Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನಾನು ರೊಹಿಂಗ್ಯರನ್ನು...

“ನಾನು ರೊಹಿಂಗ್ಯರನ್ನು ಸ್ವಾಗತಿಸುತ್ತೇನೆ”: ದೇಶಾದ್ಯಂತ 6,60,000 ಜನರ ಒಕ್ಕೊರಲ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ20 Nov 2017 10:53 PM IST
share
“ನಾನು ರೊಹಿಂಗ್ಯರನ್ನು ಸ್ವಾಗತಿಸುತ್ತೇನೆ”: ದೇಶಾದ್ಯಂತ 6,60,000 ಜನರ ಒಕ್ಕೊರಲ ಹೇಳಿಕೆ

ಹೊಸದಿಲ್ಲಿ, ನ. 20: ಭಾರತದಲ್ಲಿ ಆಶ್ರಯ ಬಯಸಿದವರು ಹಾಗೂ ರೊಹಿಂಗ್ಯಾ ವಲಸಿಗರನ್ನು ಬೆಂಬಲಿಸುವ ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಅಭಿಯಾನವನ್ನು ಭಾರತದಾದ್ಯಂತದ ಸುಮಾರು 660,000 ಜನರು ಬೆಂಬಲಿಸಿದ್ದಾರೆ ಹಾಗೂ ಭಾರತದಲ್ಲಿರುವ ಅಂದಾಜು 40,000 ರೊಹಿಂಗ್ಯಾ ಜನರನ್ನು ಸಾಮೂಹಿಕವಾಗಿ ಗಡಿಪಾರು ಮಾಡುವ ಪ್ರಸ್ತಾಪವನ್ನು ರದ್ದುಗೊಳಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

 ಆ್ಯಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಹೊಸದಿಲ್ಲಿ, ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಪುಣೆ ಹಾಗೂ ಮುಂಬೈಯಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಪಾಲ್ಗೊಂಡರು ಹಾಗೂ ರೊಹಿಂಗ್ಯಾ ಜನರನ್ನು ಬಲವಂತವಾಗಿ ಮ್ಯಾನ್ಮಾರ್‌ಗೆ ಹಿಂದೆ ಕಳುಹಿಸಬೇಡಿ ಎಂದು ಆಗ್ರಹಿಸಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಳಾಸಕ್ಕೆ ಸಹಿ ಮಾಡಿದ ಪೋಸ್ಟ್ ಕಾರ್ಡ್ ಕಳುಹಿಸಿದರು.

     ರೊಹಿಂಗ್ಯ ಜನರು ಮ್ಯಾನ್ಮಾರ್‌ನಲ್ಲಿ ಕಿರುಕುಳಕ್ಕೆ ಒಳಗಾಗಿ ನಿರಂತರ ಪಲಾಯನ ಮಾಡುತ್ತಿದ್ದಾರೆ. ಜನಾಂಗೀಯ ಶುದ್ದೀಕರಣದ ಹಿನ್ನೆಲೆಯಲ್ಲಿ ದೌರ್ಜನ್ಯ ಎದುರಿಸಿ ವಲಸೆ ಬಂದಿರುವ ರೊಹಿಂಗ್ಯ ಜನರನ್ನು ಬಲವಂತವಾಗಿ ಮ್ಯಾನ್ಮಾರ್‌ಗೆ ಗಡಿ ಪಾರು ಮಾಡುವುದು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಭಾರತ ತನ್ನ ಭಾದ್ಯತೆ ಉಲ್ಲಂಘಿಸಿದಂತಾಗುತ್ತದೆ. ಮಾತ್ರವಲ್ಲ, ಕಿರುಕುಳದಿಂದ ತಪ್ಪಿಸಿಕೊಂಡು ಪಲಾಯನ ಮಾಡಿದವರಿಗೆ ಬೆಂಬಲ ನೀಡುವ ಭಾರತದ ಚರಿತ್ರೆಗೆ ಕಳಂಕ ತಂದಂತಾಗುತ್ತದೆ ಎಂದು ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಕಾರ್ಯಕಾರಿ ನಿರ್ದೇಶಕ ಆಕಾರ್ ಪಟೇಲ್ ಹೇಳಿದ್ದಾರೆ.

  ವಲಸಿಗರನ್ನು ರಕ್ಷಿಸುತ್ತೇವೆ ಎಂದು ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ತನ್ನ ನಿಲುವನ್ನು ಅಭಿವ್ಯಕ್ತಿಸಿದೆ. ಅಲ್ಲದೆ ಬಲವಂತದ ವಾಪಸಾತಿ ನಿಯಮವನ್ನು ದುರ್ಬಲಗೊಳಿಸುವುದನ್ನು ತಡೆಹಿಡಿಯುವಂತೆ ಇತರ ದೇಶಗಳನ್ನು ಆಗ್ರಹಿಸಿದೆ. ಆದರೆ, ಇಲ್ಲಿ ಸರಕಾರ ರೊಹಿಂಗ್ಯ ಜನರನ್ನು ಬಲವಂತವಾಗಿ ಮ್ಯಾನ್ಮಾರ್‌ಗೆ ಕಳುಹಿಸಲು ಕಠಿಣ ಕ್ರಮ ತೆಗೆದುಕೊಂಡಿದೆ ಎಂದು ಆಕಾರ್ ಪಟೇಲ್ ಹೇಳಿದರು.

ರೊಹಿಂಗ್ಯ ವಲಸಿಗರ ಬಗ್ಗೆ ಭಾರತ ಯಾಕೆ ಕಾಳಜಿ ವಹಿಸಬೇಕು ಎಂಬ ಬಗ್ಗೆ ಮಾತನಾಡಿದ ಇತಿಹಾಸಕಾರ ಹಾಗೂ ಲೇಖಕ ರಾಮಚಂದ್ರ ಗುಹಾ, ವಿವಿಧ ಧರ್ಮಗಳ ವಲಸಿಗರಿಗೆ ಆಶ್ರಯ ನೀಡಿದ ಪರಂಪರೆ ಭಾರತಕ್ಕಿದೆ. ನಮ್ಮ ಸಂಪ್ರದಾಯ ರೊಹಿಂಗ್ಯಾ ಜನರಿಗೆ ನೆರವು ನೀಡುವುದನ್ನು ಒತ್ತಾಯಿಸುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X