Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಸಿನಿಮಾದಂತಲ್ಲ, ಹಾಗಾಗಿ ವೈಫಲ್ಯದ...

ರಾಜಕೀಯ ಸಿನಿಮಾದಂತಲ್ಲ, ಹಾಗಾಗಿ ವೈಫಲ್ಯದ ಭಯವಿಲ್ಲ: ಕಮಲ್ ಹಾಸನ್

ವಾರ್ತಾಭಾರತಿವಾರ್ತಾಭಾರತಿ26 Nov 2017 7:37 PM IST
share
ರಾಜಕೀಯ ಸಿನಿಮಾದಂತಲ್ಲ, ಹಾಗಾಗಿ ವೈಫಲ್ಯದ ಭಯವಿಲ್ಲ: ಕಮಲ್ ಹಾಸನ್

ಹೊಸದಿಲ್ಲಿ, ನ.26: ರಾಜಕೀಯ ಎಂಬುದು ಸಿನಿಮಾದಂತೆ ಒಂದು ಚಿತ್ರದಿಂದ ಬಂದ ಹಣವನ್ನು ಮತ್ತೊಂದು ಸಿನಿಮಾಕ್ಕೆ ಹಾಕಿದಂತೆ ಅಲ್ಲ ಹಾಗಾಗಿ ರಾಜಕೀಯದಲ್ಲಿ ವೈಫಲ್ಯದ ಬಗ್ಗೆ ನನಗೆ ಹೆದರಿಕೆಯಿಲ್ಲ ಎಂದು ನಟ ಕಮಲ್ ಹಾಸನ್ ತಿಳಿಸಿದ್ದಾರೆ.

 “ನನಗೆ ವೈಫಲ್ಯದ ಬಗ್ಗೆ ಭಯವಿಲ್ಲ ಯಾಕೆಂದರೆ ಇದು ಸಿನಿಮಾ ಮಾಡಿದಂತೆ ಅಲ್ಲ. ಇದು ಹಣ ಮಾಡುವುದಕ್ಕೂ ಅಲ್ಲ. ಇದು ನಮ್ಮನ್ನು ನಾವು ಉತ್ತಮಗೊಳಿಸುವುದಕ್ಕಾಗಿ, ನನ್ನ ರಾಜ್ಯವನ್ನು ಉತ್ತಮಗೊಳಿಸುವುದಕ್ಕಾಗಿ ಇಟ್ಟಿರುವ ಹೆಜ್ಜೆ” ಎಂದು 63ರ ಹರೆಯದ ಕಮಲ್ ಶನಿವಾರದಂದು ಟೈಮ್ಸ್ ಡೆಲ್ಲಿ ಲಿಟ್‌ಫೆಸ್ಟ್‌ನಲ್ಲಿ ಮಾತನಾಡುವ ವೇಳೆ ತಿಳಿಸಿದರು.

ನನ್ನ ರಾಜ್ಯಕ್ಕಾಗಿ ಏನಾದರೂ ಮಾಡಬೇಕೆಂಬ ಪ್ರಯತ್ನವನ್ನೇ ಜನರು ಮೆಚ್ಚುತ್ತಾರೆ. ನಾನು ಇದರಲ್ಲಿ ತಪ್ಪಾಗಿರಲೂ ಬಹುದು. ಆದರೆ ನಾನಿದನ್ನು ಜನರಿಗಾಗಿ ಮಾಡುತ್ತಿದ್ದೇನೆ. ನಾನು ತಪ್ಪಾಗಿದ್ದಾರೆ ಅದರಲ್ಲಿ ವೈಫಲ್ಯವೇನೂ ಇಲ್ಲ. ನಾನು ಈ ರೀತಿ ಪ್ರಯತ್ನಿಸಿದೆ ಎಂಬುದೇ ಸಾಮರ್ಥ್ಯವನ್ನು ತೋರಿಸುತ್ತದೆ. ಅಂತಿಮವಾಗಿ ನಾನು ನನ್ನ ಆದರ್ಶ ರಾಜ್ಯದ ಕನಸಿನಿಂದಾಗಿ ಸೋತಿದ್ದೇನೆ. ಆದರೆ ಆ ಕನಸು ಕಾಣುವ ಧೈರ್ಯವನ್ನು ನಾನು ಮಾಡಿದ್ದೇನೆ ಎಂದು ಕಮಲ್ ತಿಳಿಸಿದರು.

ಇತರರನ್ನು ದೂಷಿಸುವ ಬದಲು ಜವಾಬ್ದಾರಿಯನ್ನು ನಮ್ಮ ಮೇಲೆಯೇ ಹಾಕಿಕೊಳ್ಳುವ ಕಾಲ ಬಂದಿದೆ. ನಾನು ರಾಜಕಾರಣಿಗಳ ಬಗ್ಗೆ ಮಾತನಾಡುತ್ತಿಲ್ಲ. ಹೌದು ಅವರು ಭ್ರಷ್ಟರಾಗಿದ್ದಾರೆ ಮತ್ತು ಸಮಾಜದ ಒಳಿತಿಗೆ ದುಡಿಯುವುದಿಲ್ಲ. ಕೆಲವೊಂದು ಬಾರಿ ಅವರು ನಮ್ಮನ್ನೇ ಹೋಲುತ್ತಾರೆ. ನಾನು ನನ್ನ ರಾಜ್ಯಕ್ಕೆ ಏನನ್ನಾದರೂ ಮಾಡಲು ಬಯಸುತ್ತೇನೆ ಎಂದು ಹಿರಿಯ ನಟ ತಿಳಿಸಿದರು.

ರಾಷ್ಟ್ರದ ರಾಜಧಾನಿಗೆ ಬಂದು ದೇಶದ ಬಗ್ಗೆ ಮಾತನಾಡದೆ ತಮಿಳುನಾಡಿನ ಬಗ್ಗೆ ಯಾಕೆ ಮಾತನಾಡುತ್ತೀರಿ ಎಂದು ಕೇಳಿದಾಗ, ದೇಶವು ಆರಂಭವಾಗುವುದೇ ಅಲ್ಲಿಂದ, ನನ್ನ ಮನೆ ಬಾಗಿಲಿನಿಂದ. ನಾನು ನನ್ನ ಮನೆ ಬಾಗಿಲನ್ನು ಮೊದಲು ಸ್ವಚ್ಛಗೊಳಿಸಲು ಬಯಸುತ್ತೇನೆ. ಮತ್ತು ಅಲ್ಲಿಂದಲೇ ನಾನು ಆರಂಭಿಸುತ್ತೇನೆ ಎಂದು ಕಮಲ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X