Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂವರು ಅಂತರ್‍ ಜಿಲ್ಲಾ ಕಳ್ಳರ ಬಂಧನ: 40...

ಮೂವರು ಅಂತರ್‍ ಜಿಲ್ಲಾ ಕಳ್ಳರ ಬಂಧನ: 40 ಲಕ್ಷ ರೂ. ಮೌಲ್ಯದ ನಗನಾಣ್ಯ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ24 Nov 2017 11:51 PM IST
share
  • ಮೂವರು ಅಂತರ್‍ ಜಿಲ್ಲಾ ಕಳ್ಳರ ಬಂಧನ: 40 ಲಕ್ಷ ರೂ. ಮೌಲ್ಯದ ನಗನಾಣ್ಯ ವಶಕ್ಕೆ
  • ಮೂವರು ಅಂತರ್‍ ಜಿಲ್ಲಾ ಕಳ್ಳರ ಬಂಧನ: 40 ಲಕ್ಷ ರೂ. ಮೌಲ್ಯದ ನಗನಾಣ್ಯ ವಶಕ್ಕೆ

ಶಿವಮೊಗ್ಗ, ನ. 24: ಶಿವಮೊಗ್ಗ ನಗರದ ದೊಡ್ಡಪೇಟೆ ಠಾಣೆ ಇನ್ ಸ್ಪೆಕ್ಟರ್ ಹರೀಶ್ ಕೆ. ಪಾಟೀಲ್ ನೇತೃತ್ವದ ಪೊಲೀಸ್ ತಂಡ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಕುಖ್ಯಾತ ಅಂತರ್‍ ಜಿಲ್ಲಾ ಕಳ್ಳರ ಸೆರೆ ಬಂಧಿಸಲಾಗಿದ್ದು, ಬಂಧಿತರಿಂದ ನಗನಾಣ್ಯ ಸೇರಿದಂತೆ ಸರಿಸುಮಾರು 40 ಲಕ್ಷ ರೂ. ಮೌಲ್ಯದ ಕಳವು ಮಾಲನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಚಿಕ್ಕಮಗಳೂರಿನ ನಿವಾಸಿ ಮುಹಿಬುಲ್ಲಾ ಅಲಿಯಾಸ್ ಮುದಾಸೀರ್ (30), ಕಡೂರಿನ ತಬ್ರೇಜ್ ಅಹ್ಮದ್ (37) ಹಾಗೂ ಬೆಂಗಳೂರಿನ ಆರ್. ಟಿ. ನಗರದ ಅಹ್ಮದ್ ಕಬೀರ್ (32) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದ್ದು, ಇವರಿಂದ ಕಳವು ಮಾಲು ಖರೀದಿಸಿದ್ದ ಆಲ್ದೂರಿನ ಅಬ್ದುಲ್ ಜಾವೀದ್, ಬೀರೂರಿನ ಇಮ್ರಾನ್ ಅಹ್ಮದ್, ಚಿತ್ರದುರ್ಗ ಜಿಲ್ಲೆ ಕುರುಬರಹಳ್ಳಿಯ ಮೊಹಮ್ಮದ್ ಮಝರುಲ್ಲಾ, ಸೈಯದ್ ಸಲೀಂ ಹಾಗೂ ಕಡೂರಿನ ನಿಡುಘಟ್ಟಾ ಗ್ರಾಮದ ಗುಲ್ನಾರ್ ಶಿರೀನ್ ಎಂಬುವರನ್ನು ಬಂಧಿಸಿದ್ದಾರೆ. 

