Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸರು ಕರಸೇವಕರ ಮೇಲೆ ಗುಂಡು...

ಪೊಲೀಸರು ಕರಸೇವಕರ ಮೇಲೆ ಗುಂಡು ಹಾರಿಸಿದ್ದು ಸರಿ: ಮುಲಾಯಂ ಸಿಂಗ್ ಯಾದವ್

ವಾರ್ತಾಭಾರತಿವಾರ್ತಾಭಾರತಿ22 Nov 2017 11:22 PM IST
share
ಪೊಲೀಸರು ಕರಸೇವಕರ ಮೇಲೆ ಗುಂಡು ಹಾರಿಸಿದ್ದು ಸರಿ: ಮುಲಾಯಂ ಸಿಂಗ್ ಯಾದವ್

ಲಕ್ನೊ. ನ.22: 1990ರಲ್ಲಿ ಅಯೋಧ್ಯೆಯತ್ತ ಧಾವಿಸುತ್ತಿದ್ದ ಕರ ಸೇವಕರ ಮೇಲೆ ಗುಂಡು ಹಾರಿಸುವಂತೆ ಪೊಲೀಸರಿಗೆ ತಾನು ನೀಡಿದ ಸೂಚನೆಯನ್ನು ಸಮರ್ಥಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ದೇಶದ ಏಕತೆಗಾಗಿ ಇನ್ನಷ್ಟು ಜನರನ್ನು ಹತ್ಯೆ ಮಾಡಬೇಕಾಗಿದ್ದರೂ ಪೊಲೀಸರು ಸಿದ್ಧವಾಗಿದ್ದರು ಎಂದು ಹೇಳಿದ್ದಾರೆ.

ಪಕ್ಷದ ಮುಖ್ಯ ಕಚೇರಿಯಲ್ಲಿ ತನ್ನ 79ನೇ ಜನ್ಮದಿನಾಚರಣೆಯನ್ನು ವೈಭವಯುತವಾಗಿ ಆಚರಿಸಿಕೊಂಡ ಮುಲಾಯಂ ಆ ಮೂಲಕ ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ ಎಂಬ ಸಂದೇಶವನ್ನು ರವಾನಿಸಿದರು. 1990ರ ಅಕ್ಟೋಬರ್ 30ರಂದು ನಡೆದ ಈ ಘಟನೆಯಲ್ಲಿ 28 ಮಂದಿ ಹತರಾಗಿದ್ದರು ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿರುವ ಮುಲಾಯಂ ತಿಳಿಸಿದರು.

ವಿಶ್ವಹಿಂದೂ ಪರಿಷತ್ ನೀಡಿದ ಕರೆಯಂತೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ವಿವಾದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸಲು ದೇಶಾದ್ಯಂತದಿಂದ ಒಂದು ಲಕ್ಷ ಕರಸೇವಕರು ಅಯೋಧ್ಯೆಗೆ ಬಂದು ಜಮಾಯಿಸಿದ್ದರು. ಫೈರಿಂಗ್‌ಗೆ ಸೂಚನೆ ನೀಡಿದ ಕಾರಣದಿಂದ ಮುಲಾಯಂ ಸಿಂಗ್ ಯಾದವ್‌ಗೆ ಮುಲ್ಲಾ ಮುಲಾಯಂ ಎಂಬ ಅಡ್ಡ ಹೆಸರು ಅಂಟಿಕೊಂಡಿತು. ಬಾಬ್ರಿ ಮಸೀದಿಯನ್ನು ಉಳಿಸುವ ತಮ್ಮ ಪ್ರಯತ್ನವನ್ನು ಸಮರ್ಥಿಸಿದ ಮುಲಾಯಂ, ತಮ್ಮ ಆರಾಧನಾ ಸ್ಥಳವನ್ನೇ ಇಲ್ಲವಾಗಿಸಿದರೆ ದೇಶದಲ್ಲಿ ಇನ್ನೇನು ಉಳಿಯಲು ಸಾಧ್ಯ ಎಂದು ಅನೇಕ ಮುಸ್ಲಿಮರು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು ಎಂದು ತಿಳಿಸಿದರು.

