Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ 600 ಕೋ.ರೂ.ಭೂ ಹಗರಣ...

ದಿಲ್ಲಿಯಲ್ಲಿ 600 ಕೋ.ರೂ.ಭೂ ಹಗರಣ ಬೆಳಕಿಗೆ: ಸಿಬಿಐ ತನಿಖೆಗೆ ಕೋರಿದ ಉಪ ರಾಜ್ಯಪಾಲ

ವಾರ್ತಾಭಾರತಿವಾರ್ತಾಭಾರತಿ27 Nov 2017 8:33 PM IST
share
ದಿಲ್ಲಿಯಲ್ಲಿ 600 ಕೋ.ರೂ.ಭೂ ಹಗರಣ ಬೆಳಕಿಗೆ: ಸಿಬಿಐ ತನಿಖೆಗೆ ಕೋರಿದ ಉಪ ರಾಜ್ಯಪಾಲ

ಹೊಸದಿಲ್ಲಿ,ನ.27: ಸರಕಾರಿ ಅಧಿಕಾರಿಗಳು ನಕಲಿ ನ್ಯಾಯಾಲಯ ಆದೇಶಗಳನ್ನು ಬಳಸಿ ಸುಳ್ಳು ಭೂ ದಾಖಲೆಗಳನ್ನು ಸೃಷ್ಟಿಸಿ ಆಯಕಟ್ಟಿನ ಪ್ರದೇಶಗಳಲ್ಲಿರುವ 600 ಕೋ.ರೂ.ಗೂ ಅಧಿಕ ವೌಲ್ಯದ ಕನಿಷ್ಠ 30 ಎಕರೆ ಸರಕಾರಿ ಭೂಮಿಯನ್ನು ಜುಜುಬಿ ಬೆಲೆಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಹಗರಣವು ಬೆಳಕಿಗೆ ಬಂದಿದ್ದು, ದಿಲ್ಲಿಯ ಉಪ ರಾಜ್ಯಪಾಲ ಅನಿಲ ಬೈಜಾಲ್ ಅವರು ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಸಿಬಿಐ ಅನ್ನು ಕೇಳಿಕೊಂಡಿದ್ದಾರೆ.

ಬಹುಶಃ ರಾಜಧಾನಿಯಲ್ಲಿನ ಅತ್ಯಂತ ದೊಡ್ಡ ಭೂ ಹಗರಣವಾಗಿರುವ ಈ ಪ್ರಕರಣದಲ್ಲಿ ದಕ್ಷಿಣ ದಿಲ್ಲಿಯ ಅಸೋಲಾ ಗ್ರಾಮದಲ್ಲಿನ ಕನಿಷ್ಠ ಮೂರು ನಿವೇಶನಗಳನ್ನು ಅವುಗಳ ಮಾರುಕಟ್ಟೆ ಬೆಲೆಗಳ ಶೇ.5ಕ್ಕೂ ಕಡಿಮೆ ಬೆಲೆಗಳಿಗೆ ಮಾರಾಟ ಮಾಡಲಾಗಿದೆ ಎಂದು ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿರುವ ಆಂಗ್ಲ ದೈನಿವೊಂದು ವರದಿ ಮಾಡಿದೆ. ಕಳೆದ ಒಂದು ವರ್ಷದಿಂದ ಈ ಭೂ ಹಗರಣ ಅನಾವರಣಗೊಳ್ಳುತ್ತ ಬಂದಿದೆ.