ಶುಕ್ರವಾರ ನಗರದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತರಿಂದ 37.46 ಲಕ್ಷ ರೂ. ಮೌಲ್ಯದ ಒಂದು ಕೆಜಿ 472 ಗ್ರಾಂನ ಬಂಗಾರದ ಒಡವೆಗಳು, 1800 ರೂ. ಮೌಲ್ಯದ ಬೆಳ್ಳಿಯ ನಾಣ್ಯ, 30 ಸಾವಿರ ರೂ. ಮೌಲ್ಯದ ಓನಿಡಾ ಎಲ್‍ಇಡಿ ಟಿವಿ, 80 ಸಾವಿರ ರೂ. ಮೌಲ್ಯದ ಇಂಡಿಕಾ ಕಾರು, 30 ಸಾವಿರ ರೂ. ಮೌಲ್ಯದ ಒಂದು ಕಬ್ಬಿಣದ ಟ್ರೆಜರಿ ಮತ್ತು 1.90 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟಾರೆ ಮೌಲ್ಯ 40,78,300 ರೂ.ಗಳಾಗಿದೆ. ಆರೋಪಿಗಳು ತಿಪಟೂರಿನಲ್ಲಿ ಮೂರು, ಹಾಸನ ನಗರದಲ್ಲಿ ಐದು ಮತ್ತು ಚಿಕ್ಕಮಗಳೂರು ನಗರದಲ್ಲಿ ಒಂದು ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ತಂಡದ ಇನ್ನೋರ್ವ ಸದಸ್ಯ ಕಡೂರಿನ ಸಾದಿಕ್ ತಲೆಮರೆಸಿಕೊಂಡಿದ್ದಾನೆ. ಈತನ ಮೇಲೆ ರಾಜ್ಯದ ವಿವಿಧೆಡೆ ಹಲವಾರು ಕಳ್ಳತನದ ಕೇಸುಗಳು ದಾಖಲಾಗಿವೆ. ಆದರೆ ಈತ ಮುಂಬೈ, ಅನಂತಪುರ, ಬೆಂಗಳೂರು ಮೊದಲಾದೆಡೆ ಓಡಾಡಿಕೊಂಡಿದ್ದಾನೆ. ಈತನ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 ಆರೋಪಿಗಳ ಬಂಧನದಿಂದ ಶಿವಮೊಗ್ಗದ ವಿನೋಬನಗರ ಠಾಣೆ ವ್ಯಾಪ್ತಿಯ ಐದು, ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಮೂರು, ತುಂಗಾನಗರ ಮತ್ತು ಜಯನಗರದ ಠಾಣೆ ವ್ಯಾಪ್ತಿಯ ತಲಾ ಎರಡು, ಗ್ರಾಮಾಂತರ ಮತ್ತು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಠಾಣೆ ವ್ಯಾಪ್ತಿಯ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 14 ಪ್ರಕರಣಗಳು ಪತ್ತೆಯಾಗಿವೆ ಎಂದರು. 

ಎಪಿಎಂಸಿ ಎದುರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಈ ಮೂವರು ಕಳ್ಳರನ್ನು ವಶಕ್ಕೆ ಪಡೆಯಲಾಗಿದೆ. ಇವರ ತಂಡದ ನಾಯಕ ಬೆಂಗಳೂರಿನ ಯಶವಂತಪುರದ ಬಾಬ್ಜಾನ್ (26) ಎನ್ನುವವನನ್ನು ಕಳೆದ ವರ್ಷವೇ ಬಂಧಿಸಲಾಗಿದ್ದು, ಆತನಿಂದ ಕಳ್ಳತನದ ಹಾಗೂ ಆತನ ಸಹಚರರ ಬಗ್ಗೆ ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಲಾಗಿತ್ತು ಎಂದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್‍ಪಿ ಮುತ್ತುರಾಜ್, ಡಿವೈಎಸ್‍ಪಿ ಪಿ.ಎಸ್. ಸುದರ್ಶನ್, ದೊಡ್ಡಪೇಟೆ ಸಿಪಿಐ ಹರೀಶ್‍ಪಾಟೀಲ್, ಸಬ್‍ಇನ್ಸ್‍ಪೆಕ್ಟರ್ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X