನಗಂಡು ಮನೆ ಕೆಲಸಕ್ಕೆಂದು ವಿಜಯಾ  ಸೌದಿಗೆ ತೆರಳಿದ್ದಾಳೆ. ಆದರೆ, ಅವಳು ಹೇಗಿದ್ದಾಳೆ, ಯಾವ ಸ್ಥಿತಿಯಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಕೆಲವು ಯುವಕರನ್ನು ಸಂಪರ್ಕಿಸಿದಾಗ ಅವರು ನನ್ನ ನೆರವಿಗೆ ಬಂದಿದ್ದು, ಊರಿಗೆ ಮರಳಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X