Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣಾ ರಾಜಕೀಯಕ್ಕೆ ಶಾಸಕ ರವೀಂದ್ರ...

ಚುನಾವಣಾ ರಾಜಕೀಯಕ್ಕೆ ಶಾಸಕ ರವೀಂದ್ರ ನಿವೃತ್ತಿ : ಕಾರ್ಯಕರ್ತರಿಂದ ಆತ್ಮಹತ್ಯೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ26 Nov 2017 9:12 PM IST
share
ಚುನಾವಣಾ ರಾಜಕೀಯಕ್ಕೆ ಶಾಸಕ ರವೀಂದ್ರ ನಿವೃತ್ತಿ : ಕಾರ್ಯಕರ್ತರಿಂದ ಆತ್ಮಹತ್ಯೆಗೆ ಯತ್ನ

ದಾವಣಗೆರೆ, ನ. 26: ಹಿರಿಯ ರಾಜಕಾರಣಿ ದಿ. ಎಂ.ಪಿ.ಪ್ರಕಾಶ್ ಅವರ ಪುತ್ರ ಹರಪನಹಳ್ಳಿ ಕಾಂಗ್ರೆಸ್ ಶಾಸಕ ಎಂ.ಪಿ. ರವೀಂದ್ರ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ರವಿವಾರ ಹರಪ್ಪನಹಳ್ಳಿಯ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲುಷಿತ ರಾಜಕೀಯ, ದುಬಾರಿ ಚುನಾವಣೆ, ನನ್ನ ವೈಯಕ್ತಿಕ ಸಮಸ್ಯೆಯ ಕಾರಣದಿಂದ ಮನನೊಂದು ಸಕ್ರೀಯ ಚುನಾವಣಾ ರಾಜಕೀಯದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದೇನೆ. ನಾನು ಯಾವ ಪಕ್ಷಕ್ಕೂ ಹೋಗಲ್ಲ, ನಾನು ಬಹಳ ದಿನಗಳಿಂದ ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇನೆ ಎಂದು ಹೇಳುವ ಸಮಯದಲ್ಲಿ ಅವರು ಭಾವುಕರಾದರು.

ಶಾಸಕ ಎಂ.ಪಿ. ರವೀಂದ್ರ ಅವರ ನಿಲುವಿಗೆ ತೀವ್ರ ಮನನೊಂದ ಕಾರ್ಯಕರ್ತರು ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ಶಾಸಕರು ತಮ್ಮ ನಿರ್ಧಾರ ಪ್ರಕಟಿಸಿ ಪ್ರವಾಸಿ ಮಂದಿರದಿಂದ ಹೊರಬರುತ್ತಲೇ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಪ್ರಾರಂಭಿಸಿದರು. ನಿರ್ಧಾರ ಹಿಂಪಡೆಯುವಂತೆ ಎಂ.ಪಿ.ರವೀಂದ್ರ ಅವರ ಕಾರಿಗೆ ಮುತ್ತಿಗೆ ಹಾಕಿದರು. 

ಈ ಸಂದರ್ಭ ಕೆಲ ಕಾರ್ಯಕರ್ತರು ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು. ಆಗ ಪೊಲೀಸರು ಇವರನ್ನು ತಡೆದರು.

ಶಾಸಕ ರವೀಂದ್ರ ಅಂತಿಮವಾಗಿ ಹೊರಗಡೆ ಬಂದು ಕಾರು ಏರಲು ಹೋದಾಗ ಕಾರ್ಯಕರ್ತರು ಬಿಡದೆ ಹೇಳಿಕೆ ವಾಪಾಸು ಪಡೆಯಿರಿ ಎಂದು ಮನವಿ ಮಾಡಿ, ನೀವು  ಚುನಾವಣೆಗೆ ನಿಲ್ಲಲೇ ಬೇಕು ಎಂದು ಪಟ್ಟು ಹಿಡಿದರು.

ಈ ಸಂದರ್ಭ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ವಾಗ್ವಾದ, ತಳ್ಳಾಟ ನಡೆಯಿತು. ಅಂತಿಮವಾಗಿ ಶಾಸಕರು ಈಗ ನನ್ನ ಮನಸ್ಥಿತಿ ಸರಿಯಿಲ್ಲ, ದಾರಿ ಬಿಡಿ, ಶೀಘ್ರ ಕಾರ್ಯಕರ್ತರ ಸಭೆ ಕರೆದು ಈ ಬಗ್ಗೆ ಚರ್ಚಿಸೋಣ ಎಂದು ಸಮಾಧಾನಪಡಿಸಿದರು.

ಪ್ರತಿಭಟನೆಯಲ್ಲಿ ಯುವ ಮುಖಂಡ ಎಲ್. ಮಂಜನಾಯ್ಕ, ಪುರಸಭಾ ಸದಸ್ಯ ಅರುಣಪೂಜಾರ, ಅರೆಮಜ್ಜಿಗೇರಿ ಬಸವರಾಜ, ಗುತ್ತಿಗೆದಾರ ರಾಜ, ತಾ.ಪಂ ಸದಸ್ಯರಾದ ಓ. ರಾಮಪ್ಪ, ತಲಿಗಿ ಉಮಾಕಾಂತ, ನೀಲಗುಂದ ಮಂಜುನಾಥ,  ಹುಲ್ಸಿಕಟ್ಟಿ ಚಂದ್ರಪ್ಪ, ಜಾಕೀರ, ಪುಣಭಗಟ್ಟಿ ನಿಂಗಪ್ಪ ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X