Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಎಸ್ ಹುದ್ದೆ: ಶಿಕ್ಷಣ ಸಚಿವನ ಪುತ್ರಿ,...

ಐಎಎಸ್ ಹುದ್ದೆ: ಶಿಕ್ಷಣ ಸಚಿವನ ಪುತ್ರಿ, ಉಪಸ್ಪೀಕರ್ ಸಂಬಂಧಿಯ ಹೆಸರು ಶಿಫಾರಸುಗೊಳಿಸಿದ ಖಟ್ಟರ್ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 Nov 2017 6:31 PM IST
share
ಐಎಎಸ್ ಹುದ್ದೆ: ಶಿಕ್ಷಣ ಸಚಿವನ ಪುತ್ರಿ, ಉಪಸ್ಪೀಕರ್ ಸಂಬಂಧಿಯ ಹೆಸರು ಶಿಫಾರಸುಗೊಳಿಸಿದ ಖಟ್ಟರ್ ಸರಕಾರ

ಚಂಡೀಗಢ, ನ.21 : ಹರ್ಯಾಣ ರಾಜ್ಯದ ಹೊರಗಿನವರಿಗೆ ಮೀಸಲಾಗಿರುವ ಒಂದು ಐಎಎಸ್ ಅಧಿಕಾರಿಯ ಹುದ್ದೆಗಾಗಿ ರಾಜ್ಯದ ಇಬ್ಬರು ಪ್ರಮುಖ ಬಿಜೆಪಿ ನಾಯಕರುಗಳ ಸಂಬಂಧಿಕರ ಹೆಸರುಗಳನ್ನು ಅಲ್ಲಿನ ಮನೋಹರಲಾಲ್ ಖಟ್ಟರ್ ಸರಕಾರ ಅಂತಿಮಗೊಳಿಸಿದೆ. ಅವರಲ್ಲಿ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮ ಅವರ ಪುತ್ರಿ 42 ವರ್ಷದ ಡಾ ಆಶಾ ಶರ್ಮ ಹಾಗೂ ವಿಧಾನಸಭೆಯ ಉಪಸ್ಪೀಕರ್ ಸಂತೋಷ್ ಯಾದವ್ ಅವರ ಸೋದರ, 56 ವರ್ಷದ ಲಾಜಪತ್ ರೈ ಸೇರಿದ್ದಾರೆ. ಇವರ ಹೆಸರುಗಳು ಈ ಹುದ್ದೆಗಾಗಿ ಅಂತಿಮಗೊಳಿಸಲ್ಪಟ್ಟ ಐದು ಮಂದಿಯ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಆಕ್ರಮಿಸಿವೆ. ಈ ಹೆಸರುಗಳನ್ನು ರಾಜ್ಯ ಸರಕಾರ ಕೇಂದ್ರ ಲೋಕ ಸೇವಾ ಆಯೋಗಕ್ಕೆ ಶಿಫಾರಸು ಮಾಡಿದೆ.

ಎಂಬಿಬಿಎಸ್ ಪದವೀಧರೆಯಾಗಿರುವ ಡಾ ಶರ್ಮಾ ಅವರು ಹರ್ಯಾಣ ರೋಡ್‌ವೇಸ್ ನಲ್ಲಿ ಜನರಲ್ ಮ್ಯಾನೇಜರ್ ಆಗಿದ್ದಾರೆ. ಈ ಪಟ್ಟಿಯಲ್ಲಿರುವ ಇತರರೆಂದರೆ ದಂತ ಆರೋಗ್ಯ ಸೇವೆಗಳ ನಿರ್ದೇಶಕರಾಗಿರುವ ಪರ್ವೀನ್ ಸೇಠಿ, ಹರ್ಯಾಣ ರಾಜ ಭವನ್ ಆರೋಗ್ಯ ಸೇವೆಗಳ ಉಸ್ತುವಾರಿ ಡಾ ರಾಕೇಶ್ ತಲ್ವಾರ್ ಹಾಗೂ ಜಿಲ್ಲಾ ಯೋಜನಾಧಿಕಾರಿ ವಿಜೇಂದರ್ ಸಿಂಗ್.

ಕಳೆದ ವರ್ಷ ಕೂಡ ಡಾ ಶರ್ಮಾ ಅವರ ಹೆಸರನ್ನು ಮೊದಲಾಗಿ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದರೂ ನಿಗದಿತ ಅವಧಿಯಾದ ಡಿಸೆಂಬರ್ 31ರೊಳಗೆ ಸೂಕ್ತ ಮಾಹಿತಿ ನೀಡಲಾಗಿಲ್ಲವೆಂಬ ಆಧಾರದಲ್ಲಿ ಲೋಕಸೇವಾ ಆಯೋಗವು ಈ ಪ್ರಕ್ರಿಯೆಯನ್ನು ರದ್ದುಗೊಳಿಸಿತ್ತು.

ಈ ಐಎಎಸ್ ಅಧಿಕಾರಿಯ ಹುದ್ದೆಗೆ ಮುಖ್ಯಮಂತ್ರಿ ಖಟ್ಟರ್ ಅವರು ಮುಖ್ಯ ಕಾರ್ಯದರ್ಶಿ ಡಿ ಎಸ್ ಧೇಸಿ ಅವರ ನೇತೃತ್ವದ ಸಮಿತಿಯನ್ನು ರಚಿಸಿದ್ದರು. ಅಧಿಕಾರಿಗಳ ಕಳೆದ ಐದು ವರ್ಷಗಳ ಕಾರ್ಯನಿರ್ವಹಣೆಯ ಆಧಾರದಲ್ಲಿ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತೆಂದು ಹೇಳಲಾಗಿದೆ. ಆದರೆ ಅತ್ಯುತ್ತಮ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಾರ್ಷಿಕ ಗೌಪ್ಯತಾ ವರದಿಗಳಲ್ಲಿ ಇದ್ದ ಕನಿಷ್ಠ ಮೂವರು ಅಧಿಕಾರಿಗಳ ಹೆಸರುಗಳನ್ನು ಅವಗಣಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಈ ಆರೋಪದ ಬಗ್ಗೆ ರಾಜ್ಯ ಸರಕಾರ ಇನ್ನೂ ಪ್ರತಿಕ್ರಿಯಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X