Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬಹುಜನ: ತಳಸ್ತರದ ಮುಂದಿರುವ ಸವಾಲುಗಳನ್ನು...

ಬಹುಜನ: ತಳಸ್ತರದ ಮುಂದಿರುವ ಸವಾಲುಗಳನ್ನು ಎತ್ತಿ ತೋರಿಸುವ ಕಾದಂಬರಿ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ27 Nov 2017 12:01 AM IST
share
ಬಹುಜನ: ತಳಸ್ತರದ ಮುಂದಿರುವ ಸವಾಲುಗಳನ್ನು ಎತ್ತಿ ತೋರಿಸುವ ಕಾದಂಬರಿ

ಡಾ.ಶರಣಕುಮಾರ ಲಿಂಬಾಳೆ ಅವರು ತಮ್ಮ ‘ಅಕ್ರಮ ಸಂತಾನ’ ಆತ್ಮಕತೆಯ ಮೂಲಕ, ಕನ್ನಡಿಗರಿಗೆ ಚಿರಪರಿಚಿತ. ಮಹಾರಾಷ್ಟ್ರದ ಈ ಸಾಹಿತಿಗಳು ಕನ್ನಡದ ದಲಿತ ಸಾಹಿತಿಗಳಿಗೆ, ಲೇಖಕರಿಗೆ ಬರೆವಣಿಗೆ ಹೊಸ ಮಾರ್ಗವನ್ನು ತೆರೆದುಕೊಟ್ಟವರು. ಇವರ ಸ್ಫೂರ್ತಿಯಿಂದ ಕನ್ನಡದಲ್ಲೂ ಹಲವು ದಲಿತ ಲೇಖಕರು ತಮ್ಮ ಆತ್ಮಕತೆಗಳನ್ನು ಬರೆದರು. ಇಲ್ಲಿ ಶರಣಕುಮಾರ ಲಿಂಬಾಳೆ ಅವರ ‘ಬಹುಜನ’ ಕಾದಂಬರಿಯಿದೆ. ಒಬ್ಬ ದಲಿತನ ಎಲ್ಲ ಕಾದಂಬರಿಗಳು ಒಂದಲ್ಲ ಒಂದು ರೀತಿ ಆತನ ಆತ್ಮಕತೆಯೇ ಆಗಿರುತ್ತದೆ. ಆದುದರಿಂದಲೇ ಬಹುಜನ, ಈ ನೆಲದ ತಳಸ್ತರದ ಬದುಕಿನ ಕತೆಯಾಗಿ ನಮ್ಮನ್ನು ಸೆಳೆಯುತ್ತದೆ. ಅಸ್ಪಶ್ಯ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಇಕ್ಕಟ್ಟು, ಬಿಕ್ಕಟ್ಟುಗಳನ್ನು ರಾಜಕೀಯ ನೆಲೆಯಲ್ಲಿ ಶೋಧಿಸುವ ಕೃತಿಯೂ ಇದಾಗಿದೆ. ಅನುವಾದಕರು ಹೇಳುವಂತೆ, ಹಿಂದುತ್ವದ ಗಟ್ಟಿ ತಳಹದಿಯಲ್ಲಿ ನಿಂತ ಹಿಂದುತ್ವವಾದಿ ಶಕ್ತಿಗಳು ಹಾಗೂ ಹಿಂದೂಧರ್ಮದ ಆಧ್ಯಾತ್ಮಿಕ ನೇತೃತ್ವವನ್ನು ವಹಿಸಿರುವ ಸಾಧುಸನ್ಯಾಸಿಗಳಲ್ಲಿರುವ ಅಸಂಗತಗಳು, ಮಂದಿರ ಮಠಗಳಲ್ಲಿರುವ ಸಾಧು ಸನ್ಯಾಸಿಗಳ ರಾಜಕೀಯ ಅಪರಿಪಕ್ವತೆ ಹಾಗೂ ಹಿಂದೂಗಳು ಯಾವ ಧರ್ಮವನ್ನು ಅನುಸರಿಸುತ್ತಾರೋ ಆ ಧರ್ಮದ ಜಾತಿ ವ್ಯವಸ್ಥೆಯ ಪೊಳ್ಳುತನ, ದಲಿತ ಚಳವಳಿಯ ವೈಫಲ್ಯ, ಅಧಿಕಾರ ಮತ್ತು ಸ್ವಾರ್ಥಕಾರಣದ ಟೊಳ್ಳುತನ, ರಾಜಕೀಯ ಅಪರಾಧ, ಭ್ರಷ್ಟಾಚಾರ, ಸಂಪತ್ತಿನ ದುರ್ವ್ಯಯ ಇತ್ಯಾದಿ ವಿಚಾರಗಳನ್ನು ಈ ಕೃತಿ ದಾಖಲಿಸುತ್ತದೆ. ಈ ಕಾದಂಬರಿಗೆ ಒಂದು ರಾಜಕೀಯ ಉದ್ದೇಶವಿದೆ ಎನ್ನುವುದನ್ನು ಕಾದಂಬರಿಯ ಹೆಸರಿನಿಂದಲೇ ನಮ್ಮದಾಗಿಸಿಕೊಳ್ಳಬಹುದು. ಭಾವನೆ, ಶ್ರದ್ಧೆ, ಮೂಲಭೂತ ಅಧಿಕಾರ, ಹಕ್ಕುಗಳು ಮತ್ತು ಸುರಕ್ಷತೆಗೆ ಮನುಷ್ಯ ಎಷ್ಟು ಮಹತ್ವವನ್ನು ನೀಡುತ್ತಾನೆಂಬುದು ಈ ಕಾದಂಬರಿಯಲ್ಲಿ ಸ್ಪಷ್ಟವಾಗಿ ನಿರೂಪಿಸಲ್ಪಟ್ಟಿದೆ. ಕಲಾ ಮಾಧ್ಯಮದ ಮೂಲಕ ಕಲೆಗೆ ಹೊರತಾದ ವಿಚಾರಗಳನ್ನು ಸಮಾಲೋಚಿಸುವುದು ಎಷ್ಟು ಸರಿ ? ಎನ್ನುವ ಪ್ರಜ್ಞೆಯನ್ನು ಇಟ್ಟುಕೊಂಡೇ ಕಾದಂಬರಿಯನ್ನು ಬರೆದಿರುವ ಲೇಖಕರು, ಸಮಾಜದ ಮೇಲಿನ ಖಂಡವನ್ನು ಕೆಳಗೂ, ಕೆಳಗಿನದನ್ನು ಮೇಲೂ ಸಾಗಿಸಲು ಕಲಾರೂಪಿ ನೌಕೆಯನ್ನು ಉಪಯೋಗಿಸುವ ಅಗತ್ಯವಿದೆ ಎಂದು ಮುನ್ನುಡಿಯಲ್ಲಿ ಅಭಿಪ್ರಾಯಪಡುತ್ತಾರೆ. ಮರಾಠಿಯಲ್ಲಿ ಈ ಕಾದಂಬರಿಯನ್ನು ಬರೆಯಲಾಗಿದೆಯಾದರೂ, ಹಿಂದಿ ಅನುವಾದದಿಂದ ಕನ್ನಡಕ್ಕಿಳಿಸಲಾಗಿದೆ. ಡಾ. ಪ್ರಮೀಳಾ ಮಾಧವ್ ಕೃತಿಯನ್ನು ಅನುವಾದಿಸಿದ್ದಾರೆ.

share
-ಕಾರುಣ್ಯ
-ಕಾರುಣ್ಯ
Next Story
X