ದಾಖಲೆಗಳಲ್ಲಿ ಹಸ್ತಕ್ಷೇಪ ನಡೆಸಲಾಗಿರುವ 13 ನಿವೇಶನಗಳ ಪ್ರಕರಣ ವಿವರಗಳನ್ನು ಸಲ್ಲಿಸುವಂತೆಯೂ ಬೈಜಾಲ್ ಅವರು ಕಳೆದ ವಾರ ದಿಲ್ಲಿ ಸರಕಾರದ ಕಂದಾಯ ಇಲಾಖೆಗೆ ಸೂಚಿಸಿದ್ದರು. ಇಂತಹ ವಂಚನೆಗಳನ್ನು ಪತ್ತೆ ಹಚ್ಚಲು ಎಲ್ಲ ಸರಕಾರಿ ನಿವೇಶನಗಳ ದಾಖಲೆಗಳನ್ನು ಪರಿಶೀಲಿಸುವಂತೆ ದಿಲ್ಲಿ ವಿಭಾಗೀಯ ಆಯುಕ್ತ ಮನೀಷಾ ಸಕ್ಸೇನಾ ಅವರು ನಗರದಲ್ಲಿಯ ಎಲ್ಲ ದಂಡಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ಬೆಳಕಿಗೆ ಬಂದಿರುವ ಎಲ್ಲ ಪ್ರಕರಣಗಳಲ್ಲಿ ಭೂಮಿಯು ಗ್ರಾಮಸಭಾಗಳಿಗೆ ಸೇರಿದ್ದು, ದಿಲ್ಲಿ ಸರಕಾರದ ಅಧೀನದ್ದಾಗಿದೆ. ಉಪ ವಿಭಾಗೀಯ ದಂಡಾಧಿಕಾರಿಗಳ ಕಚೇರಿಯಲ್ಲಿಯ ಭೂ ದಾಖಲೆಗಳನ್ನು ತಿರುಚಲು ನಕಲಿ ನ್ಯಾಯಾಲಯ ಆದೇಶಗಳನ್ನು ಬಳಸಿಕೊಂಡು ಈ ನಿವೇಶನಗಳನ್ನು ಪರಭಾರೆ ಮಾಡಲಾಗಿದೆ.

ಅಸೋಲಾದಲ್ಲಿ ಭೂಮಿಯನ್ನು ಹೇಗೆ ಹಂಚಲಾಗಿತ್ತು ಎನ್ನುವುದಕ್ಕೆ ಏಕೈಕ ಭೌತಿಕ ಸಾಕ್ಷವಾಗಿದ್ದ ಸಾಕೇತ್‌ನ ಉಪ ವಿಭಾಗೀಯ ದಂಡಾಧಿಕಾರಿಗಳ ಕಚೇರಿಯಲ್ಲಿನ 1908ರಷ್ಟು ಹಿಂದಿನ ಕ್ಯಾನ್ವಾಸ್ ನಕಾಶೆಯ ಭಾಗಗಳನ್ನು ಹರಿದು ಹಾಕಲಾಗಿದ್ದು, ಇದರಲ್ಲಿ ಹಗರಣದ ರೂವಾರಿಗಳ ಕೈವಾಡವನ್ನು ಶಂಕಿಸಲಾಗಿದೆ.

ಅಸೋಲಾದಲ್ಲಿ ಒಂದು ಎಕರೆ ಭೂಮಿಗೆ 20 ಕೋ.ರೂ.ಗಳಷ್ಟು ಮಾರುಕಟ್ಟೆ ಬೆಲೆಯಿದೆ. ಆಂಗ್ಲ ದೈನಿಕದ ಬಳಿಯಿರುವ ಮೂರು ನಿವೇಶನಗಳ ಕ್ರಯಪತ್ರದ ಪ್ರತಿಗಳಂತೆ ಇವುಗಳನ್ನು ಪ್ರತಿ ಎಕರೆಗೆ ಒಂದು ಕೋ.ರೂ.ಗೂ ಕಡಿಮೆ ಬೆಲೆಗೆ ಮಾರಾಟ ಮಾಡಲಾಗಿದೆ.

ಭೂ ದಾಖಲೆಗಳನ್ನು ತಿರುಚಿರುವುದನ್ನು ದಿಲ್ಲಿ ಕಂದಾಯ ಸಚಿವ ಕೈಲಾಷ್ ಗಹ್ಲೋಟ್ ಅವರು ದೃಢಪಡಿಸಿದ್ದಾರೆ. ಕಂದಾಯ ಇಲಾಖಾ ಸಿಬ್ಬಂದಿಗಳ ಕೈವಾಡವಿದೆಯೇ ಎನ್ನುವುದನ್ನು ಪತ್ತೆ ಹಚ್ಚಲು ನಿರ್ದಿಷ್ಟ ಪ್ರಕರಣಗಳನ್ನು ಪರಿಶೀಲನೆಗೊಳಪಡಿಸಲಾಗಿದೆ. ಎಲ್ಲ ಗ್ರಾಮಸಭಾಗಳ ಭೂಮಿಯ ನಕಾಶೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದರು.

ಸರಕಾರದ ವಾರ್ಷಿಕ ಆಸ್ತಿಗಳ ಸರ್ವೆ ಸಂದರ್ಭ ಈ ಹಗರಣ ಬೆಳಕಿಗೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X