Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಸ್ಲಾಂಗೆ ಕಳಂಕ ತರಲು ಉಗ್ರರಿಗೆ ಅವಕಾಶ...

ಇಸ್ಲಾಂಗೆ ಕಳಂಕ ತರಲು ಉಗ್ರರಿಗೆ ಅವಕಾಶ ನೀಡೆವು: ಸೌದಿ

► ರಿಯಾದ್‌ನಲ್ಲಿ ಭಯೋತ್ಪಾದನೆ ವಿರೋಧಿ ಸಮಾವೇಶ ► 41 ಇಸ್ಲಾಮಿಕ್ ರಾಷ್ಟ್ರಗಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ26 Nov 2017 9:49 PM IST
share
ಇಸ್ಲಾಂಗೆ ಕಳಂಕ ತರಲು ಉಗ್ರರಿಗೆ ಅವಕಾಶ ನೀಡೆವು: ಸೌದಿ

ರಿಯಾದ್,ನ.26: ಸೌದಿ ಅರೇಬಿಯವು ರವಿವಾರ ಭಯೋತ್ಪಾದನೆಯ ವಿರುದ್ಧ ಸಮರವನ್ನು ಘೋಷಿಸಿದ್ದು, ಇಸ್ಲಾಂನ ವರ್ಚಸ್ಸಿಗೆ ಕಳಂಕ ತರಲು ಭಯೋತ್ಪಾದಕರಿಗೆ ತಾನು ಅವಕಾಶ ನೀಡುವುದಿಲ್ಲವೆಂದು ಹೇಳಿದೆ.

  ರಿಯಾದ್‌ನಲ್ಲಿ ರವಿವಾರ ನಡೆದ ಭಯೋತ್ಪಾದನೆ ವಿರೋಧಿ ಇಸ್ಲಾಮಿಕ್ ಮಿಲಿಟರಿ ಒಕ್ಕೂಟ (ಐಎಂಸಿಟಿಸಿ)ದ 41 ಸದಸ್ಯ ರಾಷ್ಟ್ರಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸೌದಿಯ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರು ಈಜಿಪ್ಟ್‌ನ ಉತ್ತರ ಸಿನೈ ಪ್ರಾಂತದಲ್ಲಿ 300ಕ್ಕೂ ಅಧಿಕ ಮಂದಿಯನ್ನು ಬಲಿತೆಗೆದುಕೊಂಡ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದರು.

 ವಿವಿಧ ರಾಷ್ಟ್ರಗಳ ರಕ್ಷಣಾ ವರಿಷ್ಠರು, ರಾಜತಾಂತ್ರಿಕರು ಹಾಗೂ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು ಇಸ್ಲಾಮ್‌ನ ವರ್ಚಸ್ಸಿಗೆ ಕಳಂಕ ತರಲು ಭಯೋತ್ಪಾದಕ ಶಕ್ತಿಗಳಿಗೆ ಅವಕಾಶ ನೀಡುವುದಿಲ್ಲವೆಂದು ಘೋಷಿಸಿದರು.

    ಇಸ್ಲಾಮಿಕ್ ಮಿಲಿಟರಿ ಭಯೋತ್ಪಾದನೆ ವಿರೋಧಿ ಒಕ್ಕೂಟದ ಮಿಲಿಟರಿ ಕಮಾಂಡರ್ ಹಾಗೂ ಪಾಕಿಸ್ತಾನದ ಮಾಜಿ ಸೇನಾ ವರಿಷ್ಠ ಜನರಲ್ ರಾಹಿಲ್ ಶರೀಫ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಜಗತ್ತಿನಾದ್ಯಂತ ಹೆಚ್ಚುಕಮ್ಮಿ 70 ಸಾವಿರ ಭಯೋತ್ಪಾದಕ ದಾಳಿಗಳು ನಡೆದಿದ್ದು, 2 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಭಯೋತ್ಪಾದನೆಯು ಇಸ್ಲಾಮಿಕ್ ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ಪರಿಣಾಮ ಬೀರಿದ್ದು ಇರಾಕ್,ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ಅತ್ಯಧಿಕವಾಗಿ ಬಾಧಿತವಾಗಿವೆಯೆಂದು ಹೇಳಿದರು.

