Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮನ್ ಕಿ ಬಾತ್’ನಲ್ಲಿ ವಿಕಲಾಂಗ ಬಾಲಕನಿಗೆ...

‘ಮನ್ ಕಿ ಬಾತ್’ನಲ್ಲಿ ವಿಕಲಾಂಗ ಬಾಲಕನಿಗೆ ಶಹಬ್ಬಾಸ್ ಎಂದ ಪ್ರಧಾನಿ

ಈತ ‘ವಿಶಲ್ ಆಂದೋಲನ’ದ ರೂವಾರಿ

ವಾರ್ತಾಭಾರತಿವಾರ್ತಾಭಾರತಿ26 Nov 2017 8:56 PM IST
share
‘ಮನ್ ಕಿ ಬಾತ್’ನಲ್ಲಿ ವಿಕಲಾಂಗ ಬಾಲಕನಿಗೆ ಶಹಬ್ಬಾಸ್ ಎಂದ ಪ್ರಧಾನಿ

ಹೊಸದಿಲ್ಲಿ, ನ.26: ತನ್ನ ಗ್ರಾಮವನ್ನು ಬಯಲುಶೌಚ ಮುಕ್ತ ಮಾಡುವ ಜವಾಬ್ದಾರಿಯನ್ನು ಹೊತ್ತು ಅದರಲ್ಲಿ ಯಶಸ್ವಿಯಾದ 8 ವರ್ಷ ವಿಕಲಾಂಗ ಬಾಲಕನಿಗೆ ಪ್ರಧಾನಿ ಮೋದಿ ತನ್ನ 38ನೆ ಮನ್ ಕಿ ಬಾತ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಕುಮ್ಹಾರಿ ಗ್ರಾಮದವನಾದ ತುಶಾರ್ ತನ್ನ ಗ್ರಾಮವನ್ನು ಬಯಲುಶೌಚ ಮುಕ್ತವನ್ನಾಗಿ ಮಾಡಲು ಪಣ ತೊಟ್ಟಿದ್ದ. ಈ ಗ್ರಾಮದ ಬಹುತೇಕ ಜನರು ಕೃಷಿ ಮತ್ತು ಕೂಲಿ ಕೆಲಸಗಳನ್ನು ಮಾಡಿಕೊಂಡಿದ್ದಾರೆ. ಹಿಂದಿನಿಂದಲೂ ಇಲ್ಲಿ ಬಯಲುಶೌಚ ಸಾಮಾನ್ಯವಾಗಿತ್ತು.

ಈ ಬಗ್ಗೆ ಅರಿವು ಮೂಡಿಸಿದ ತುಶಾರ್ ಆಂದೋಲನವೊಂದನ್ನು ಆರಂಭಿಸಿದ. ಹುಟ್ಟಿನಿಂದಲೇ ಮೂಗ ಹಾಗು ಕಿವುಡನಾದ ಈತ ಬೆಳಗ್ಗೆ 5 ಗಂಟೆಗೆ ಎದ್ದು ವಿಶಲ್ ಮೂಲಕ ಗ್ರಾಮಸ್ಥರನ್ನು ಎಚ್ಚರಿಸುತ್ತಿದ್ದ. ವಿಶಲ್ ಅನ್ನೇ ತನ್ನ ಆಯುಧವನ್ನಾಗಿ ಮಾಡಿಕೊಂಡಿದ್ದ. ಪ್ರತಿಯೊಂದು ಮನೆಗೆ ತೆರಳಿ ವಿಶಲ್ ಹಾಕಿ ಅಥವಾ ಬಾಗಿಲು ಬಡಿದು ಜನರನ್ನು ಎಚ್ಚರಿಸುವ ಮೂಲಕ ಬಯಲುಶೌಚದ ಬಗ್ಗೆಯೂ ಎಚ್ಚರಿಸುವ ಪ್ರಯತ್ನ ಮಾಡಿದ್ದ.

ಪ್ರತಿದಿನ 30ರಿಂದ 40 ಮನೆಗಳಿಗೆ ಭೇಟಿ ನೀಡುತ್ತಿದ್ದ ತುಶಾರ್ ಯಾರಾದರೂ ಬಯಲುಶೌಚ ಮಾಡುತ್ತಿದ್ದರೆ ಅವರು ಅದನ್ನು ನಿಲ್ಲಿಸುವವರೆಗೂ ವಿಶಲ್ ಹೊಡೆಯುತ್ತಿದ್ದ. ಕುಮ್ಹಾರಿ ಗ್ರಾಮವನ್ನು ಬಯಲುಶೌಚ ಮುಕ್ತ ಮಾಡಲು ತುಶಾರ್ ಮಾಡುತ್ತಿರುವ ಆಂದೋಲನ ಹಾಗು ಆತನ ಧೈರ್ಯಕ್ಕೆ ಪ್ರಧಾನಿ ಮೋದಿ ಶಹಬ್ಬಾಸ್ ಎಂದಿದ್ದಾರೆ. ತುಶಾರ್ ನ ಕೆಲಸವು ಗ್ರಾಮಸ್ಥರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ್ದು ಹಾಗು ಗ್ರಾಮವು ಬಯಲುಶೌಚ ಮುಕ್ತವಾಗುತ್ತದೆ ಎನ್ನುವ ಭರವಸೆ ಮೂಡಿಸಿತು ಎಂದು ಪ್ರಧಾನಿ ಹೇಳಿದ್ದಾರೆ.

ತುಶಾರ್ ನ ಈ ಕಾರ್ಯಕ್ಕೆ ಜಿಲ್ಲಾಡಳಿತ ಕೂಡ ಕೈಜೋಡಿಸಿತ್ತು. 2017ರ ಜನವರಿ 26ರಂದು ಕುಮ್ಹಾರಿ ಗ್ರಾಮವನ್ನು ‘ಬಯಲುಶೌಚ ಮುಕ್ತ ಗ್ರಾಮ’ ಎಂದು ಘೋಷಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X