Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ನಾಡು ನುಡಿಗೆ ಸಂಬಂಧಿಸಿದ ಮಹತ್ವದ ವರದಿಗಳ...

ನಾಡು ನುಡಿಗೆ ಸಂಬಂಧಿಸಿದ ಮಹತ್ವದ ವರದಿಗಳ ಸಂಗ್ರಹ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ23 Nov 2017 12:04 AM IST
share
ನಾಡು ನುಡಿಗೆ ಸಂಬಂಧಿಸಿದ ಮಹತ್ವದ ವರದಿಗಳ ಸಂಗ್ರಹ

‘ಕನ-್ನಡ-ಕನ್ನಡಿಗ ಕರ್ನಾಟಕ’ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೊರ ತಂದಿರುವ ನಾಡು ನುಡಿಗೆ ಸಂಬಂಧಿಸಿದ ಮಹತ್ವದ ವರದಿಗಳ ಸಂಗ್ರಹ. ಸಾಧಾರಣವಾಗಿ ನಾಡು ನುಡಿಗೆ ಸಂಬಂಧಿಸಿದಂತೆ ಸರಕಾರ ವರದಿಗಳನ್ನು ತರಿಸಿಕೊಳ್ಳುತ್ತದೆ. ಆದರೆ ಬಳಿಕ ಅದು ಫೈಲುಗಳಡಿಯಲ್ಲಿ ಧೂಳು ತಿನ್ನುತ್ತಾ ಬಿದ್ದುಕೊಳ್ಳುತ್ತವೆ. ಅನುಷ್ಠಾನದ ಮಾತಿರಲಿ, ಕನಿಷ್ಠ ಅದನ್ನು ಸರಕಾರವೇ ಓದಿರುವುದಿಲ್ಲ. ಜನಪ್ರತಿನಿಧಿಗಳಿಗೆ ಅದರೊಳಗೆ ಏನಿದೆ ಎನ್ನುವುದೇ ಗೊತ್ತಿರುವುದಿಲ್ಲ. ಜನರಿಗೆ ಆ ವರದಿಯನ್ನು ತಲುಪಿಸುವ ಪ್ರಯತ್ನವೇ ನಡೆಯುವುದಿಲ್ಲ. ಇಂತಹ ಸಂದರ್ಭದಲ್ಲಿ, ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ಸರಕಾರಕ್ಕೆ ಸಲ್ಲಿಸಿರುವ ಪ್ರಮುಖ ವರದಿಗಳನ್ನು ಸಂಗ್ರಹಿಸಿ ಪ್ರಾಧಿಕಾರವು ಅದಕ್ಕೆ ಪುಸ್ತಕ ರೂಪ ನೀಡಿರುವುದು ನಿಜಕ್ಕೂ ಅಭಿನಂದನೀಯ. ಇಲ್ಲಿ ಸುಮಾರು 30 ಅಂತಹ ವರದಿಗಳು ಮತ್ತು ಶಿಫಾರಸುಗಳಿವೆ. ಭಾಷಾ ಸಮಿತಿಯ ವರದಿ, ಎಚ್. ನರಸಿಂಹಯ್ಯ ವರದಿ, ಶಿಕ್ಷಣ ತಜ್ಞರ ಸಲಹಾ ಸಮಿತಿ ವರದಿ, ಬೋರಲಿಂಗಯ್ಯ ಸಮಿತಿ ವರದಿ, ಕನ್ನಡ ಶಾಸ್ತ್ರೀಯ ಭಾಷಾ ವರದಿ, ಕನ್ನಡ ತಂತ್ರಾಂಶ ವರದಿ, ಸರೋಜಿನಿ ಮಹಿಷಿ ವರದಿ, ಕಸ್ತೂರಿ ರಂಗನ್ ವರದಿ, ನಾಡು ನುಡಿ ಅಧ್ಯಯನ ವರದಿ, ಪರಮಶಿವಯ್ಯ ವರದಿ, ಕಾವೇರಿ ನ್ಯಾಯಾಧಿಕರಣ ತೀರ್ಪು ಹೀಗೆ ಹತ್ತು ಹಲವು ವಿವಾದಗಳು, ಸಮಸ್ಯೆಗಳು, ಪರಿಹಾರಗಳನ್ನು ಒಳಗೊಂಡ ಮಹತ್ವದ ವರದಿಗಳು ಇಲ್ಲಿವೆ.
 ಗೋಕಾಕ್ ವರದಿ, ಮಹಿಷಿ ವರದಿ, ಮಹಾಜನ್ ವರದಿ, ನಂಜುಂಡಪ್ಪ ವರದಿ ಮೊದಲಾದವುಗಳು ಸಾಕಷ್ಟು ಬಾರಿ ಮಾಧ್ಯಮಗಳಲ್ಲಿ, ವಿಧಾನಸಭೆಯಲ್ಲಿ ಚರ್ಚೆಯಾಗುತ್ತವೆ. ಆದರೆ ಅದರೊಳಗೆ ಏನಿದೆ ಎನ್ನುವ ಸಂಪೂರ್ಣ ಮಾಹಿತಿ ಜನರಿಗೆ ತಿಳಿದಿರುವುದಿಲ್ಲ. ಈ ವರದಿಗಳು ಸುಲಭವಾಗಿ ಆಸಕ್ತರಿಗೆ ಸಿಗುವುದೂ ಇಲ್ಲ. ವರದಿ ಜಾರಿಗೆ ಒತ್ತಾಯಿಸುವವರಿಗೆ ಸಂಪೂರ್ಣ ವಿವರಗಳು ಗೊತ್ತಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಪ್ರಯತ್ನ ಶ್ಲಾಘನಾರ್ಹವಾಗಿದೆ. ಇದರಿಂದ ಕನ್ನಡ ನಾಡು ನುಡಿಯ ಕುರಿತಂತೆ ಜನರಿಗೆ ಹೆಚ್ಚಿನ ಮಾಹಿತಿ ದೊರಕುವುದಲ್ಲದೆ, ಅದರ ಅನುಷ್ಠಾನಕ್ಕೆ ಹೋರಾಡಲು ದಾರಿಯೂ ತೆರೆದುಕೊಳ್ಳತೊಡಗುತ್ತದೆ. ಡಾ. ಎಲ್. ಹನುಮಂತಯ್ಯ ಅವರ ಪ್ರಧಾನ ಸಂಪಾದಕತ್ವದಲ್ಲಿ ಈ ಕೃತಿ ಹೊರಗೆ ಬಂದಿದೆ. ರಾ.ನಂ. ಚಂದ್ರಶೇಖರ, ಡಾ. ಕೆ. ಮುರಳೀಧರ ಸಂಪಾದಕರಾಗಿ ಕೆಲಸ ಮಾಡಿದ್ದಾರೆ. 600 ಪುಟಗಳ ಈ ಬೃಹತ್ ಕೃತಿಯ ಮುಖಬೆಲೆ 100 ರೂಪಾಯಿ.

share
-ಕಾರುಣ್ಯ
-ಕಾರುಣ್ಯ
Next Story
X