 ಐಎಂಸಿಟಿಸಿಯು ಯಾವುದೇ ದೇಶ, ಪಂಗಡ ಅಥವಾ ಧರ್ಮದ ವಿರುದ್ಧವಾಗಿಲ್ಲವೆಂದು ಸ್ಪಷ್ಟಪಡಿಸಿದ ಶರೀಫ್, ಇಸ್ಲಾಮ್ ಶಾಂತಿಯನ್ನು ಬೋಧಿಸುವ ಧರ್ಮವೆಂಬುದನ್ನು ಜಗತ್ತಿಗೆ ಅರಿವು ಮೂಡಿಸಲು ಸಕಲ ಪ್ರಯತ್ನಗಳನ್ನು ನಡೆಸಲಾಗುವುದೆಂದು ಹೇಳಿದರು.

ಮಕ್ಕಾದಿಂದ ಕಾರ್ಯಾಚರಿಸುತ್ತಿರುವ ವಿಶ್ವ ಮುಸ್ಲಿಂ ಲೀಗ್‌ನ ಮಹಾ ಕಾರ್ಯದರ್ಶಿ ಡಾ. ಮುಹಮ್ಮದ್ ಬಿನ್ ಅಬ್ದುಲ್ ಕರೀಂ ಅಲಿ ಇಸ್ಸಾ ಮಾತನಾಡಿ,‘‘ಭಯೋತ್ಪಾದನೆಯ ಚಿಂತನೆಯು ಇಸ್ಲಾಂನ ಸಂದೇಶಕ್ಕೆ ಅಪರಿಚಿತವಾದುದಾಗಿದೆ ಹಾಗೂ ಈ ಮೈತ್ರಿಕೂಟವು ಭಯೋತ್ಪಾದನೆಯನ್ನು ಕಿತ್ತೆಸೆಯಲಿದೆ’’ ಎಂದು ಘೋಷಿಸಿದರು.

 ಐಸಿಸ್‌ನಂತಹ ಭಯೋತ್ಪಾದಕ ಗುಂಪುಗಳು ಪ್ರತಿಪಾದಿಸುತ್ತಿರುವ ವಿಚಾರಧಾರೆಗಳ ಬಗ್ಗೆ ಪ್ರಸ್ತಾಪಿಸಿದ ಅವರು ಇಸ್ಲಾಮ್ ಹಾಗೂ ಇಸ್ಲಾಮಿಕ್ ಇತಿಹಾಸದ ಕುರಿತ ತಪ್ಪುವ್ಯಾಖ್ಯಾನದಿಂದಾಗಿ ಈ ಕೆಟ್ಟ ಚಿಂತನೆಗಳು ಉದ್ಭವಿಸಿದೆ ಎಂದರು.

ರಿಯಾದ್‌ನ ಫೈಸಲಿಯಾ ಹೊಟೇಲ್‌ನಲ್ಲಿ ಬಿಗಿ ಭದ್ರತೆಯ ನಡುವೆ ಈ ಸಮಾವೇಶವು ಆರಂಭಗೊಂಡಿದೆ.

ಸಮಾವೇಶದಲ್ಲಿ ಸದಸ್ಯ ರಾಷ್ಟ್ರಗಳು ಭಯೋತ್ಪಾದನೆಯನ್ನು ಹತ್ತಿಕ್ಕಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ರಹಸ್ಯವಾಗಿ ಮಾತುಕತೆ ನಡೆಸಲಿವೆ.ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುವುದನ್ನು ತಡೆಗಟ್ಟುವ ಕುರಿತಾಗಿಯೂ ಅವು ಸಮಾಲೋಚನೆಗಳನ್ನು ನಡೆಸಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X