Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ಬಂದರೆ ಮಲ್ಯ ನಿವಾಸವಾಗಲಿದೆ ಈ...

ಭಾರತಕ್ಕೆ ಬಂದರೆ ಮಲ್ಯ ನಿವಾಸವಾಗಲಿದೆ ಈ ಜೈಲು...

ವಾರ್ತಾಭಾರತಿವಾರ್ತಾಭಾರತಿ26 Nov 2017 10:14 PM IST
share
ಭಾರತಕ್ಕೆ ಬಂದರೆ ಮಲ್ಯ ನಿವಾಸವಾಗಲಿದೆ ಈ ಜೈಲು...

ಹೊಸದಿಲ್ಲಿ, ನ. 26: 9,000 ಕೋ.ರೂ.ಗಳ ಸಾಲವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ  ಮದ್ಯದ ದೊರೆ ವಿಜಯ ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡಿದರೆ ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗುವುದು.

ಭಾರತವು ಗಡಿಪಾರು ಪ್ರಕರಣದಲ್ಲಿ ತನ್ನ ಪರವಾಗಿ ಮಲ್ಯ ವಿರುದ್ಧ ವಾದಿಸುತ್ತಿರುವ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್‌ನ ಮೂಲಕ ಲಂಡನ್‌ನ ವೆಸ್ಟ್ ಮಿನ್‌ಸ್ಟರ್ ನ್ಯಾಯಾಲಯಕ್ಕೆ ಈ ವಿಷಯವನ್ನು ನಿವೇದಿಸಲಿದೆ ಎಂಂದು ಗೃಹ ಸಚಿವಾಲಯದ ಅಧಿಕಾರಿಯೋರ್ವರು ತಿಳಿಸಿದರು. ಕೈದಿಗಳ ಸುರಕ್ಷತೆಯನ್ನು ಕಾಯ್ದುಕೊಳ್ಳುವುದು ಸರಕಾರದ ಕರ್ತವ್ಯವಾಗಿದೆ ಮತ್ತು ತನ್ನ ಜೀವಕ್ಕೆ ಬೆದರಿಕೆಯಿದೆ ಎಂಬ ಮಲ್ಯರ ಭೀತಿ ದಾರಿ ತಪ್ಪಿಸುವಂಥದ್ದಾಗಿದೆ ಎಂದು ಭಾರತವು ನ್ಯಾಯಾಲಯಕ್ಕೆ ತಿಳಿಸಲಿದೆ.

ಭಾರತದಲ್ಲಿಯ ಜೈಲುಗಳು ವಿಶ್ವದ ಯಾವುದೇ ರಾಷ್ಟ್ರಗಳಷ್ಟೇ ಉತ್ತಮವಾಗಿವೆ ಮತ್ತು ಭಾರತದ ಜೈಲುಗಳಲ್ಲಿ ಕೈದಿಗಳ ಹಕ್ಕುಗಳಿಗೆ ಸಂಪೂರ್ಣ ರಕ್ಷಣೆಯಿದೆ ಎಂದೂ ನ್ಯಾಯಾಲಯಕ್ಕೆ ತಿಳಿಸಲಾಗುವುದು ಎಂದು ಅಧಿಕಾರಿ ಹೇಳಿದರು.

ವೆಸ್ಟ್ ಮಿನ್‌ಸ್ಟರ್ ನ್ಯಾಯಾಲಯವು ಡಿ.4ರಿಂದ ಗಡಿಪಾರು ಪ್ರಕರಣದ ವಿಚಾರಣೆಯನ್ನು ಆರಂಭಿಸಲಿದೆ.

ತನ್ನನ್ನು ಗಡಿಪಾರುಗೊಳಿಸಿದರೆ ತನಗೆ ಭಾರತದ ಜೈಲುಗಳಲ್ಲಿ ಸುರಕ್ಷತೆಯಿಲ್ಲ ಎಂಬ ಮಲ್ಯ ವಾದವನ್ನು ತಿರಸ್ಕರಿಸಿರುವ ಭಾರತವು ಮಲ್ಯರನ್ನು ಅಂತರರಾಷ್ಟ್ರೀಯ ಮಾನದಂಡಕ್ಕನುಗುಣವಾಗಿ ಗರಿಷ್ಠ ಭದ್ರತೆಯನ್ನು ಮತ್ತು ಸಾಕಷ್ಟು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಆರ್ಥರ್ ಜೈಲಿನಲ್ಲಿರಿಸಲಾಗುವುದು ಮತ್ತು ಅಲ್ಲಿ ಅವರಿಗೆ ಯಾವುದೇ ಬೆದರಿಕೆಯಿರುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಿದೆ.

ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ ಗಾಬಾ ಅವರು ಕಳೆದ ವಾರ ವಿವಿಧ ಅಧಿಕಾರಿಗಳ ಸಭೆ ಕರೆದು ಲಂಡನ್‌ನ ನ್ಯಾಯಾಲಯಕ್ಕೆ ಸಲ್ಲಿಸಬೇಕಾದ ಉತ್ತರಗಳ ಬಗ್ಗೆ ಚರ್ಚಿಸಿದ್ದರು.

2016,ಮಾರ್ಚ್‌ನಲ್ಲಿ ಭಾರತದಿಂದ ಬ್ರಿಟನ್‌ಗೆ ಪರಾರಿಯಾಗಿರುವ ಮಲ್ಯರನ್ನು ಎ.18ರಂದು ಗಡಿಪಾರು ವಾರಂಟ್‌ನಡಿ ಸ್ಕಾಟ್ಲಂಡ್ ಪೊಲೀಸರು ಬಂಧಿಸಿದ್ದರಾದರೂ, ನ್ಯಾಯಾಲಯದಲ್ಲಿ ಅವರಿಗೆ ತಕ್ಷಣ ಜಾಮೀನು ಲಭಿಸಿತ್ತು.

ವಿಚಾರಣೆಯು ಪೂರ್ಣಗೊಂಡು ನ್ಯಾಯಾಧೀಶರು ಗಡಿಪಾರು ಪರವಾಗಿ ತೀರ್ಪು ನೀಡಿದರೆ ಬ್ರಿಟನ್ ಗೃಹ ಕಾರ್ಯದರ್ಶಿಯು ಎರಡು ತಿಂಗಳಲ್ಲಿ ಮಲ್ಯರನ್ನು ಭಾರತಕ್ಕೆ ಗಡಿಪಾರುಗೊಳಿಸುವಂತೆ ಆದೇಶಿಸಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X