Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಸರ ಮಾಲಿನ್ಯ ಅಪಾಯದ ಗಡಿ ಮೀರಿದೆ:...

ಪರಿಸರ ಮಾಲಿನ್ಯ ಅಪಾಯದ ಗಡಿ ಮೀರಿದೆ: ನಿಸಾರ್ ಅಹ್ಮದ್

ಗಣಿಗಾರಿಕೆ ಕುರಿತ ಛಾಯಾಚಿತ್ರಗಳ ಪ್ರದರ್ಶನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Nov 2017 9:00 PM IST
share
ಪರಿಸರ ಮಾಲಿನ್ಯ ಅಪಾಯದ ಗಡಿ ಮೀರಿದೆ: ನಿಸಾರ್ ಅಹ್ಮದ್

ಬೆಂಗಳೂರು, ನ.27: ದೇಶದಲ್ಲಿ ಗಣಿಗಾರಿಕೆ, ವಾಯು, ಜಲ ಮಾಲಿನ್ಯ ಸೇರಿದಂತೆ ಇಡೀ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳು ಅಪಾಯದ ಗಡಿಯನ್ನು ಮೀರಿದೆ. ಇದು ಹೀಗೆಯೇ ಮುಂದುವರೆದರೆ ಮುಂದಿನ 50ವರ್ಷಗಳಲ್ಲಿ ಕರ್ನಾಟಕವು ಸೇರಿದಂತೆ ಬಹುತೇಕ ರಾಜ್ಯಗಳು ಮರುಭೂಮಿಯಾಗಿ ಪರಿವರ್ತನೆಗೊಳ್ಳಲಿವೆ ಎಂದು ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹ್ಮದ್ ಆತಂಕ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಂಗಳೂರು ಜನಜಾಗೃತಿ ಸಾಮಾಜಿಕ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಬಳ್ಳಾರಿಯ ಸಂಡೂರು ಸುತ್ತಮುತ್ತಲು ನಡೆದಿರುವ ‘ಗಣಿಗಾರಿಕೆ ಕುರಿತ ಛಾಯಾಚಿತ್ರಗಳ ಪ್ರದರ್ಶನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಳ್ಳಾರಿಯ ಸಂಡೂರಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ದೃಶ್ಯಗಳನ್ನು ನೋಡಿದರೆ ‘ಭೂ ಮಾತೆ’ ರಕ್ತ ಕಾರಿಕೊಂಡು ರೋದಿಸುತ್ತಿದ್ದಾಳೆ ಅನಿಸುತ್ತಿದೆ. ಸ್ವಚ್ಛಂದವಾಗಿ ಹಚ್ಚ ಹಸಿರಿನಿಂದ ಕೂಡಿದ್ದ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಲಾಗುತ್ತಿದೆ. ಗಣಿಗಾರಿಕೆಯ ನೆಪದಲ್ಲಿ ಭೂಮಿಯ ಮೇಲೆ ಅತ್ಯಾಚಾರವೇ ನಡೆಯುತ್ತಿದೆ ಎಂದರೆ ತಪ್ಪಾಗಲಾರದು ಎಂದು ಅವರು ವಿಷಾದಿಸಿದರು.

ಭೂಮಿಯ ಒಳಗಿರುವ ಶಿಲೆಗಳು ಹಾಗೂ ಅದಿರಿನ ಸಂಪತ್ತು ಕೋಟ್ಯಂತರ ವರ್ಷಗಳ ಉತ್ಪತ್ತಿಯ ಪ್ರತಿಫಲವಾಗಿದೆ. ಆದರೆ, ಆಧುನಿಕ ಮನುಷ್ಯನ ಸ್ವಾರ್ಥ ಬುದ್ಧಿಯಿಂದಾಗಿ ಕೆಲವೇ ವರ್ಷಗಳಲ್ಲಿ ಭೂಮಿಯ ಸಂಪತ್ತು ಬಗೆಯಲು ಪ್ರಾರಂಭಿಸಿದ್ದಾನೆ. ಇದರಿಂದ ಇಡೀ ಭೂ ಮಂಡಲವೇ ಅಪಾಯಕ್ಕೆ ಸಿಲುಕುವ ಅಪಾಯವಿದೆ ಎಂದು ಅವರು ಎಚ್ಚರಿಕೆ ನೀಡಿದರು.

ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು: ದೇಶವನ್ನು ಸರ್ವ ರೀತಿಯಿಂದಲೂ ಸಂರಕ್ಷಿಸುತ್ತೇವೆಂದು ಅಧಿಕಾರದ ಚುಕ್ಕಾಣಿ ಹಿಡಿಯುವ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ. ದೇಶದ ಇಡೀ ಪರಿಸರವೇ ಅಪಾಯದ ತುತ್ತುತುದಿ ತಲುಪಿದ್ದರೂ ಏನು ಆಗಿಲ್ಲವೆಂಬಂತೆ ನಿಶ್ಚಿತವಾಗಿದ್ದಾರೆ. ಈ ಕುರಿತು ಜನಪ್ರತಿನಿಧಿಗಳಿಗೆ ನಾಚಿಕೆ, ಮಾನ ಮರ್ಯಾದೆ ಇದ್ದಿದ್ದರೆ, ನಮ್ಮ ಸುತ್ತಮುತ್ತಲ ಪರಿಸರದ ಕುರಿತು ಕನಿಷ್ಠ ಮಟ್ಟದ ಕಾಳಜಿ ಆದರೂ ಇರುತ್ತಿತ್ತು ಎಂದು ಅವರು ಕಿಡಿಕಾರಿದರು.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಎಸ್.ಆರ್.ಹಿರೇಮಠ್ ಮಾತನಾಡಿ, ಬಿಜೆಪಿ ಆಡಳಿತಾವಧಿಯಲ್ಲಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಉತ್ತುಂಗಕ್ಕೇರಿತ್ತು. ಅದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದರು. ಅದಾದ ನಂತರ ಅಧಿಕಾರಕ್ಕೇರಿದ ಕಾಂಗ್ರೆಸ್ ನಾಯಕರು ಗಣಿಗಾರಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಚಿತ್ರಕಲಾ ಪ್ರದರ್ಶನದಲ್ಲಿ ಛಾಯಾಗ್ರಾಹಕ ಸುಧೀರ್ ಶೆಟ್ಟಿ, ಹಿರಿಯ ವಕೀಲ ಬಾಲನ್ ಸೇರಿದಂತೆ ಮತ್ತಿತರರಿದ್ದರು.

'ಭ್ರಷ್ಟಾಚಾರದ ಆನೆಗೆ ಇರುವೆಗಳು ಮುತ್ತಿಕೊಳ್ಳಲಿ'
ನಮ್ಮ ಭ್ರಷ್ಟಾಚಾರದ ವ್ಯವಸ್ಥೆ ಆನೆಯಂತೆ ಬೃಹದಾಕಾರವಾಗಿದೆ. ಅದಕ್ಕೆ ಹೋರಾಟಗಾರನೆಂಬ ಒಂದು ಇರುವೆ ಕಚ್ಚಿದರೆ ಏನೂ ಆಗುವುದಿಲ್ಲ. ಆದರೆ, ‘ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು’ ಅನ್ನುವ ಹಾಗೆ ಭ್ರಷ್ಟಾಚಾರದ ಆನೆಗೆ ಹೋರಾಟಗಾರರೆಂಬ ಸಾವಿರಾರು ಇರುವೆಗಳು ಮುತ್ತಿಕೊಂಡು ಭ್ರಷ್ಟಾಚಾರವನ್ನು ಸರ್ವನಾಶ ಮಾಡಬೇಕಿದೆ.
-ಕೆ.ಎಸ್.ನಿಸಾರ್ ಅಹ್ಮದ್, ಹಿರಿಯ ಸಾಹಿತಿ

ಪುರಾತತ್ವ ಇಲಾಖೆಗೆ ಸಂಬಂಧಿಸಿದ ದೇವಸ್ಥಾನಗಳು ಸೇರಿದಂತೆ ಪುರಾತನ ಕಟ್ಟಡಗಳ ಸುತ್ತ ಸುಮಾರು 2 ಕಿ.ಮೀ. ಒಳಗಡೆ ಯಾವುದೇ ರೀತಿಯ ಗಣಿಗಾರಿಕೆ ಮಾಡಬಾರದೆಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಾನೂನು ಜಾರಿ ಮಾಡಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾನೂನನ್ನು ಸಡಿಲಗೊಳಿಸಿ 2ಕಿ.ಮೀ. ನಿಂದ 300ಮೀಟರ್‌ಗೆ ಇಳಿಸಿದ್ದಾರೆ. ಇದರಿಂದ ಸಂಡೂರಿನಲ್ಲಿರುವ ಕುಮಾರಸ್ವಾಮಿ ದೇವಸ್ಥಾನಕ್ಕೆ ಸಾಕಷ್ಟು ಹಾನಿಯಾಗುತ್ತಿದೆ.

-ಎಸ್.ಆರ್.ಹಿರೇಮಠ್ ಮುಖಂಡ, ಭ್ರಷ್ಟಾಚಾರ ವಿರೋಧಿ ವೇದಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X