ಈ ಬಗ್ಗೆ ಅಟಲ್ ಬಿಹಾರಿ ವಾಜಪೇಯಿಯವರ ಜೊತೆ ಚರ್ಚಿಸುತ್ತಿದ್ದಾಗ ಅವರು ಅಯೋಧ್ಯೆಯಲ್ಲಿ ಸತ್ತವರ ಸಂಖ್ಯೆ 56 ಎಂದು ತಿಳಿಸಿದ್ದರು. ನಾನು ಇಲ್ಲ ವಾಸ್ತವದಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವಾದಿಸಿದೆ. ಆರು ತಿಂಗಳ ನಂತರವಷ್ಟೇ ನನಗೆ ಸತ್ತವರ ಸಂಖ್ಯೆಯ ಬಗ್ಗೆ ತಿಳಿದುಬಂತು ಮತ್ತು ನಾನು ನನ್ನದೇ ರೀತಿಯಲ್ಲಿ ಅವರಿಗೆ ಸಹಾಯ ಮಾಡಿದ್ದೇನೆ ಎಂದು ಮುಲಾಯಂ ನುಡಿದರು.

ಮುಸ್ಲಿಮರು ಈಗಲೂ ಕೂಡಾ ಪಕ್ಷವನ್ನು ಬೆಂಬಲಿಸುತ್ತಾರೆ ಎಂದು ತಿಳಿಸಿದ ಮುಲಾಯಂ ನಮ್ಮದೇ ಪಕ್ಷದ ಜನರಿಂದ ನಡೆಯುವ ತಪ್ಪಿನಿಂದಾಗಿ ಮುಸಲ್ಮಾನರನ್ನು ಮತಗಟ್ಟೆಗೆ ಕರೆತರಲು ಸಾಧ್ಯವಾಗುತ್ತಿಲ್ಲ. ಅವರು ಈಗಲೂ ನಮ್ಮ ಪಕ್ಕಕ್ಕೇ ಮತಹಾಕುತ್ತಿದ್ದಾರೆ ಎಂದು ಎಸ್‌ಪಿ ಮುಖಂಡ ತಿಳಿಸಿದರು. 403 ವಿಧಾನಸಭಾ ಸ್ಥಾನಗಳ ಪೈಕಿ ಕೇವಲ 47ರಲ್ಲಿ ಜಯಗಳಿಸಲು ಸಾಧ್ಯವಾಗಿರುವುದು ನಾಚಿಕೆಗೇಡು ಎಂದು ಹೇಳಿದ ಮುಲಾಯಂ, ಫೈರಿಂಗ್‌ಗೆ ಸೂಚನೆ ನೀಡಿದ ನಂತರ ಪ್ರತಿಪಕ್ಷಗಳು ನನ್ನನ್ನು ಕೊಲೆಗಡುಕ ಎಂದು ಕರೆದರೂ ಕೂಡಾ 1993ರಲ್ಲಿ ನಮ್ಮ ಪಕ್ಷ ನೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು ಎಂದು ತಿಳಿಸಿದರು.

ಈಗಿನ ಯುವಕರು 1993ರಲ್ಲಿದ್ದ ಯುವಕರಂತಿಲ್ಲ. ಒಬ್ಬ ನಾಯಕನಿಗೆ ಗ್ರಾಮದ ಬೂತ್ ಮಟ್ಟದಲ್ಲೇ ಪಕ್ಷವನ್ನು ಗೆಲ್ಲಿಸಲು ಸಾಧ್ಯವಾಗದಿದ್ದರೆ ಪಕ್ಷದ ಗತಿಯಾದರೂ ಏನು. ನಾನು ಬಲಿಷ್ಠ ಪಕ್ಷವನ್ನು ನೋಡಲು ಬಯಸುತ್ತೇನೆ ಮತ್ತು ನಾಯಕರೂ ಕೂಡಾ ಜನರ ಜೊತೆ ಸಂಪರ್ಕ ಸಾಧಿಸಲು ತಮ್ಮ ನಿಲುವನ್ನು ಬದಲಿಸಿಕೊಳ್ಳಬೇಕು ಎಂದು ಮುಲಾಯಂ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X