Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಬಸವಣ್ಣನ ನಿಜವಾದ ಭಕ್ತರಾದರೆ...

'ಬಸವಣ್ಣನ ನಿಜವಾದ ಭಕ್ತರಾದರೆ ಸಿದ್ದರಾಮಯ್ಯ ಗೋಹತ್ಯೆ ನಿಷೇಧಿಸಲಿ'

ಹಿಂದೂ ಸಮಾಜೋತ್ಸವದಲ್ಲಿ ಪೇಜಾವರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ26 Nov 2017 10:04 PM IST
share
ಬಸವಣ್ಣನ ನಿಜವಾದ ಭಕ್ತರಾದರೆ ಸಿದ್ದರಾಮಯ್ಯ ಗೋಹತ್ಯೆ ನಿಷೇಧಿಸಲಿ

ಉಡುಪಿ, ನ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವಣ್ಣರ ನಿಜವಾದ ಭಕ್ತರಾಗಿದ್ದರೆ ತಮ್ಮ ಅಧಿಕಾರ ಅವಧಿಯಲ್ಲಿ ಈ ಹಿಂದೆ ಹಿಂಪಡೆದ ಗೋಹತ್ಯೆ ನಿಷೇಧ ಮಸೂದೆಯನ್ನು ಮತ್ತೆ ರಾಜ್ಯದಲ್ಲಿ ಜಾರಿಗೆ ತರಬೇಕು. ಆಗ ಅವರನ್ನು ನಾವು ಬಸವಣ್ಣನ ಭಕ್ತರು ಎಂಬುದಾಗಿ ಒಪ್ಪಬಹುದು ಎಂದು ಪರ್ಯಾಯ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್‌ನ ಧರ್ಮ ಸಂಸದ್ ಪ್ರಯುಕ್ತ ಉಡುಪಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಇಂದು ಹಮ್ಮಿಕೊಳ್ಳಲಾದ ಹಿಂದೂ ಸಮಾಜೋತ್ಸವ ದಲ್ಲಿ ಅವರು ಆಶೀರ್ವಚನ ನೀಡಿದರು.

ಬಸವಣ್ಣ ತನ್ನ ವಚನದಲ್ಲಿ ಗೋಹತ್ಯೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಬಸವಣ್ಣರ ಭಕ್ತರು ಹಾಗೂ ಅವರ ಮಾರ್ಗ ದಲ್ಲಿಯೇ ನಡೆಯುತ್ತೇನೆ ಎಂದು ಹೇಳುವ ಮುಖ್ಯಮಂತ್ರಿ ಬಸವಣ್ಣನಿಗೆ ಅತ್ಯಂತ ಇಷ್ಟವಾದ ಗೋಹತ್ಯೆ ನಿಷೇಧ ವಾಪಾಸ್ ಪಡೆದಿರುವುದು ಯಾಕೆ ಎಂದು ಪ್ರಶ್ನಿಸಿದ ಸ್ವಾಮೀಜಿ, ಆದುದರಿಂದ ಮುಖ್ಯಮಂತ್ರಿ ತಮ್ಮ ವಿಚಾರವನ್ನು ಬದಲಾಯಿಸಿಕೊಂಡು ಗೋಹತ್ಯೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆಯನ್ನು ರಾಜ್ಯದಲ್ಲಿ ಶೀಘ್ರವೇ ಜಾರಿಗೆ ತರಲಿ ಎಂದರು.

ರಾಮ ಮಂದಿರ ನಿರ್ಮಾಣ ಆಗದೆ ನಮಗೆ ವಿಶ್ರಾಂತಿ ಇಲ್ಲ ಎಂದು ನಮ್ಮ ಯುವಕರು ಪ್ರತಿಜ್ಞೆ ಮಾಡಬೇಕು. ರಾಮ ಮಂದಿರ ಚಳವಳಿಯನ್ನು ಮುಂದುವರಿಸಬೇಕು. ಒಂದು ವರ್ಷದೊಳಗೆ ರಾಮ ಮಂದಿರ ನಿರ್ಮಾಣದ ಕಾರ್ಯ ಆರಂಭವಾಗಲಿ ಎಂದು ಅವರು ತಿಳಿಸಿದರು.

ಮಸೀದಿಗಳಿಗೆ ನೀಡುವ ಸ್ವಾಯತ್ತತೆಯನ್ನು ದೇವಸ್ಥಾನಗಳಿಗೆ ಸರಕಾರ ನೀಡಬೇಕು. ಅಲ್ಲಿಯೂ ಯಾವುದೇ ವ್ಯತ್ಯಾಸ ಇರಬಾರದು. ಬಹುಸಂಖ್ಯಾತರಿಗೆ ಸೌಲಭ್ಯ ನೀಡುವುದರಿಂದ ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯ ಆಗಲ್ಲ. ನಾನು ಮೀಸಲಾತಿ, ದಲಿತ ವಿರೋಧಿ ಅಲ್ಲ ಎಂದು ಅವರು ಸ್ಪಷ್ಪಪಡಿಸಿದರು.

ವಿಎಚ್‌ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಮಾತನಾಡಿ, ನಾವು ಎಂಪಿ, ಎಂಎಲ್‌ಎ, ಮಂತ್ರಿಗಿರಿಯನ್ನು ಕೇಳುವುದಿಲ್ಲ. ನಮಗೆ ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರವನ್ನು ನಿರ್ಮಿಸಬೇಕು. ನಾವೆಲ್ಲ ಮನೆಗಳಲ್ಲಿ ವಾಸಿಸುತ್ತಿದ್ದರೆ ರಾಮ ಮಾತ್ರ ಅಯೋಧ್ಯೆಯಲ್ಲಿ ಜೋಪಡಿಯಲ್ಲಿದ್ದಾನೆ. ಇದರಿಂದ ನಮಗೆ ನಾಚಿಕೆಯಾಗಬೇಕು ಎಂದು ಹೇಳಿದರು.

ಅಯೋಧ್ಯೆಯಲ್ಲಿ ನಾವು ರಾಮಮಂದಿರ ನಿರ್ಮಿಸುತ್ತೇವೆ. ಆ ವ್ಯಾಪ್ತಿಯಲ್ಲಿ ಎಲ್ಲಿಯೂ ಮಸೀದಿ ನಿರ್ಮಿಸಲು ಬಿಡಲ್ಲ. ದೇಶದ ಎಲ್ಲೂ ಬಾಬರ್ ಹೆಸರಿನಲ್ಲಿ ಮಸೀದಿ ನಿರ್ಮಿಸಲು ನಾವು ಅವಕಾಶ ನೀಡುವುದಿಲ್ಲ. ನಮಗೆ ರಾಮ ಮಂದಿರ ಬೇಕು ಹಾಗೂ ದೇಶದಲ್ಲಿ ರಾಮ ರಾಜ್ಯ ಕೂಡ ನಿರ್ಮಾಣ ಆಗ ಬೇಕು ಎಂದು ಅವರು ತಿಳಿಸಿದರು.

ಮಾದರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ಈ ವೇದಿಕೆಯಲ್ಲಿ ತೆಗೆದು ಕೊಂಡ ನಿರ್ಣಯಗಳನ್ನು ಟೀಕೆ ಮಾಡುವ ಮತ್ತೊಂದು ವೇದಿಕೆ ರಾಜ್ಯದಲ್ಲಿ ನಡೆಯುತ್ತಿದೆ. ಈ ವೇದಿಕೆಗೆ ಬಂದ ಕಾರಣ ನಾನು ಪೀಠ ಬಿಡುವಂತಹ ಮಾತುಗಳು ಕೂಡ ನಾಳೆ ಬರಬಹುದು. ಆದರೆ ನನಗೆ ಮಠ ಪೀಠ ಮುಖ್ಯ ಅಲ್ಲ. ಈ ದೇಶದ ಸಾಮರಸ್ಯ ಮುಖ್ಯ ಎಂದರು.

ದಲಿತರು ದೇವಸ್ಥಾನ ಪ್ರವೇಶಿಸಿದರೆ ಸಂಘರ್ಷ ಉಂಟು ಮಾಡುವ ಈ ಸಂದರ್ಭದಲ್ಲಿ ಅನ್ಯ ಧರ್ಮಕ್ಕೆ ಮತಾಂತರಗೊಂಡವರನ್ನು ವಾಪಾಸ್ ತರುವುದ ಕ್ಕಿಂತ ಅವರು ಅನ್ಯ ಧರ್ಮಕ್ಕೆ ಹೋಗದಂತ ಸಂದರ್ಭವನ್ನು ಸೃಷ್ಠಿ ಮಾಡುವುದು ಮುಖ್ಯವಾಗಿದೆ. ಯಾರು ಕೂಡ ಅನ್ಯ ಧರ್ಮಕ್ಕೆ ಹೋಗದಂತೆ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಈ ದೇಶದಲ್ಲಿ ಮತಾಂತರ ಎಂಬುದು ನಡೆಯಲು ಸಾಧ್ಯವೇ ಇಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ, ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆನೆಗುಂದಿ ಸಂಸ್ಥಾನದ ಶ್ರೀಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಕೇಮಾರು ಸ್ವಾಮೀಜಿ, ವಜ್ರದೇಹಿ ಸ್ವಾಮೀಜಿ ಮಾಣಿಲ ಸ್ವಾಮೀಜಿ, ಒಡಿಯೂರು ಸ್ವಾಮೀಜಿ ಮೊದಲಾದ ಸಂತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧರ್ಮಸಂಸದ್ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆ, ವಿಎಚ್‌ಪಿ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಜಿ. ಮಾತನಾಡಿದರು. ವಿಎಚ್‌ಪಿ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ಸ್ವಾಗತಿಸಿದರು. ವಿಲಾಸ್ ನಾಯಕ್ ವಂದಿಸಿದರು. ಇದಕ್ಕೂ ಮುನ್ನ ಜೋಡುಕಟ್ಟೆಯಿಂದ ಎಂಜಿಎಂ ಮೈದಾನದವರೆಗೆ ಶೋಭಾಯಾತ್ರೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X